ಪರಿಸ್ಥಿತಿ ಇನ್ನೂ ಸುಧಾರಿಸಿಲ್ಲ…ನಾಗಾಲ್ಯಾಂಡ್ನಲ್ಲಿ ಆಫ್ಸಪಾ ಇನ್ನೂ 6 ತಿಂಗಳು ವಿಸ್ತರಣೆ
ಕೇಂದ್ರ ಗೃಹ ಇಲಾಖೆ ಮಹತ್ವ ನಿರ್ಧಾರ, ಸದ್ಯಕ್ಕೆ ಕಾಯಿದೆ ವಾಪಾಸ್ ಸಾಧ್ಯತೆ ಕಡಿಮೆ
Team Udayavani, Dec 30, 2021, 3:26 PM IST
ಹೊಸದಿಲ್ಲಿ : ನಾಗಾಲ್ಯಾಂಡನ್ಲ್ಲಿ ಜಾರಿಯಲ್ಲಿರುವ ಸೇನಾಪಡೆಗಳ ವಿಶೇಷಾಧಿಕಾರ ಕಾಯಿದೆಯನ್ನು ಇನ್ನೂ ಆರು ತಿಂಗಳು ಕಾಲ ವಿಸ್ತರಿಸುವುದಕ್ಕೆ ಕೇಂದ್ರ ಗೃಹ ಇಲಾಖೆ ನಿರ್ಧರಿಸಿದೆ.
ಇದನ್ನೂ ಓದಿ:ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ 23 ಕೂಲಿ ಕಾರ್ಮಿಕರಲ್ಲಿ ಕೋವಿಡ್ ಸೋಂಕು
ನಾಗಲ್ಯಾಂಡ್ನಲ್ಲಿ ಪರಿಸ್ಥಿತಿ ಇನ್ನೂ ಸುಧಾರಿಸಿಲ್ಲ. ನಾಗರಿಕ ಹಕ್ಕುಗಳ ರಕ್ಷಣೆಯ ಉದ್ದೇಶದಿಂದಲೇ ಈ ಕಾಯಿದೆಯನ್ನು ಇನ್ನೂ ಆರು ತಿಂಗಳು ವಿಸ್ತರಿಸಲಾಗುತ್ತಿದೆ. ಸದ್ಯಕ್ಕೆ ಕಾಯಿದೆ ವಾಪಾಸ್ ಪಡೆದುಕೊಳ್ಳುವ ಸ್ಥಿತಿಯಲ್ಲಿ ನಾಗಾಲ್ಯಾಂಡ್ ಇಲ್ಲ ಎಂದು ಕೇಂದ್ರ ಗೃಹ ಇಲಾಖೆ ಅಭಿಪ್ರಾಯಪಟ್ಟಿದೆ.
ಬಂಡುಕೋರರು ಎಂದು ಭಾವಿಸಿ ಸೇನಾಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ 14 ನಾಗರಿಕರು ಕಳೆದ ತಿಂಗಳು ಪ್ರಾಣ ಕಳೆದುಕೊಂಡಿದ್ದರು. ಈ ಬಗ್ಗೆ ಈಶಾನ್ಯ ಭಾರತದ ರಾಜ್ಯಗಳಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕಾಂಗ್ರೆಸ್ ಸೇರಿದಂತೆ ಪ್ರಮುಖ ಪ್ರತಿಪಕ್ಷಗಳು ಸೇನಾಪಡೆಗಳ ವಿಶೇಷಾಧಿಕಾರ ಕಾಯಿದೆಯನ್ನು ವಾಪಾಸ್ ಪಡೆಯುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಿದ್ದವು.
ಸಂಸತ್ತಿನಲ್ಲೂ ಈ ಪ್ರಕರಣ ವಿವಾದ ಸೃಷ್ಟಿಸಿತ್ತು. ತಪ್ಪು ಗ್ರಹಿಕೆಯಿಂದ ಈ ಅವಘಡ ಸಂಭವಿಸಿದೆ ಎಂದು ಸೇನಾಪಡೆ ವಿಷಾದ ವ್ಯಕ್ತಪಡಿಸಿತ್ತು. ಗುಪ್ತಚರ ಮಾಹಿತಿಯ ತಪ್ಪು ಗ್ರಹಿಕೆಯಿಂದ ನಾಗರಿಕರನ್ನು ಬಂಡುಕೋರರು ಎಂದು ಭಾವಿಸಲಾಗಿತ್ತು ಎಂದು ಸೇನೆ ಸ್ಪಷ್ಟನೆ ನೀಡಿತ್ತು. ಈ ಬಗ್ಗೆ ರಕ್ಷಣಾ ಇಲಾಖೆಯಿಂದ ಆಂತರಿಕ ತನಿಖೆಗೂ ಆದೇಶ ನೀಡಲಾಗಿತ್ತು.
ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಆದರೆ ಯಾವುದೇ ಕಾರಣಕ್ಕೂ ಕಾಯಿದೆ ವಾಪಾಸ್ ಪಡೆಯುವುದು ಸೂಕ್ತವಲ್ಲ ಎಂದು ಗೃಹ ಹಾಗೂ ರಕ್ಷಣಾ ಇಲಾಖೆ ಹಿರಿಯ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಹೀಗಾಗಿ ಮುಂದಿನ ಆರು ತಿಂಗಳು ಕಾಲ ಕಾಯಿದೆ ವಿಸ್ತರಿಸಲು ನಿರ್ಧರಿಸಲಾಗಿದೆ. ಗೃಹ ಇಲಾಖೆ ಮೂಲಗಳ ಪ್ರಕಾರ ಕೇಂದ್ರ ಸರಕಾರ ಸದ್ಯಕ್ಕೆ ಈ ಕಾಯಿದೆಯನ್ನು ವಾಪಾಸ್ ಪಡೆಯುವ ಮನಸ್ಥಿತಿ ಹೊಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!