ಶೀರೂರು ಮಠಕ್ಕೆ ನೂತನ ಯತಿ ಸ್ವೀಕಾರ : ಮಠದ ಭಕ್ತ ಸಮಿತಿ ವಿರೋಧ


Team Udayavani, Apr 21, 2021, 1:58 AM IST

ಶೀರೂರು ಮಠಕ್ಕೆ ನೂತನ ಯತಿ ಸ್ವೀಕಾರ : ಮಠದ ಭಕ್ತ ಸಮಿತಿ ವಿರೋಧ

ಉಡುಪಿ : ಶೀರೂರು ಮಠದ ಉತ್ತರಾಧಿಕಾರಿಗಳ ಘೋಷಣೆ ಪ್ರಕ್ರಿಯೆಗೆ ಶ್ರೀ ಶೀರೂರು ಮಠ ಭಕ್ತ ಸಮಿತಿ ವಿರೋಧ ವ್ಯಕ್ತಪಡಿಸಿದ್ದು, ಮಠಕ್ಕೆ ಸಂಬಂಧಿಸಿದ ಪ್ರಕರಣ ಕೋರ್ಟ್‌ನಲ್ಲಿರುವಾಗ ಯಾವುದೇ ಚಟುವಟಿಕೆ ಸರಿಯಲ್ಲ ಎಂದು ತಿಳಿಸಿದೆ.

ಮಂಗಳವಾರ ಸಮಿತಿ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಶೀರೂರು ಮಠಾಧೀಶರಾಗಿದ್ದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರರು ಈ ಬಗ್ಗೆ ಮಾಹಿತಿ ನೀಡಿದರು.

ಶ್ರೀಗಳು ಕಾಲವಾದ ಬಳಿಕ ಆಸ್ತಿ-ಪಾಸ್ತಿ ವಿಚಾರ, ತೆರಿಗೆ ವಿಚಾರಕ್ಕೆ ಸಂಬಂಧಿಸಿ ಸಾಕಷ್ಟು ತಕರಾರು, ಅಪವಾದಗಳು ಕೇಳಿ ಬಂದಿದ್ದವು. ಈ ಎಲ್ಲ ನೋವುಗಳನ್ನು ಸಹಿಸಿಕೊಂಡಿದ್ದ ನಾವು ಆಸ್ತಿ-ಪಾಸ್ತಿಯ ಪಾರದರ್ಶಕತೆ ನಿಟ್ಟಿನಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇವೆ. ಹಾಗಿರುವಾಗ ಯಾವುದೇ ಚಟುವಟಿಕೆ ಸರಿಯಲ್ಲ. ಸೂಕ್ತ ಉತ್ತರಾಧಿಕಾರಿ ಸಿಗದೇ ಹೋದರೆ ಮತ್ತೆ ಕೋರ್ಟ್‌ ಮೆಟ್ಟಿಲು ಏರುತ್ತೇವೆ ಎಂದು ಎಚ್ಚರಿಸಿದರು.

ಬಾಲ ಸನ್ಯಾಸಕ್ಕೆ ವಿರೋಧ
ಪಿ. ಲಾತವ್ಯ ಆಚಾರ್ಯ ಮಾತನಾಡಿ, ಅಷ್ಟ ಮಠ ಪರಂಪರೆಯಲ್ಲಿ ಬಾಲ ಸನ್ಯಾಸಿ ಸ್ವೀಕಾರ ರದ್ದಾಗಿದೆ. ಅಷ್ಟ ಮಠಗಳಲ್ಲಿ ಒಂದಾದ ಶೀರೂರು ಮಠದ ಕೀರ್ತಿಶೇಷ ಶ್ರೀಲಕ್ಷ್ಮೀ ವರತೀರ್ಥರು ಕಾಲವಾದ ಎರಡೂವರೆ ವರ್ಷಗಳ ಬಳಿಕ ಅಪ್ರಾಪ್ತ ವಯಸ್ಸಿನ ವಟುವನ್ನು ಉತ್ತರಾಧಿಕಾರಿಯಾಗಿ ನೇಮಿಸಲಾಗುತ್ತಿದೆ. ಮಠಕ್ಕೆ ಪ್ರಬುದ್ಧ ಉತ್ತರಾಧಿಕಾರಿಯ ಅಗತ್ಯವಿದ್ದು, ಈ ಬಾಲ ಸನ್ಯಾಸಿಯ ಸ್ವೀಕಾರಕ್ಕೆ ಮುಂದಾದರೆ ಕೋರ್ಟ್‌ ಮೆಟ್ಟಿಲು ಏರುವುದು ಅನಿವಾರ್ಯವಾಗುತ್ತದೆ ಎಂದರು.

ಕಳೆದ ಮೂರು ವರ್ಷಗಳ ಹಿಂದೆ ಕೀರ್ತಿಶೇಷ ಪೇಜಾವರ ಶ್ರೀ ವಿಶ್ವೇಶ ತೀರ್ಥ ಶ್ರೀಪಾದರ ಸಮ್ಮುಖದಲ್ಲಿ ಕಠಿನ 10 ವರ್ಷ ವೇದಾಂತ ಜ್ಞಾನ ಹಾಗೂ 21 ವರ್ಷ ಪೂರೈಸಿರುವ ಯೋಗ್ಯ ವಟುವನ್ನು ಅಷ್ಟ ಮಠಕ್ಕೆ ಶಿಷ್ಯರಾಗಿ ಸ್ವೀಕರಿಸುವ ನಿರ್ಣಯ ಕೈಗೊಳ್ಳಲಾಗಿತ್ತು. ಈ ಬಗ್ಗೆ ಎಲ್ಲ ಮಠಾಧೀಶರು ಮಾತುಕತೆ ನಡೆಸಿದ್ದರು. ಈಗ ಶಿರೂರು ಮಠಕ್ಕೆ 16, 17 ವರ್ಷದ ಯತಿಯನ್ನು ನಿಯೋಜಿಸುವುದು ಸರಿಯಲ್ಲ ಎಂದು ತಿಳಿಸಿದರು.

ವಾದಿರಾಜ ಆಚಾರ್ಯ ಮಾತನಾಡಿ, 700 ವರ್ಷಗಳಿಗೂ ಮಿಕ್ಕಿ ಇತಿಹಾಸವುಳ್ಳ ಅಷ್ಟ ಮಠಗಳ ಪರಂಪರೆಯಲ್ಲಿ ಶೀರೂರು ಮಠವು ಎರಡೂವರೆ ವರ್ಷಗಳಿಂದ ಮಠಾಧೀಶರಿಲ್ಲದೆ ಖಾಲಿ ಬಿದ್ದಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪ್ರಹ್ಲಾದ ಆಚಾರ್ಯ, ಅಕ್ಷೋಬ್ಯ ಆಚಾರ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.