ಏರ್ ಇಂಡಿಯಾ ಮತ್ತು ನೇಪಾಳ ಏರ್ಲೈನ್ಸ್ ವಿಮಾನಗಳು ಢಿಕ್ಕಿ ಹೊಡೆಯುತ್ತಿವು!!
ಸಮಯೋಚಿತ ಕ್ರಮ ದೊಡ್ಡ ಅನಾಹುತವನ್ನು ತಡೆಯಿತು
Team Udayavani, Mar 26, 2023, 4:15 PM IST
ನವದೆಹಲಿ: ಏರ್ ಇಂಡಿಯಾ ಮತ್ತು ನೇಪಾಳ ಏರ್ಲೈನ್ಸ್ ವಿಮಾನಗಳು ಢಿಕ್ಕಿಯಾಗುವ ಕ್ಷಣ ಬಂದಿದ್ದು, ಎಚ್ಚರಿಕೆ ವ್ಯವಸ್ಥೆಗಳು ಪೈಲಟ್ಗಳನ್ನು ಎಚ್ಚರಿಸಿದ ಕಾರಣ ದೊಡ್ಡ ದುರಂತ ತಪ್ಪಿಸಲಾಯಿತು. ಸಮಯೋಚಿತ ಕ್ರಮವು ಅನಾಹುತವನ್ನು ತಡೆಯಿತು ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಸಿಎಎಎನ್ ವಕ್ತಾರ ಜಗನ್ನಾಥ್ ನಿರೋಲಾ ಪ್ರಕಾರ, ನೇಪಾಳದ ನಾಗರಿಕ ವಿಮಾನಯಾನ ಪ್ರಾಧಿಕಾರ (ಸಿಎಎಎನ್) ಏರ್ ಟ್ರಾಫಿಕ್ ಕಂಟ್ರೋಲರ್ ವಿಭಾಗದ ಇಬ್ಬರು ಉದ್ಯೋಗಿಗಳನ್ನು ಅಜಾಗರೂಕತೆಗಾಗಿ ಅಮಾನತುಗೊಳಿಸಿದೆ.
ಶುಕ್ರವಾರ ಬೆಳಗ್ಗೆ ಮಲೇಷ್ಯಾದ ಕೌಲಾಲಂಪುರದಿಂದ ಕಠ್ಮಂಡುವಿಗೆ ಬರುತ್ತಿದ್ದ ನೇಪಾಳ ಏರ್ ಲೈನ್ಸ್ ವಿಮಾನ ಮತ್ತು ನವದೆಹಲಿಯಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಬಹುತೇಕ ಡಿಕ್ಕಿಯಾಗುವ ಹಂತಕ್ಕೆ ತಲುಪಿದ್ದವು.
ಏರ್ ಇಂಡಿಯಾ ವಿಮಾನವು 19,000 ಅಡಿಗಳಿಂದ ಕೆಳಗಿಳಿಯುತ್ತಿದ್ದರೆ, ನೇಪಾಳ ಏರ್ಲೈನ್ಸ್ ವಿಮಾನವು ಅದೇ ಸ್ಥಳದಲ್ಲಿ 15,000 ಅಡಿ ಎತ್ತರದಲ್ಲಿ ಹಾರುತ್ತಿತ್ತು. ಎರಡು ವಿಮಾನಗಳು ಸಾಮೀಪ್ಯದಲ್ಲಿವೆ ಎಂದು ರಾಡಾರ್ನಲ್ಲಿ ತೋರಿಸಿದ ನಂತರ, ನೇಪಾಳ ಏರ್ಲೈನ್ಸ್ ವಿಮಾನವು 7,000 ಅಡಿಗಳಿಗೆ ಇಳಿದಿದೆ ಎಂದು ವಕ್ತಾರರು ತಿಳಿಸಿದ್ದಾರೆ.
ಈ ಕುರಿತು ತನಿಖೆ ನಡೆಸಲು ನಾಗರಿಕ ವಿಮಾನಯಾನ ಪ್ರಾಧಿಕಾರವು ಮೂವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದೆ.ಘಟನೆಯ ಸಮಯದಲ್ಲಿ ನಿಯಂತ್ರಣ ಕೊಠಡಿಯ ಉಸ್ತುವಾರಿ ವಹಿಸಿದ್ದ ಇಬ್ಬರು ಅಧಿಕಾರಿಗಳನ್ನು ಸಿಎಎಎನ್ ಅಮಾನತುಗೊಳಿಸಿದೆ. ಏರ್ ಇಂಡಿಯಾದಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ