ನಮಗೇ ಸಡ್ಡು ಹೊಡೆಯುತ್ತೀರಾ…ಅಫ್ಘಾನ್ ನ ಪಂಜ್ ಶೀರ್ ಕಣಿವೆ ವಶಕ್ಕೆ ತಾಲಿಬಾನ್ ಉಗ್ರರ ಸಿದ್ಧತೆ

ಪಂಜ್‌ಶೀರ್‌ನ ನಿವಾಸಿಗಳು ಯಾವುದೇ ತೆರನಾದ ದಾಳಿಯನ್ನು ಎದುರಿಸಲು ಸನ್ನದ್ಧರಾಗಿದ್ದಾರೆ.

Team Udayavani, Aug 23, 2021, 10:21 AM IST

ನಮಗೇ ಸಡ್ಡು ಹೊಡೆಯುತ್ತೀರಾ…ಅಫ್ಘಾನ್ ನ ಪಂಜ್ ಶೀರ್ ಕಣಿವೆ ವಶಕ್ಕೆ ತಾಲಿಬಾನ್ ಉಗ್ರರ ಸಿದ್ಧತೆ

ಕಾಬೂಲ್: ತಾಲಿಬಾನ್ ಉಗ್ರರ ಆಡಳಿತದ ವಿರುದ್ಧ ತೀವ್ರ ಪ್ರತಿರೋಧ ವ್ಯಕ್ತಪಡಿಸುತ್ತಿರುವ ಅಫ್ಘಾನಿಸ್ತಾನದ ಪಂಜ್ ಶೀರ್ ಜನರ ಪ್ರತಿಭಟನೆಯನ್ನು ಹತ್ತಿಕ್ಕಲು ಇದೀಗ ತಾಲಿಬಾನ್ ನೂರಾರು ಉಗ್ರರನ್ನು ಕಳುಹಿಸಿಕೊಟ್ಟಿರುವುದಾಗಿ ತಿಳಿಸಿದೆ.

ಇದನ್ನೂ ಓದಿ:ಅಫ್ಘಾನ್ ಕ್ರಿಕೆಟ್ ಮಂಡಳಿ ಅಧ್ಯಕ್ಷನಾಗಿ ಅಜೀಜುಲ್ಲಾ ಫಜ್ಲಿ ಮರು ನೇಮಕ

ಪಂಜ್ ಶೀರ್ ಪ್ರಾಂತ್ಯವನ್ನು ತಮ್ಮ ವಶಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ನೂರಾರು ತಾಲಿಬಾನ್ ಮುಜಾಹಿದೀನ್ ಗಳು ಲಗ್ಗೆ ಇಟ್ಟಿರುವುದಾಗಿ ನ್ಯೂಸ್ ಏಜೆನ್ಸಿ ಸ್ಪುಟ್ನಿಕ್ ವರದಿ ಮಾಡಿದೆ. ಕಳೆದ ವಾರ ತಾಲಿಬಾನ್ ಉಗ್ರರು ಅಫ್ಘಾನಿಸ್ತಾನ್ ಆಡಳಿತವನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದರು.

ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ತಾಲಿಬಾನ್ ಸುಪರ್ದಿಗೆ ತೆಗೆದುಕೊಳ್ಳುತ್ತಿದ್ದಂತೆಯೇ ಅಧ್ಯಕ್ಷ ಅಶ್ರಫ್ ಘನಿ ದೇಶ ಬಿಟ್ಟು ಪರಾರಿಯಾಗಿದ್ದರು. ಅಲ್ಲದೇ ಅಫ್ಘಾನಿಸ್ತಾನದ ಪಂಜ್ ಶೀರ್ ಪ್ರಾಂತ್ಯವೊಂದನ್ನು ಹೊರತುಪಡಿಸಿದಂತೆ ಉಳಿದೆಲ್ಲ 33 ಪ್ರಾಂತ್ಯಗಳು ಕೂಡಾ ತಾಲಿಬಾನ್ ವಶಕ್ಕೆ ತೆಗೆದುಕೊಂಡಿತ್ತು.

ಕಳೆದ ನಾಲ್ಕು ದಶಕಗಳಿಂದಲೂ ಈ ಪಂಜ್ ಶೀರ್ ಪ್ರಾಂತ್ಯದಲ್ಲಿ ನೆಲೆಯೂರಲು ತಾಲಿಬಾನಿಗಳು ಸಫಲರಾಗಿಲ್ಲವಾಗಿತ್ತು. ದಿ.ಅಹ್ಮದ್ ಶಾ ಅವರ ನೇತೃತ್ವದಲ್ಲಿ ಈ ಪ್ರಾಂತ್ಯವನ್ನು ಕಳೆದ ನಾಲ್ಕು ದಶಕಗಳಿಂದ ತಾಲಿಬಾನಿಗಳ ಸಹಿತ ಎಲ್ಲ ತೆರನಾದ ದಂಗೆಕೋರರಿಂದ ರಕ್ಷಿಸುತ್ತಾ ಬರಲಾಗಿದ್ದು, ಇಂದಿಗೂ ಸ್ಥಳೀಯಾಡಳಿತದ ಹಿಡಿದಲ್ಲಿಯೇ ಇದೆ.

ಕಾಬೂಲ್‌ನ ಉತ್ತರಕ್ಕೆ ನೂರಾರು ಕಿ.ಮೀ. ದೂರದಲ್ಲಿರುವ ಪಂಜ್‌ಶೀರ್‌ ಪ್ರಾಂತ್ಯ ಮತ್ತು ಕಣಿವೆ ಪ್ರದೇಶ ಈಗಲೂ ಸುರಕ್ಷಿತವಾಗಿದ್ದು ಸರಕಾರಿ ಸಂಸ್ಥೆಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಅಷ್ಟು ಮಾತ್ರ ವಲ್ಲದೆ ಪಂಜ್‌ಶೀರ್‌ನ ನಿವಾಸಿಗಳು ಯಾವುದೇ ತೆರನಾದ ದಾಳಿಯನ್ನು ಎದುರಿಸಲು ಸನ್ನದ್ಧರಾಗಿದ್ದಾರೆ. “1996- 2001ರ ವರೆಗಿನ ತಾಲಿಬಾನ್‌ ಆಡಳಿತದ ವೇಳೆಯೂ ಪಂಜ್‌ಶೀರ್‌ ಕಣಿವೆಯನ್ನು ವಶಪಡಿಸಿಕೊಳ್ಳಲು ದಂಗೆಕೋರರಿಗೆ ಸಾಧ್ಯವಾಗಿರಲಿಲ್ಲ’ ಎಂದು ಪ್ರಾಂತ್ಯದ ಆರ್ಥಿಕ ಇಲಾಖೆಯ ಮುಖ್ಯಸ್ಥರಾಗಿರುವ ಅಬ್ದುಲ್‌ ರಹಮಾನ್‌ ತಿಳಿಸಿದ್ದಾರೆ ಎಂದು ಸ್ಪಾನಿಶ್‌ ಮಾಧ್ಯಮ ವರದಿ ಮಾಡಿತ್ತು.

ಈ ಹಿಂದೆ ಅಫ್ಘಾನಿಸ್ಥಾನದಲ್ಲಿ ಆಡಳಿತ ನಡೆಸಿದ್ದ ಸೋವಿಯತ್‌ ಮತ್ತು ಪಾಶ್ಚಾತ್ಯ ಸೇನೆಗಳ ಯಂತ್ರೋ ಪಕರಣಗಳು, ಚೆಕ್‌ಪಾಯಿಂಟ್‌ ಮತ್ತು ಹಳೆಯ ಸೇತುವೆಗಳ ಅವಶೇಷಗಳಿಂದ ಪಂಜ್‌ಶೀರ್‌ ಮತ್ತು ಕಾಬೂಲ್‌ ನಡುವಣ ರಸ್ತೆಯನ್ನು ಬೇರ್ಪಡಿಸಲಾಗಿದೆ. ದಂಗೆಕೋರರು ಪ್ರಾಂತ್ಯವನ್ನು ಪ್ರವೇಶಿಸಿದ್ದೇ ಆದಲ್ಲಿ ಇವುಗಳನ್ನು ಸ್ಥಳೀಯಾಡಳಿತ ಬಳಸಿಕೊಂಡು ದಾಳಿ ಕೋರರ ಮೇಲೆ ಪ್ರತಿದಾಳಿ ನಡೆಸುವ ಸಾಧ್ಯತೆಗಳಿರುವುದರಿಂದ ಇತ್ತ ತಾಲಿಬಾನಿಗಳು ತಲೆಹಾಕಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿತ್ತು.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.