ಅದಾನಿ -ಹಿಂಡೆನ್ ಬರ್ಗ್ ವರದಿ ವಿವಾದ: ತನಿಖೆ ನಡೆಸಲು ಸುಪ್ರೀಂನಿಂದ ತಜ್ಞರ ಸಮಿತಿ ರಚನೆ
ಎರಡು ತಿಂಗಳೊಳಗೆ ತನಿಖೆ ವರದಿ ನೀಡುವಂತೆ ಸುಪ್ರೀಂಕೋರ್ಟ್ ನಿರ್ದೇಶನ
Team Udayavani, Mar 2, 2023, 12:57 PM IST
ನವದೆಹಲಿ: ಗೌತಮ್ ಅದಾನಿ ವಿರುದ್ಧ ಇತ್ತೀಚೆಗೆ ಬಿಡುಗಡೆ ಮಾಡಲಾಗಿದ್ದ ಹಿಂಡೆನ್ ಬರ್ಗ್ ವರದಿ ಕುರಿತು ತನಿಖೆ ನಡೆಸಲು ಸುಪ್ರೀಂಕೋರ್ಟ್ ಗುರುವಾರ (ಮಾರ್ಚ್ 02) ತಜ್ಞರ ಸಮಿತಿಯನ್ನು ರಚಿಸಿದೆ.
ಇದನ್ನೂ ಓದಿ:ಭಾರತದ ಕೋವಿಡ್ ನಿಯಂತ್ರಣ ಕ್ರಮಗಳಿಗೆ ಬಿಲ್ಗೇಟ್ಸ್ ಬಹುಪರಾಕ್
ಅದಾನಿ-ಹಿಂಡೆನ್ ಬರ್ಗ್ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ಸುಪ್ರೀಂಕೋರ್ಟ್ ನ ನಿವೃತ್ತ ಜಡ್ಜ್ ಎ.ಎಂ.ಸಪ್ರೆ ನೇತೃತ್ವದ ತನಿಖಾ ಸಮಿತಿಯನ್ನು ರಚಿಸಿದೆ. ಹಿಂಡೆನ್ ಬರ್ಗ್ ವರದಿ ಬಹಿರಂಗಗೊಂಡ ಬೆನ್ನಲ್ಲೇ ಬಾಂಬೆ ಷೇರುಮಾರುಕಟ್ಟೆಯಲ್ಲಿ ಭಾರೀ ಪ್ರಮಾಣದ ಕುಸಿತ ಕಂಡಿದ್ದು, ಇದರಿಂದ ಹೂಡಿಕೆದಾರರಿಗೆ ಲಕ್ಷಾಂತರ ಕೋಟಿ ರೂ. ನಷ್ಟವಾಗಿದ್ದು, ಈ ಬಗ್ಗೆ ಸಪ್ರೆ ನೇತೃತ್ವದ ಸಮಿತಿ ತನಿಖೆ ನಡೆಸಲಿದೆ.
ಅದಾನಿ ವಹಿವಾಟಿಗೆ ಸಂಬಂಧಿಸಿದಂತೆ ಹಿಂಡೆನ್ ಬರ್ಗ್ ಬಿಡುಗಡೆ ಮಾಡಿರುವ ವರದಿ ಕುರಿತು ನಿವೃತ್ತ ಜಡ್ಜ್ ಸಪ್ರೆ ನೇತೃತ್ವದ ಸಮಿತಿ ಎರಡು ತಿಂಗಳೊಳಗೆ ತನಿಖೆ ವರದಿ ನೀಡುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ಈ ಸಮಿತಿಯು ಷೇರುಮಾರುಕಟ್ಟೆಯಲ್ಲಾದ ಭಾರೀ ಏರಿಳಿತಕ್ಕೆ ಸಂಬಂಧಿಸಿದ ಪರಿಸ್ಥಿತಿ ಹಾಗೂ ಹೂಡಿಕೆದಾರರಿಗೆ ತಿಳಿವಳಿಕೆ ಮೂಡಿಸುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
ನಿವೃತ್ತ ಜಡ್ಜ್ ಎಎಂ ಸಪ್ರೆ ಅವರನ್ನೊಳಗೊಂಡ ಆರು ಮಂದಿ ಸದಸ್ಯರ ಸಮಿತಿಯಲ್ಲಿ ನಿವೃತ್ತ ಜಡ್ಜ್ ಗಳಾದ ಓಪಿ ಭಟ್, ಜೆಪಿ ದೇವ್ ದತ್ ಹೆಸರನ್ನು ಸುಪ್ರೀಂಕೋರ್ಟ್ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ
Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ
Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ