ಅದಾನಿ ವಿಚಾರ: ಬಿಲಿಯನೇರ್ ಜಾರ್ಜ್ ಸೊರೊಸ್ ರಿಗೆ ತಿರುಗೇಟು ನೀಡಿದ ಬಿಜೆಪಿ
ಹೇಳಿಕೆ ಭಾರತದ ಮೇಲಿನ ದಾಳಿ
Team Udayavani, Feb 17, 2023, 2:05 PM IST
ನವದೆಹಲಿ : ಉದ್ಯಮಿ ಗೌತಮ್ ಅದಾನಿ ಅವರ ಸಂಕಷ್ಟದಿಂದ ಪ್ರಧಾನಿ ನರೇಂದ್ರ ಮೋದಿ ದುರ್ಬಲರಾಗಲಿದ್ದಾರೆ ಎಂದು ಭವಿಷ್ಯ ನುಡಿದಿದ್ದ ಬಿಲಿಯನೇರ್ ಜಾರ್ಜ್ ಸೊರೊಸ್ ವಿರುದ್ಧ ಬಿಜೆಪಿ ಶುಕ್ರವಾರ ವಾಗ್ದಾಳಿ ನಡೆಸಿದೆ.
ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು “ಭಾರತದ ಪ್ರಜಾಪ್ರಭುತ್ವ ಪ್ರಕ್ರಿಯೆಗಳಲ್ಲಿ ಮಧ್ಯಪ್ರವೇಶಿಸಲು ಪ್ರಯತ್ನಿಸುವ ವಿದೇಶಿ ಶಕ್ತಿಗಳಿಗೆ” ಒಗ್ಗಟ್ಟಾಗಿ ಪ್ರತಿಕ್ರಿಯಿಸುವಂತೆ ಭಾರತೀಯರಿಗೆ ಕರೆ ನೀಡಿದ್ದಾರೆ, ಅವರ ಹೇಳಿಕೆಯನ್ನು “ಭಾರತದ ಮೇಲಿನ ದಾಳಿ” ಎಂದು ಕಿಡಿ ಕಾರಿದ್ದಾರೆ.
“ಇಂದು, ಒಬ್ಬ ನಾಗರಿಕನಾಗಿ, ತನ್ನ ವೈಯಕ್ತಿಕ ಲಾಭಗಳಿಗಾಗಿ ನಮ್ಮ ಪ್ರಜಾಪ್ರಭುತ್ವದ ಹಿತಾಸಕ್ತಿಗಳನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿರುವ ಈ ವ್ಯಕ್ತಿಯ ಉದ್ದೇಶವನ್ನು ಖಂಡಿಸಲು ನಾನು ಪ್ರತಿಯೊಬ್ಬ ವ್ಯಕ್ತಿ, ಸಂಸ್ಥೆ ಮತ್ತು ಸಮಾಜಕ್ಕೆ ಕರೆ ನೀಡುತ್ತೇನೆ” ಎಂದು ಸ್ಮೃತಿ ಇರಾನಿ ಹೇಳಿದ್ದಾರೆ.
ಅದಾನಿ ಅವರ ಮೇಲಿನ ಆರೋಪಗಳ ಕುರಿತು ವಿದೇಶಿ ಹೂಡಿಕೆದಾರರು ಮತ್ತು ಸಂಸತ್ತಿನ “ಪ್ರಶ್ನೆಗಳಿಗೆ ಪ್ರಧಾನಿ ಮೋದಿ ಉತ್ತರಿಸಬೇಕಾಗುತ್ತದೆ” ಎಂದು ಸೊರೊಸ್ ಗುರುವಾರ ಹೇಳಿದ್ದರು. ಅದಾನಿ ಗ್ರೂಪ್ ಕಂಪನಿಗಳು ಸ್ಟಾಕ್ ಮ್ಯಾನಿಪ್ಯುಲೇಷನ್ ಮತ್ತು ಅಕೌಂಟಿಂಗ್ ವಂಚನೆಯನ್ನು ಆರೋಪಿಸಿ ಯುಎಸ್ ಮೂಲದ ಕಿರು ಮಾರಾಟಗಾರ ಹಿಂಡೆನ್ಬರ್ಗ್ ವರದಿಯನ್ನು ಬಿಡುಗಡೆ ಮಾಡಿದ ನಂತರ ಅದಾನಿ ಗ್ರೂಪ್ನ ಷೇರುಗಳು ಕುಸಿದಿದ್ದವು.