ತೋಟಗಾರಿಕೆ ಕೃಷಿ: 44 ಸಾವಿರ ಕೋಟಿ ರೂ.ಆದಾಯ
Team Udayavani, Jan 3, 2021, 12:21 AM IST
ಬಾಗಲಕೋಟೆ: ರಾಜ್ಯದಲ್ಲಿ ತೋಟಗಾರಿಕೆ ಕೃಷಿಯಿಂದ 44,879 ಕೋಟಿ ಆದಾಯ ಬಂದಿದೆ. ತೋಟಗಾರಿಕೆ ಕೃಷಿ ಕೈಗೊಳ್ಳುವ ರೈತರಿಗೆ ಎಲ್ಲ ರೀತಿಯ ಅನುಕೂಲ ಕಲ್ಪಿಸಲು ವಿಜ್ಞಾನಿಗಳು ಮುಂದಾಗಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ನಗರದ ತೋಟಗಾರಿಕೆ ವಿವಿಯಲ್ಲಿ ಶನಿವಾರ ಆರಂಭಗೊಂಡ 3 ದಿನಗಳ 9ನೇ ತೋಟಗಾರಿಕೆ ಮೇಳಕ್ಕೆ ಆನ್ಲೈನ್ ಮೂಲಕ ಚಾಲನೆ ನೀಡಿದರು.
ತೋಟಗಾರಿಕಾ ಉತ್ಪಾದನೆಯಲ್ಲಿ ಕರ್ನಾಟಕ ದೇಶದಲ್ಲಿಯೇ 2ನೇ ಸ್ಥಾನದಲ್ಲಿದೆ. ತೋಟಗಾರಿಕೆ ಕ್ಷೇತ್ರದ ಸಾಧನೆಗೆ ರಾಜ್ಯ ಹೆಸರಾಗಿದೆ. 185.20 ಲಕ್ಷ ಮೆಟ್ರಿಕ್ ಟನ್ ತೋಟಗಾರಿಕೆ ಉತ್ಪನ್ನವಿದೆ. ಇದರಿಂದ 44,879 ಕೋಟಿ ರೂ.ಆದಾಯ ರಾಜ್ಯಕ್ಕೆ ಬಂದಿದೆ. ತೋಟಗಾರಿಕೆ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವು ತನ್ನ ಸ್ಥಾನ ಕಾಯ್ದುಕೊಂಡು ಹೆಚ್ಚಿನ ಸಾಧನೆ ಮಾಡಲು ಪೂರಕ ಸಂಶೋಧನೆ, ವಿಸ್ತರಣೆ ಹಾಗೂ ಇತರ ಮೂಲಸೌಕರ್ಯ ಒದಗಿಸಲು ಸರಕಾರ ಬದ್ಧವಾಗಿದೆ ಎಂದರು.
ಪ್ರಧಾನಿಯವರು 100ನೇ ಕಿಸಾನ್ ರೈಲಿಗೆ ಚಾಲನೆ ನೀಡಿದ್ದಾರೆ. 3 ತಿಂಗಳ ಅವಧಿಯಲ್ಲಿ ಕಿಸಾನ್ ರೈಲುಗಳ ಮೂಲಕ 27 ಸಾವಿರ ಟನ್ ಕೃಷಿ ಉತ್ಪನ್ನ ಹಲವೆಡೆ ಸಾಗಿಸಲಾಗಿದೆ. ಕೊಳೆತು ಹೋಗಬಹುದಾದ ದಾಳಿಂಬೆ, ಕಿತ್ತಳೆ ಹಾಗೂ ಇತರ ತೋಟಗಾರಿಕಾ ಬೆಳೆಗಳನ್ನು ಶೀಘ್ರ ಬೇರೆ ರಾಜ್ಯಗಳಿಗೆ ಸಾಗಿಸಲು ಕೃಷಿ ರೈಲ್ ಯೋಜನೆಯ ಸೌಲಭ್ಯ ಬಳಸಿಕೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಕಳೆದ3ತಿಂಗಳ ಅವಧಿಯಲ್ಲಿ ಕಿಸಾನ್ ರೈಲುಗಳ ಮೂಲಕ 27 ಸಾವಿರ ಟನ್ ಕೃಷಿ ಉತ್ಪನ್ನಗಳನ್ನು ಬೇರೆ ರಾಜ್ಯಗಳಿಗೆ ರಫ್ತು ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ