ಸಿಧು ಪಂಜಾಬ್ನಲ್ಲಿ ಸೋತ ಬೆನ್ನಲ್ಲೇ ಟ್ವಿಟರ್ನಲ್ಲಿ ಟ್ರೆಂಡ್ ಆದ ಅರ್ಚನಾ!
Team Udayavani, Mar 10, 2022, 9:13 PM IST
ನವದೆಹಲಿ : ಕ್ರಿಕೆಟಿಗ ಮತ್ತು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರ ಸೋಲಿನ ನಂತರ, ಸಾಮಾಜಿಕ ಮಾಧ್ಯಮವು ಅರ್ಚನಾ ಪುರನ್ ಸಿಂಗ್ ಈಗ ಚಿಂತಿತ ಮಹಿಳೆ ಎಂದು ಹೇಳುವ ಟ್ವೀಟ್ಗಳು ಮತ್ತು ಪೋಸ್ಟ್ ಗಳು ಸಾಮಾಜಿಕ ತಾಣಗಳಲ್ಲಿ ತುಂಬಿ ಹೋಗಿದೆ.
ಇದಕ್ಕೆ ಕಾರಣ?
ಅರ್ಚನಾ ಈಗ ‘ದಿ ಕಪಿಲ್ ಶರ್ಮಾ ಶೋ’ ನ ಭಾಗವಾಗಿದ್ದು, ಈ ಹಿಂದೆ ಸಿಧು ಅವರು ಆಕ್ರಮಿಸಿಕೊಂಡಿದ್ದ ಕುರ್ಚಿಯಲ್ಲಿ ಅವರು ಕುಳಿತಿದ್ದಾರೆ.
ಜನರು ಕಪಿಲ್ ಶರ್ಮಾ ಶೋನಲ್ಲಿ ಸಿಧು ತನ್ನ ಸ್ಥಾನವನ್ನು ಪಡೆದುಕೊಳ್ಳುತ್ತಾರೆಯೇ ಎಂದು ಅರ್ಚನಾ ಚಿಂತಿತರಾಗಿದ್ದಾರೆ ಎಂದು ಹಲವಾರು ಮಂದಿ ಹಾಸ್ಯಮಯವಾಗಿ ಟ್ವೀಟ್ ಮಾಡಿ ಪೋಸ್ಟ್ ಗಳನ್ನು ವೈರಲ್ ಮಾಡಿದ್ದಾರೆ.
2019 ರಲ್ಲಿ ನಡೆದ ‘ದಿ ಕಪಿಲ್ ಶರ್ಮಾ ಶೋ’ ನಲ್ಲಿ ನವಜೋತ್ ಸಿಂಗ್ ಸಿಧು ಬದಲಿಗೆ ಅರ್ಚನಾ ಬಂದಿದ್ದರು. ಪುಲ್ವಾಮಾ ಭಯೋತ್ಪಾದಕ ದಾಳಿಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ಸಿಧು ಅವರನ್ನು ಕಪಿಲ್ ಅವರ ಶೋನಿಂದ ತೆಗೆದುಹಾಕಲಾಯಿತು ಎಂದು ಹೇಳಲಾಗುತ್ತದೆ. ನಂತರ ಅವರ ಸ್ಥಾನವನ್ನು ಅರ್ಚನಾ ಪುರನ್ ಸಿಂಗ್ ಅವರು ತುಂಬಿದ್ದಾರೆ. ಈಗ ಆ ಜಾಗಕ್ಕೆ ಮತ್ತೆ ಸಿಧು ಬರಲಿದ್ದಾರೆಯೇ ಎನ್ನುವ ಚರ್ಚೆ ಆರಂಭವಾಗಿದೆ.
ಸಿಧು ಅವರು ಪೂರ್ವ ಅಮೃತಸರ ಕ್ಷೇತ್ರದಿಂದ ಸೋತಿದ್ದಾರೆ. ರಾಜಕೀಯ ಧುರೀಣರಾದ ನವಜೋತ್ ಸಿಂಗ್ ಸಿಧು ಮತ್ತು ಬಿಕ್ರಮ್ ಸಿಂಗ್ ಮಜಿಥಿಯಾ ನಡುವೆ ಹಣಾಹಣಿ ನಡೆಯಲಿದೆ ಎಂದು ಬಹುತೇಕರು ಭಾವಿಸಿದ್ದರೆ ಅಲ್ಲಿ ಎಎಪಿಯ ಜೀವನ್ ಜ್ಯೋತ್ ಕೌರ್ ಅವರು ಗೆದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್ ಖಾನ್
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
MUST WATCH
ಹೊಸ ಸೇರ್ಪಡೆ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ