ಫೆ. 13-17: ಏರೋ ಇಂಡಿಯಾ ವೈಮಾನಿಕ ಪ್ರದರ್ಶನ


Team Udayavani, Nov 28, 2022, 7:05 AM IST

ಫೆ. 13-17: ಏರೋ ಇಂಡಿಯಾ ವೈಮಾನಿಕ ಪ್ರದರ್ಶನ

ಬೆಂಗಳೂರು: ದೇಶದ ಸೇನಾ ಶಕ್ತಿಯನ್ನು ಪ್ರದರ್ಶಿಸುವ, ರಕ್ಷಣ ಕ್ಷೇತ್ರದಲ್ಲಿ ಹೂಡಿಕೆ ಆಹ್ವಾನಿಸುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ 2023ರ ಫೆ. 13ರಿಂದ 17ರ ವರೆಗೆ ಯಲಹಂಕ ವೈಮಾನಿಕ ನೆಲೆಯಲ್ಲಿ ನಡೆಯಲಿದೆ.

ಕೊರೊನಾ ಸೋಂಕಿನ ತೀವ್ರತೆ ನಡುವೆಯೂ 2021ರಲ್ಲಿ 13ನೇ ಆವೃತ್ತಿಯ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಆಯೋಜನೆಗೊಂಡಿತ್ತು. ಕಳೆದ ಬಾರಿಯಂತೆ ಈ ಬಾರಿಯೂ ಆತ್ಮನಿರ್ಭರ ಭಾರತ ಪರಿಕಲ್ಪನೆ ಅಡಿಯಲ್ಲಿ ವೈಮಾನಿಕ ಪ್ರದರ್ಶನ ಆಯೋಜನೆಗೊಳ್ಳುತ್ತಿದೆ. ಆಮೂಲಕ ದೇಶದ ರಕ್ಷಣ ಕ್ಷೇತ್ರಕ್ಕೆ ಬಂಡವಾಳ ಹೂಡಿಕೆ, ಹೊಸ ಸಂಶೋಧನೆ, ಉತ್ಪನ್ನಗಳ ಅನಾವರಣಗೊಳ್ಳಲಿದೆ. ಪ್ರಮುಖವಾಗಿ ದೇಶೀಯ ಸಂಸ್ಥೆಗಳಿಗೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆಗಳಿವೆ.

ಹೈಬ್ರಿಡ್‌ ಏರೋ ಇಂಡಿಯಾ?
ಕಳೆದ ಬಾರಿ ಕೊರೊನಾ ಕಾರಣದಿಂದಾಗಿ ಭೌತಿಕ ಮತ್ತು ವರ್ಚುವಲ್‌ ಆಗಿ ಏರೋ ಇಂಡಿಯಾ ಆಯೋಜಿಸಲಾಗಿತ್ತು. ಪ್ರದರ್ಶನಗಳನ್ನು ಹೈಬ್ರಿಡ್‌ ಮಾದರಿಯಲ್ಲಿ ಆಯೋಜನೆಗೊಂಡಿತ್ತು. ಅದರಲ್ಲಿ ಸಾಕಷ್ಟು ಯಶಸ್ವಿಯೂ ಗಳಿಸಿತ್ತು. ಈ ಬಾರಿ ಭೌತಿಕ ಹಾಗೂ ವರ್ಚುವಲ್‌ ವಿಧಾನದಲ್ಲೂ ವೈಮಾನಿಕ ಪ್ರದರ್ಶನ ಆಯೋಜನೆಗೊಳ್ಳುವ ಸಾಧ್ಯತೆಗಳಿವೆ.

ಈ ಬಾರಿ ಹೊಸ ರೀತಿಯಲ್ಲಿ ಭಾರತಕ್ಕೆ ಸಂಬಂಧಿಸಿದ ರಾಷ್ಟ್ರಗಳ ನಡುವಿನ ಬಾಂಧವ್ಯ ವೃದ್ಧಿಸುವಂತಹ ಸಮಾವೇಶ ಅಥವಾ ಕಾರ್ಯಕ್ರಮ ಆಯೋಜನೆಗೂ ಏರೋ ಇಂಡಿಯಾ ಆಯೋಜಕರು ನಿರ್ಧರಿಸಿದ್ದಾರೆ.

ಪ್ರದರ್ಶಕರ ನೋಂದಣಿ ಶೀಘ್ರ ಆರಂಭ
ಏರೋ ಇಂಡಿಯಾದಲ್ಲಿ ತಮ್ಮ ಉತ್ಪನ್ನಗಳ, ಸಂಶೋಧನೆಯ ಪ್ರದರ್ಶನಕ್ಕೆ ನೋಂದಣಿ ಮಾಡಿಕೊಳ್ಳುವ ಪ್ರಕ್ರಿಯೆಗೆ ಶೀಘ್ರ ಚಾಲನೆ ನೀಡಲಾಗುತ್ತದೆ. ಅದಕ್ಕಾಗಿ ಏರೋ ಇಂಡಿಯಾ ವೆಬ್‌ಸೈಟ್‌ನಲ್ಲಿಯೇ ಸೂಚನೆಗಳನ್ನು ನೀಡಲಾಗುತ್ತದೆ.

ಸ್ಥಳಾಂತರ ಚರ್ಚೆ ಈಗಿಲ್ಲ
ಬೆಂಗಳೂರಿನ ಸಂಚಾರ ದಟ್ಟಣೆ ಸೇರಿ ಇನ್ನಿತರ ಕಾರಣಗಳಿಂದಾಗಿ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಉತ್ತರ ಪ್ರದೇಸದ ಲಖೊ°à ಅಥವಾ ಗೋವಾಕ್ಕೆ ಸ್ಥಳಾಂತರಿಸುವ ಕುರಿತಂತೆ ಕಳೆದ ನಾಲ್ಕೈದು ವರ್ಷಗಳಿಂದ ಚರ್ಚೆ ನಡೆಯುತ್ತಿದೆ. ಅದರಲ್ಲೂ 12ನೇ ಆವೃತ್ತಿಯ ಏರೋ ಇಂಡಿಯಾ ವೇಳೆ 13ನೇ ಆವೃತ್ತಿ ಲಖೊ°àದಲ್ಲಿ ನಡೆಯಲಿದೆ ಎಂದೇ ಹೇಳಲಾಗಿತ್ತು. ಆದರೆ, ಲಖೊ°à ಅಥವಾ ಗೋವಾದಲ್ಲಿ ಯಲಹಂಕ ವೈಮಾನಿಕ ನೆಲೆಯಲ್ಲಿನ ಸೌಲಭ್ಯ, ಇಲ್ಲಿರುವಂತಹ ದೊಡ್ಡ ಪ್ರಮಾಣದ ರನ್‌ವೇ ವ್ಯವಸ್ಥೆಯಿರದ ಕಾರಣ ಏರೋ ಇಂಡಿಯಾ ಸ್ಥಳಾಂತರದ ಚರ್ಚೆ ಹಾಗೆಯೇ ನಿಲ್ಲುವಂತಾಯಿತು.

2021ರ ಏರೋ ಇಂಡಿಯಾದ ವಿವರ
– 523 ಭಾರತೀಯ, 78 ವಿದೇಶಿ ಪ್ರದರ್ಶಕರು
– 14 ದೇಶಗಳ ಪ್ರದರ್ಶಕರು ಭಾಗಿ
– ಇಂಡಿಜೀನಿಸ್‌ ತಂತ್ರಜ್ಞಾನದಲ್ಲಿ ಅಭಿವೃದ್ಧಿ ಪಡಿಸಲಾದ ರಕ್ಷಣಾ ಸಾಮಗ್ರಿಗಳ ಪ್ರದರ್ಶನ
– ಆತ್ಮನಿರ್ಭರ ಭಾರತ ಪರಿಕಲ್ಪನೆಯಲ್ಲಿ ಆಯೋಜನೆಗೊಂಡಿದ್ದ ಏರೋ ಇಂಡಿಯಾ
– ರಫೆಲ್‌, ಸುಖೋಯ್‌, ತೇಜಸ್‌, ಮಿಗ್‌ ಸೇರಿ ಹಲವು ಮಾದರಿಯ ಫೈಟರ್‌ ಜೆಟ್‌ಗಳು ಭಾಗಿ
– ಸೂರ್ಯಕಿರಣ್‌, ಸಾರಂಗ್‌ ಸೇರಿ ಇನ್ನಿತರ ಏರೋ ಬ್ಯಾಟಿಕ್‌ ತಂಡಗಳಿಂದ ವೈಮಾನಿಕ ಪ್ರದರ್ಶನ

 

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.