ಕೋವಿಡ್ ವೈರಸ್ 25 ಬಗೆಯ ರೂಪಾಂತರಿಗಳನ್ನು ಹೊಂದಿದೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಲಸಿಕೆ ಪಡೆಯಿರಿ, ಸುರಕ್ಷತಾ ಕ್ರಮ ಪಾಲಿಸಿ, 45 ಲಕ್ಷ ಜನರು ಎರಡನೇ ಡೋಸ್ ಪಡೆಯಲು ಬಾಕಿ

Team Udayavani, Nov 27, 2021, 6:03 PM IST

dr-sudhakar

ಬೆಂಗಳೂರು: ಕೋವಿಡ್ ನ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣುವಿನ ಹರಡುವಿಕೆಗೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಕೋವಿಡ್ ಲಸಿಕೆಯನ್ನು ಎಲ್ಲರೂ ಪಡೆಯುವುದರೊಂದಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದಕ್ಷಿಣ ಆಫ್ರಿಕಾ, ಬೋಟ್ಸ್ವಾನ, ಇಸ್ರೇಲ್, ಹಾಂಗ್ ಕಾಂಗ್ ಮೊದಲಾದ ದೇಶಗಳಲ್ಲಿ ಕಳೆದೊಂದು ವಾರದಿಂದ ಕೋವಿಡ್ ಹೊಸ ರೂಪಾಂತರಿ ವೈರಾಣು ಕಾಣಿಸಿದೆ. ಆದರೆ ರಾಜ್ಯದಲ್ಲಿ ಎಲ್ಲೂ ಇದು ಕಂಡುಬಂದಿಲ್ಲ. ಇದಕ್ಕಾಗಿ ನಿನ್ನೆ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ವಹಿಸಲು ಮಾರ್ಗಸೂಚಿ ರೂಪಿಸಿ ಬಿಡುಗಡೆ ಮಾಡಲಾಗಿದೆ. ಹೊಸ ವೈರಾಣು ಕಂಡುಬಂದಿರುವ ದೇಶಗಳಿಂದ ರಾಜ್ಯದ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಕೋವಿಡ್ ವರದಿ ತಂದಿದ್ದರೂ ಕೂಡ, ಅವರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲಾಗುವುದು. ಅವರಿಗೆ ನೆಗೆಟಿವ್ ಬಂದರೆ ಮನೆಯಲ್ಲೇ ಒಂದು ವಾರ ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುವುದು. ಈ ಸಮಯದಲ್ಲಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗುವುದು. ಏಳು ದಿನಗಳ ಬಳಿಕ ಮತ್ತೆ ಪರೀಕ್ಷೆ ಮಾಡಲಾಗುವುದು. ಅವರಿಗೆ ರೋಗದ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ದಾಖಲಿಸಲಾಗುವುದು. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.

ವಿಮಾನ ನಿಲ್ದಾಣಗಳಲ್ಲಿ ಕ್ರಮ ವಹಿಸುವ ಬಗ್ಗೆ ಮಾರ್ಗಸೂಚಿ ನೀಡಲಾಗಿದೆ. ನಮ್ಮ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೂ ಅಲ್ಲಿ ನಿಯೋಜಿಸಲಾಗಿದೆ. ಹೊಸ ವೈರಾಣು ಹರಡುವ ವೇಗ ಹೆಚ್ಚಿದೆ ಎಂದು ತಿಳಿದುಬಂದಿದೆ. ಆದರೆ ಇದ ತೀವ್ರತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದ್ದರಿಂದ ಹೆಚ್ಚು ಆತಂಕಪಡಬೇಕಿಲ್ಲ. ನಮ್ಮ ದೇಶದಲ್ಲಿ ಈ ರೀತಿಯ ಹೊಸ ವೈರಾಣು ಕಂಡುಬಂದಿಲ್ಲ. ಎಲ್ಲರೂ ಕೋವಿಡ್ ನ ಎರಡೂ ಡೋಸ್ ಗಳನ್ನು ಪಡೆಯಬೇಕು. ಕಡ್ಡಾಯವಾಗಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ಜನರು ಅನುಸರಿಸಬೇಕು ಎಂದರು.

ಧಾರವಾಡದ ಕಾಲೇಜಿನಲ್ಲಿ ಸಮಾರಂಭ ನಡೆದ ವೇಳೆ ಕೋವಿಡ್ ಹರಡಿದೆ ಎನ್ನಲಾಗಿದೆ. ಸುಮಾರು 2,000 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 281 ವಿದ್ಯಾರ್ಥಿಗಳ ಮಾದರಿ ಪಾಸಿಟಿವ್ ಆಗಿದೆ. ಇನ್ನೂ ಹಲವರ ಪರೀಕ್ಷಾ ವರದಿ ಇನ್ನೂ ಬರಬೇಕಿದೆ. ಆದರೆ ಪಾಸಿಟಿವ್ ಆದವರಿಗೂ ಹೆಚ್ಚು ತೀವ್ರತೆ ಇಲ್ಲ. ಇದರಲ್ಲಿ ಕೆಲವನ್ನು ಜಿನೋಮಿಕ್ ಸೀಕ್ವೆನ್ಸಿಂಗ್ ಗೆ ಕಳುಹಿಸಲಾಗುವುದು. ಡಿಸೆಂಬರ್ ಆರಂಭದಲ್ಲಿ ಈ ಪರೀಕ್ಷಾ ವರದಿ ನಿರೀಕ್ಷಿಸಲಾಗಿದೆ ಎಂದರು.

ಎರಡನೇ ಡೋಸ್ ಪಡೆಯಿರಿ

ರಾಜ್ಯದಲ್ಲಿ 45 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ. ಅವರೆಲ್ಲರೂ ಲಸಿಕೆ ಪಡೆಯಬೇಕು. ಲಸಿಕೆ ಪಡೆಯುವ ವಿಚಾರದಲ್ಲಿ ಯಾರೂ ಉದಾಸೀನ ಮಾಡಬಾರದು. ಒಬ್ಬರಿಗೆ ಕೊರೊನಾ ಬಂದರೆ ಅದು ಇಡೀ ಕುಟುಂಬಕ್ಕೆ ಬರುವ ಸಾಧ್ಯತೆ ಇರುವುದರಿಂದ ಲಸಿಕೆ ಪಡೆಯಬೇಕು. ಮೂರನೇ ಅಲೆ ಬಂದಾಗ ಲಸಿಕೆ ಪಡೆಯದವರಿಗೆ ಸಮಸ್ಯೆಯಾಗಬಹುದು. ದೇಶದಲ್ಲಿ ಮೊದಲ ಡೋಸ್ ಸರಾಸರಿ ಶೇ.80 ಇದ್ದರೆ, ರಾಜ್ಯದಲ್ಲಿ ಶೇ.90 ಕ್ಕೂ ಅಧಿಕವಾಗಿದೆ. ಎರಡನೇ ಡೋಸ್ ನಲ್ಲಿ ದೇಶದ ಸರಾಸರಿ ಶೇ.42-43 ಇದ್ದು, ರಾಜ್ಯದಲ್ಲಿ ಶೇ.57 ಇದೆ. ಜನರು ಸ್ವಯಂಪ್ರೇರಿತರಾಗಿ ಲಸಿಕೆ ಪಡೆಯಬೇಕು ಎಂದರು.

ಸೋಮವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ನಂತರ ಚರ್ಚೆ ನಡೆಸಿ ಅಗತ್ಯ ಕ್ರಮ ವಹಿಸಲಾಗುವುದು. ಕಳೆದೆರಡು ವರ್ಷದಿಂದ ಅನೇಕ ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ರಾಜ್ಯ ಸರ್ಕಾರ ಕೂಡ ಕೋವಿಡ್ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಆದರೆ ಬೇರೆ ದೇಶಗಳಲ್ಲಿ ಹೊಸ ವೈರಾಣು ಕಂಡುಬಂದಿರುವುದರಿಂದ ಪ್ರಧಾನಿಗಳು ಸಭೆ ನಡೆಸಲಿದ್ದಾರೆ ಎಂದರು.

25 ರೂಪಾಂತರಿ

ಕೋವಿಡ್ ವೈರಸ್ 25 ಬಗೆಯ ರೂಪಾಂತರಿಗಳನ್ನು ಹೊಂದಿದೆ ಎಂದು ತಜ್ಞರೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಬೇಕಿದೆ. ಈಗ ಕಂಡುಬಂದಿರುವ ಹೊಸ ವೈರಾಣು ಬಗ್ಗೆಯೂ ಅಧ್ಯಯನಗಳಾಗುತ್ತಿದೆ. ಹೊಸ ವೈರಾಣುವಿನ ಮೇಲೆ ಈಗಿನ ಲಸಿಕೆ ಎಷ್ಟು ಪರಿಣಾಮಕಾರಿ ಎಂಬುದರ ಬಗ್ಗೆಯೂ ಅಧ್ಯಯನಗಳು ನಡೆಯಬೇಕಿದೆ. ಆದರೂ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕಿದೆ. ಜೊತೆಗೆ ಸುರಕ್ಷತಾ ನಿಯಮ ಪಾಲಿಸಬೇಕಿದೆ. ವಿಶ್ವ ಆರೋಗ್ಯ ಸಂಸ್ಥೆ ಈ ವೈರಾಣುಗೆ ಓಮಿಕ್ರಾನ್ ಎಂಬ ಹೆಸರು ನೀಡಿದ್ದಾರೆ. ಇದು ಎಷ್ಟು ತೀವ್ರತೆ ಹೊಂದಿದೆ ಎಂಬ ಬಗ್ಗೆಯೂ ಅಧ್ಯಯನ ನಡೆಯುತ್ತಿದೆ ಎಂದರು.

ಔಷಧಿ ಖರೀದಿ

ಔಷಧಿ ಖರೀದಿ ಕುರಿತು ಸಭೆ ನಡೆಸಲಾಗಿದೆ. ಔಷಧಿಗಾಗಿ ಸುಮಾರು 38 ಕೋಟಿ ರೂ. ಅನ್ನು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನೀಡಲಾಗಿದೆ. ಕೋವಿಡ್ ನಿಂದಾಗಿ ಜನರಲ್ ಔಷಧಿಗಳನ್ನು ಖರೀದಿಸುವುದು ಈ ವರ್ಷ ಸ್ವಲ್ಪ ವಿಳಂಬವಾಗಿದೆ. ಕೋರ್ಟ್ ನಲ್ಲೂ ಪ್ರಕರಣ ಇದ್ದಿದ್ದರಿಂದ ಕೆಲ ಟೆಂಡರ್ ಗಳೂ ಆಗಿರಲಿಲ್ಲ. ಸ್ಥಳೀಯವಾಗಿಯೇ ಔಷಧಿ ಖರೀದಿಸಲು ಹಣ ನೀಡಲಾಗಿದೆ. ತಾಲೂಕು, ಜಿಲ್ಲಾಸ್ಪತ್ರೆ ಎಲ್ಲ ಆಸ್ಪತ್ರೆಗಳಲ್ಲಿ ಎರಡು ಮೂರು ದಿನಗಳಲ್ಲಿ ಔಷಧಿ ದೊರೆಯಲಿದೆ. ಯಾವುದೇ ಕೊರತೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.

ಟಾಪ್ ನ್ಯೂಸ್

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.