ಕೇಂದ್ರದಿಂದ ಹಸ್ತಾಂತರ: 69 ವರ್ಷಗಳ ಬಳಿಕ ಏರ್ ಇಂಡಿಯಾ ಮತ್ತೆ ಟಾಟಾ ಗ್ರೂಪ್ ತೆಕ್ಕೆಗೆ
ಏರ್ ಇಂಡಿಯಾ ನಿರ್ವಹಣೆಯ ನಿಯಂತ್ರಣ ಟಾಟಾ ಗ್ರೂಪ್ ತೆಕ್ಕೆಗೆ ಬಿದ್ದಂತಾಗಿದೆ.
Team Udayavani, Jan 27, 2022, 4:13 PM IST
ನವದೆಹಲಿ: ಸುಮಾರು 69 ವರ್ಷಗಳ ಬಳಿಕ ಭಾರತ ಸರ್ಕಾರ ಏರ್ ಇಂಡಿಯಾವನ್ನು ಗುರುವಾರ (ಜನವರಿ 27) ಟಾಟಾ ಗ್ರೂಪ್ ಗೆ ಅಧಿಕೃತವಾಗಿ ಹಸ್ತಾಂತರಿಸಿದೆ. ಆದರೆ ಇಂದಿನಿಂದಲೇ ಏರ್ ಇಂಡಿಯಾ ವಿಮಾನಗಳು ಟಾಟಾ ಗ್ರೂಪ್ ಬ್ಯಾನರ್ ನಡಿ ಹಾರಾಟ ನಡೆಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ವಿದ್ಯಾರ್ಥಿಗಳ ಪ್ರತಿಭಟನೆ; ಬಿಹಾರದಲ್ಲಿ ಕೋಟ್ಯಂತರ ರೂ. ರೈಲ್ವೆ ಆಸ್ತಿ ಬೆಂಕಿಗಾಹುತಿ
ಮೂಲಗಳ ಪ್ರಕಾರ, ಏರ್ ಇಂಡಿಯಾ ಕಚೇರಿಯಲ್ಲಿ ಔಪಚಾರಿಕವಾಗಿ ಟಾಟಾ ಗ್ರೂಪ್ ಗೆ ಹಸ್ತಾಂತರಿಸುವ ಮುನ್ನ ಟಾಟಾ ಗ್ರೂಪ್ ನ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರು ನವದೆಹಲಿಯಲ್ಲಿ ಕೇಂದ್ರ ಸರ್ಕಾರದ ಅಧಿಕಾರಿಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು ಎಂದು ವರದಿ ತಿಳಿಸಿದೆ.
ಸುಮಾರು 69 ವರ್ಷಗಳ ಬಳಿಕ ಏರ್ ಇಂಡಿಯಾ ಟಾಟಾ ಸಂಸ್ಥೆಗೆ ಸೇರಿದಂತಾಗಿದೆ. ಇಂದಿನಿಂದ ಟಾಟಾ ಕಂಪನಿಯ ಶೇ.100 ಪ್ರತಿಶತ ಶೇರುಗಳನ್ನು ಟ್ಯಾಲೇಸ್ ಪ್ರೈವೇಟ್ ಲಿಮಿಟೆಡ್ ಗೆ ವರ್ಗಾಯಿಸುವುದರೊಂದಿಗೆ ಏರ್ ಇಂಡಿಯಾ ನಿರ್ವಹಣೆಯ ನಿಯಂತ್ರಣ ಟಾಟಾ ಗ್ರೂಪ್ ತೆಕ್ಕೆಗೆ ಬಿದ್ದಂತಾಗಿದೆ.
2,700 ಕೋಟಿ ರೂಪಾಯಿ ಹಣವನ್ನು ಸಂಪೂರ್ಣವಾಗಿ ಕೇಂದ್ರ ಸರ್ಕಾರಕ್ಕೆ ಬಂದಿದ್ದು, ಇದೀಗ ಟ್ಯಾಲೇಸ್ ಏರ್ ಇಂಡಿಯಾದ ನೂತನ ಮಾಲೀಕರಾಗಿರುವುದಾಗಿ ಡಿಐಪಿಎಂ ಕಾರ್ಯದರ್ಶಿ ತಿಳಿಸಿದ್ದಾರೆ.
ಕಳೆದ ವರ್ಷ ಅಕ್ಟೋಬರ್ ನಲ್ಲಿ ಕೇಂದ್ರ ಸರ್ಕಾರ ಏರ್ ಇಂಡಿಯಾವನ್ನು 18,000 ಕೋಟಿ ರೂಪಾಯಿಗೆ ಟಾಟಾ ಗ್ರೂಪ್ಸ್ ನ ಹೋಲ್ಡಿಂಗ್ ಕಂಪನಿಗೆ ಮಾರಾಟ ಮಾಡಿತ್ತು. ನಂತರ ಕೇಂದ್ರ ಸರ್ಕಾರ ಏರ್ ಇಂಡಿಯಾ ಶೇ.100 ಪ್ರತಿಶತ ಶೇರುಗಳನ್ನು ಮಾರಾಟ ಮಾಡಲು ಒಲವು ತೋರಿದ್ದು, ಈ ನಿಟ್ಟಿನಲ್ಲಿ ಕೇಂದ್ರ ಮತ್ತು ಟಾಟಾ ಗ್ರೂಪ್ ಷೇರು ಖರೀದಿಯ ಒಪ್ಪಂದಕ್ಕೆ ಸಹಿ ಹಾಕಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ