ಎಐಎಡಿಎಂಕೆ ಮೈತ್ರಿ ಅಂತ್ಯ; ನಿರ್ಧರಿಸುವ ಅಧಿಕಾರ ನನಗಿಲ್ಲ ಎಂದ ಅಣ್ಣಾಮಲೈ
ರಾಜಕೀಯ ಕ್ಷೇತ್ರ ಹಣವಿಲ್ಲದೆ ಚುನಾವಣೆ ಎದುರಿಸಲಾಗದ ಸ್ಥಿತಿಗೆ ಬಂದಿದೆ
Team Udayavani, Mar 19, 2023, 2:44 PM IST
ಚೆನ್ನೈ: ಎಐಎಡಿಎಂಕೆ ಜೊತೆಗಿನ ಮೈತ್ರಿ ಮುರಿದುಕೊಂಡು ಏಕಾಂಗಿಯಾಗಿ ಸ್ಪರ್ಧಿಸಲು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಬಯಸಿದ್ದಾರೆ ಎಂದು ತಮಿಳು ನಾಡು ರಾಜಕೀಯದಲ್ಲಿ ಭಾರಿ ಚರ್ಚೆಯಾಗಿತ್ತು. ಈ ಕುರಿತು ಮೈತ್ರಿ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ನನಗಿಲ್ಲ, ಆ ಕುರಿತು ಪಕ್ಷದ ನಾಯಕತ್ವ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.
ಅಣ್ಣಾಮಲೈ ಎಐಎಡಿಎಂಕೆ ಜೊತೆಗಿನ ಮೈತ್ರಿ ಮುರಿದುಕೊಂಡು ಏಕಾಂಗಿಯಾಗಿ ಸ್ಪರ್ಧಿಸಲು ಬಯಸಿದ್ದಾರೆ ಎಂದು ಕೆಲ ದಿನಗಳ ಹಿಂದೆ ವರದಿಯಾಗಿತ್ತು. ಪಕ್ಷದ ಪದಾಧಿಕಾರಿಗಳೊಂದಿಗಿನ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅಣ್ಣಾಮಲೈ ಈ ವಿಷಯ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಎಐಎಡಿಎಂಕೆ-ಬಿಜೆಪಿ ಮೈತ್ರಿ ಮುಂದುವರಿಯಲಿದೆಯೇ ಅನ್ನುವುದು ಮತ್ತೆ ಚರ್ಚಾಸ್ಪದವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಚೆನ್ನೈನಲ್ಲಿ ಸುದ್ದಿಗಾರರಿಗೆ ಸಂದರ್ಶನ ನೀಡಿದ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ, ”ತಮಿಳುನಾಡು ರಾಜಕೀಯ ಕ್ಷೇತ್ರ ಹಣವಿಲ್ಲದೆ ಚುನಾವಣೆ ಎದುರಿಸಲಾಗದ ಸ್ಥಿತಿಗೆ ಬಂದಿದೆ. ಗುಣ ಮಾತ್ರ ಬದಲಾಗಿದೆ… ಆಡಳಿತ ಪಕ್ಷವಾದರೆ ಹೆಚ್ಚು, ವಿರೋಧ ಪಕ್ಷವಾದರೆ ಸ್ವಲ್ಪ ಕಡಿಮೆ ಕೊಟ್ಟರೆ ಜನ ಸ್ವೀಕರಿಸುತ್ತಾರೆ ಎನ್ನುವಷ್ಟರ ಮಟ್ಟಿಗೆ ರಾಜಕೀಯ ಬದಲಾಗಿದೆ. ಇದನ್ನು ನಾನು ಒಪ್ಪುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ