
ಕೃಷಿ ವಿವಿಗಳು ಕ್ಯಾಂಪಸ್ ಬಿಟ್ಟು ಹೊರಬರಬೇಕು: ಸಿಎಂ ಬೊಮ್ಮಾಯಿ
ಅನ್ನದಾತನ ಬದುಕಿನಲ್ಲಿ ನಿಶ್ಚಿತತೆ ಮೂಡಲು ಸಂಶೋಧನೆ, ಆವಿಷ್ಕಾರಗಳು ಅಗತ್ಯ
Team Udayavani, Jan 20, 2023, 9:43 PM IST

ಬೆಂಗಳೂರು: ಅನ್ನದಾತ ರೈತನ ಬದುಕು ಅನಿಶ್ಚಿತತೆಯಿಂದ ಕೂಡಿದ್ದು, ಅದಕ್ಕೆ ನಿಶ್ಚಿತತೆ ತಂದು ಕೊಡುವ ನಿಟ್ಟಿನಲ್ಲಿ ಸಂಶೋಧನೆ ಮತ್ತು ಆವಿಷ್ಕಾರಗಳು ಕೃಷಿ ವಿವಿಗಳಿಂದ ಆಗಬೇಕು. ಅದಕ್ಕಾಗಿ ಕೃಷಿ ವಿವಿಗಳು ಕ್ಯಾಂಪಸ್ ಬಿಟ್ಟು ಹೊರಬರಬೇಕು. ರೈತರ ಜಮೀನುಗಳನ್ನೇ ಕ್ಯಾಂಪಸ್ ಆಗಿ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ನೀಡಿದರು.
ಕೇಂದ್ರ ಸರಕಾರದ ಪ್ರಸ್ತಾವನೆಯಂತೆ 2023 ಅನ್ನು ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷ ಎಂದು ವಿಶ್ವಸಂಸ್ಥೆ ಘೋಷಿಸಿದ ಹಿನ್ನೆಲೆಯಲ್ಲಿ ಅದರ ಆಚರಣೆ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಮೂರು ದಿನಗಳ “ಸಿರಿಧಾನ್ಯ ಮತ್ತು ಸಾವಯವ-ಅಂತಾರಾಷ್ಟ್ರೀಯ ವಾಣಿಜ್ಯ ಮೇಳ:2023’ಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು.
ಹವಾಮಾನ ಮತ್ತು ವೈಜ್ಞಾನಿಕ ಕಾರಣಗಳಿಂದಾಗಿ ರೈತ ಇಂದು ಅನಿಶ್ಚಿತತೆ ಎದುರಿಸುತ್ತಿದ್ದಾರೆ. ಆದ್ದರಿಂದ ಕೃಷಿ ವಿವಿಗಳು ಹಳೆ ಕಾಲದ ಸಂಶೋಧನೆ, ಮಾದರಿ, ಪದ್ಧತಿಗಳನ್ನು ಬಿಟ್ಟು ಈಗಿನ ಅಗತ್ಯಕ್ಕೆ ತಕ್ಕಂತೆ ರೈತನ ಬದುಕಿಗೆ ನಿಶ್ಚಿತತೆ ತಂದು ಕೊಡುವ ಕೆಲಸ ಆಗಬೇಕು. ಅದಕ್ಕಾಗಿ ಕೃಷಿ ವಿವಿಗಳು ಕ್ಯಾಂಪಸ್ ಬಿಟ್ಟು ಹೊರಬರಬೇಕು ಎಂದು ಕರೆ ನೀಡಿದರು.
ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಕೈಲಾಶ್ ಚೌಧರಿ, ರಾಜ್ಯದ ಕೃಷಿ ಸಚಿವ ಬಿ.ಸಿ. ಪಾಟೀಲ್, ಉತ್ತರ ಪ್ರದೇಶದ ಕೃಷಿ ಸಚಿವ ಸೂರ್ಯಪ್ರತಾಪ್ ಶಾಹಜಿ, ಕೃಷಿ ಉತ್ಪನ್ನ ರಾಜ್ಯ ಸಚಿವ ದಿನೇಶ್ ಪ್ರತಾಪ್ ಸಿಂಗ್ ಮತ್ತಿತರರು ಇದ್ದರು.
33 ಲಕ್ಷ ರೈತರಿಗೆ ಸಾಲ
ರಾಜ್ಯ ಸರಕಾರ ಈ ವರ್ಷ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿಯಲ್ಲಿ ಸಾಲದ ನೆರವು ನೀಡಿದೆ. 3 ಲಕ್ಷ ಹೊಸ ರೈತರಿಗೆ ಸಾಲ ನೀಡಲಾಗಿದ್ದು, ಇದೊಂದು ದಾಖಲೆ. ರೈತಶಕ್ತಿ ಯೋಜನೆ 10 ದಿನಗಳಲ್ಲಿ ಪ್ರಾರಂಭಿಸಲಾಗಿದೆ. ಯಶಸ್ವಿನಿ ಯೋಜನೆಯನ್ನು ಮರು ಪ್ರಾರಂಭಿಸಲಾಗಿದೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ನೀಡಲಾಗುತ್ತಿದೆ. 10 ಎಚ್.ಪಿ. ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಸಿರಿಧಾನ್ಯ ರಾಯಭಾರಿ
ನಾನು ಸಿರಿಧಾನ್ಯ ರಾಯಭಾರಿ ಎಂದು ಹೇಳಿದ ಸಿಎಂ ಬೊಮ್ಮಾಯಿ, ಕಳೆದ 30 ವರ್ಷಗಳಿಂದ ಅನ್ನ ಸೇವಿಸಿಲ್ಲ. ಸಿರಿಧಾನ್ಯಗಳಾದ ನವಣೆ ಇತ್ಯಾದಿಗಳನ್ನು ಸೇವಿಸುತ್ತಿರುವುದಾಗಿ ತಿಳಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟ್ರಸ್ಟ್ ಗಳ ಕಾರ್ಯ ನಿರ್ವಹಣೆಗೆ ಹೆಚ್ಚಿನ ಬಲ: ಸಚಿವ ಶಿವರಾಜ್ ತಂಗಡಗಿ

Shobha Karandlaje ಅವರಿಗೂ ಫ್ರೀ…; ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಗರಂ

ಬಿಜೆಪಿಯ ಸುಳ್ಳಿನ ಸಂಸ್ಕಾರವನ್ನು ಸೋಲಿಸಿ ಸತ್ಯದ ಘನತೆಯನ್ನು ಗೆಲ್ಲಿಸಿದ್ದಾರೆ:Siddaramaiah

Karnataka ರಾಜ್ಯದ ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣ: ಸಿದ್ದರಾಮಯ್ಯ

ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಕಾನೂನು ಸಹಾಯವಾಣಿ: ತೇಜಸ್ವಿ ಸೂರ್ಯ
MUST WATCH

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್ ಘೀ ರೋಸ್ಟ್

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
ಹೊಸ ಸೇರ್ಪಡೆ

ಬೆಳಗಾವಿ: ನಾವೀನ್ಯತೆ-ಕ್ರಿಯಾಶೀಲತೆ ಮುಖ್ಯ: ಪ್ರೊ. ರುಸಾಕ್

ರಾಮಚಂದ್ರನ್ ವಿಶ್ವನಾಥನ್ ದೇಶಭ್ರಷ್ಟ ಆರ್ಥಿಕ ಅಪರಾಧಿ; ಸಿಬಿಐ ವಿಶೇಷ ನ್ಯಾಯಾಲಯ

Uddhav Thackeray ಅವರಿಗೆ 2 ಸೀಟು ಕೊಟ್ಟರೂ ಸಾಕು ಅನ್ನುವ ಸ್ಥಿತಿ: ಬಿಜೆಪಿ ಲೇವಡಿ

ವರುಣಾ ತಾಲೂಕು ಕೇಂದ್ರವಾಗಬೇಕೆಂದು ಜನ ಕೇಳಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾವೇರಿ: ಧರ್ಮಸ್ಥಳ ಯೋಜನೆ ಸೌಲಭ್ಯ ಎಲ್ಲರಿಗೂ ತಲುಪಿಸೋಣ