ಆದ್ಯಪಾಡಿ, ಶಂಭೂರು ಡ್ಯಾಂನಿಂದ ಹೂಳೆತ್ತುವುದಕ್ಕೆ ತಡೆ
Team Udayavani, Mar 31, 2023, 6:36 AM IST
ಮಂಗಳೂರು: ಜಿಲ್ಲೆಯ ಎರಡು ಅಣೆಕಟ್ಟುಗಳಿಂದ ಡ್ರೆಜ್ಜಿಂಗ್ ನಡೆಸಿ ಮರಳು ತೆಗೆಯುವುದಕ್ಕೆ ಚೆನ್ನೈನ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ತಡೆಯೊಡ್ಡಿದೆ.
ಆದ್ಯಪಾಡಿ ಮತ್ತು ಶಂಭೂರು ಅಣೆಕಟ್ಟೆಗಳ ಹಿನ್ನೀರಿನಿಂದ ಹೂಳೆತ್ತುವ, ಆ ಮೂಲಕ ಸಿಕ್ಕಿದ ಮರಳನ್ನು ಮಾರಾಟ ಮಾಡುವುದಕ್ಕೆ ಈ ಹಿಂದೆ ಕಾರ್ಯಾದೇಶ ನೀಡಲಾಗಿತ್ತು. ಕರ್ನಾಟಕ ರಾಜ್ಯ ಖನಿಜ ನಿ.ಲಿ. ನಿಂದ ದಕ್ಷಿಣ ಕನ್ನಡ ಜಿಲ್ಲಾ ಮರಳು ನಿಗಾ ಸಮಿತಿಗೆ ಕಾರ್ಯಾದೇಶ ಹೊರಡಿಸಲಾಗಿತ್ತು. ಈ ಪ್ರಕ್ರಿಯೆಯೇ 2006ರ ಪರಿಸರ ಪರಿಣಾಮ ಮೌಲ್ಯಮಾಪನ ಅಧಿಸೂಚನೆಯ ಉಲ್ಲಂಘನೆಯಾಗಿದೆ ಎಂದು ನ್ಯಾಯಾಧಿಕರಣ ತಿಳಿಸಿದೆ.
ಫಲ್ಗುಣಿ (ಗುರುಪುರ) ಮತ್ತು ನೇತ್ರಾವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಅಣೆಕಟ್ಟಿನ ಹಿನ್ನೀರಿನಿಂದ 14,51,680 ಟನ್ ಮರಳನ್ನು ತೆಗೆಯಲು ಮರಳು ಮೇಲ್ವಿಚಾರಣಾ ಸಮಿತಿಯು ಈ ಹಿಂದೆ ಅನುಮತಿಯನ್ನು ನೀಡಿತ್ತು. ಆದರೆ ಪರಿಸರ ಅನುಮೋದನೆ (ಇಸಿ) ಪಡೆಯುವಲ್ಲಿ ಇಲಾಖೆ ವಿಫಲವಾಗಿತ್ತು. ಈ ಪ್ರಕರಣದ ವಿಚಾರಣೆಯನ್ನು ಎನ್ಜಿಟಿ ನಡೆಸಿತ್ತು. ಇಸಿ ಪಡೆದುಕೊಳ್ಳದೆ ಮರಳು ತಗೆಯಲು ಆದೇಶ ನೀಡಿರುವುದು ನಿಯಮಗಳ ಉಲ್ಲಂಘನೆಯಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ. ಈ ಕುರಿತು ಗಣಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿ, ಈ ಎರಡೂ ಅಣೆಕಟ್ಟಿನಿಂದ ಮರಳು ತೆಗೆಯುವುದನ್ನು ಕಳೆದ ಒಂದು ತಿಂಗಳ ಹಿಂದೆಯೇ ನಿಲ್ಲಿಸಲಾಗಿತ್ತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?