ಕಪ್ಪು, ಬಿಳಿ ಆಯ್ತು..ಈಗ ಹಳದಿ ಫಂಗಸ್, ಇದೆಷ್ಟು ಮಾರಕ ಗೊತ್ತಾ? ದೆಹಲಿಯಲ್ಲಿ ಮೊದಲ ಪ್ರಕರಣ
ಅತೀಯಾದ ತೇವಾಂಶ ಕೂಡಾ ಈ ಬ್ಯಾಕ್ಟೀರಿಯಾ ಹರಡಲು ಕಾರಣವಾಗಬಹುದು.
Team Udayavani, May 24, 2021, 3:07 PM IST
ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಭೀತಿಯ ನಡುವೆಯೇ ಕಪ್ಪು ಮತ್ತು ಬಿಳಿ ಫಂಗಸ್ ಪ್ರಕರಣಗಳು ಹೆಚ್ಚಳವಾಗುತ್ತಿರುವ ನಡುವೆಯೇ ಗಾಜಿಯಾಬಾದ್ ನಲ್ಲಿ ಈಗ ಹಳದಿ ಫಂಗಸ್ ನ ಮೊದಲ ಪ್ರಕರಣ ಸೋಮವಾರ (ಮೇ 24) ವರದಿಯಾಗಿದೆ.
ಇದನ್ನೂ ಓದಿ:ಯುವಕನಿಗೆ ಮೂತ್ರ ಕುಡಿಸಿದ ಆರೋಪ ಪ್ರಕರಣ: ಗೋಣಿಬೀಡು ಠಾಣೆಗೆ ಐಜಿಪಿ ಭೇಟಿ
ರಾಷ್ಟ್ರರಾಜಧಾನಿ ಎನ್ ಸಿಆರ್ ಪ್ರದೇಶವಾದ ಗಾಜಿಯಾಬಾದ್ ನಲ್ಲಿ ಕಪ್ಪು ಮತ್ತು ಬಿಳಿ ಫಂಗಸ್ ನಂತರ ಹಳದಿ ಫಂಗಸ್ ನ ಮೊದಲ ಪ್ರಕರಣ ವರದಿಯಾಗಿದೆ ಎಂದು ತಿಳಿಸಿದೆ.ಈ ರೋಗಿಗೆ ಪ್ರಸ್ತುತ ಇಎನ್ ಟಿ ಶಸ್ತ್ರಚಿಕಿತ್ಸಕ ಡಾ.ಬ್ರಿಜ್ ಪಾಲ್ ತ್ಯಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಏನಿದು ಹಳದಿ ಫಂಗಸ್?
ಕಪ್ಪು, ಬಿಳಿ ಶೀಲಿಂಧ್ರದಂತೆ ಹಳದಿ ಶಿಲೀಂಧ್ರದ ಸೋಂಕು ಪೀಡಿತರಲ್ಲಿ ಆಲಸ್ಯ, ತೂಕ ಇಳಿಕೆ, ಕಡಿಮೆ ಹಸಿವಿನ ಲಕ್ಷಣ ಕಾಣಿಸಿಕೊಳ್ಳುತ್ತದೆ ಎಂದು ಹೇಳಲಾಗುತ್ತದೆ. ಹಳದಿ ಫಂಗಸ್ ಹೆಚ್ಚು ತೀವ್ರವಾದ ನಂತರ ಕೀವು ಸೋರಿಕೆಯಾಗಬಹುದು ಎಂದು ವರದಿ ಹೇಳಿದೆ. ಅಷ್ಟೇ ಅಲ್ಲ ಇದು ಗಾಯಗಳ ಗುಣಪಡಿಸುವಿಕೆ ಮೇಲೆ ಪರಿಣಾಮ ಬೀರುತ್ತದೆ. ಕಣ್ಣು, ಕಿವಿ ಮತ್ತು ಅಂಗಾಂಗಳ ವೈಫಲ್ಯಕ್ಕೆ ಕಾರಣವಾಗುವ ಮೂಲಕ ಕೊನೆಗೆ ಸಾವಿಗೆ ಕಾರಣವಾಗಬಹುದು ಎಂದು ತಿಳಿಸಿದೆ.
ಹಳದಿ ಶಿಲೀಂಧ್ರವು ಮಾರಣಾಂತಿಕ ಕಾಯಿಲೆಯಾಗಿದೆ. ಯಾಕೆಂದರೆ ಇದು ಆಂತರಿಕವಾಗಿ ಪ್ರಾರಂಭವಾಗಿ ನಂತರ ಕಾಣಿಸಿಕೊಳ್ಳುತ್ತದೆ. ಈ ಹಿನ್ನೆಲೆಯಲ್ಲಿ ಯಾವುದೇ ವ್ಯಕ್ತಿಗೆ ಈ ರೋಗ ಲಕ್ಷಣ ಕಂಡುಬಂದಲ್ಲಿ ಕೂಡಲೇ ವೈದ್ಯಕೀಯ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ವರದಿ ವಿವರಿಸಿದೆ.
ಕೊಳಚೆ ನೈರ್ಮಲ್ಯವು ಹೆಚ್ಚಾಗಿ ಹಳದಿ ಶಿಲೀಂಧ್ರ ಸೋಂಕನ್ನು ಉಂಟುಮಾಡುತ್ತದೆ. ಅಲ್ಲದೇ ಹಾಳಾದ ಆಹಾರ ಮತ್ತು ಮಲದ ಮೂಲಕ ಈ ಸೋಂಕು ಹರಡುತ್ತದೆ. ಅಲ್ಲದೇ ಅತೀಯಾದ ತೇವಾಂಶ ಕೂಡಾ ಈ ಬ್ಯಾಕ್ಟೀರಿಯಾ ಹರಡಲು ಕಾರಣವಾಗಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್