ಅಕ್ಕಮಹಾದೇವಿ ವಿವಿ 12ನೇ ಘಟಿಕೋತ್ಸವ: ಸಾಧಕಿಯರಿಗೆ ಗೌರವ ಡಾಕ್ಟರೇಟ್ ಪ್ರದಾನ
Team Udayavani, Nov 9, 2021, 11:26 AM IST
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವದಲ್ಲಿ ಮೂವರು ಸಾಧಕಿಯರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಂಗಳವಾರ ಮಾಡಲಾಯಿತು.
ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಥ್ ಗೌರವ ಡಾಕ್ಟರೇಟ್ ಹಾಗೂ ಇತರೆ ಪದವಿಗಳ ಪ್ರದಾನ ಮಾಡಿದರು.
ಸಾಹಿತ್ಯ ಕ್ಷೇತ್ರದಲ್ಲಿ ವೈದೇಹಿ ಕಾವ್ಯನಾಮ ಖ್ಯಾತಿಯ ಜಾನಕಿ ಶ್ರೀನಿವಾಸಮೂರ್ತಿ, ಸಂಗೀತ ಕ್ಷೇತ್ರದ ಸಾಧಕಿ ಡಾ.ಸುಮಾ ಸುಧೀಂದ್ರ ಹಾಗೂ ಮಹಿಳಾ ಸಬಲೀಕರಣಕ್ಕೆ ಶ್ರಮಿಸುತ್ತಿರುವ ಯಶಸ್ವಿ ಮಹಿಳಾ ಉದ್ಯಮಿ ಕಲ್ಪನಾ ಸರೋಜ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು.
ಇನ್ಫೋಸಿಸ್ನ ಸುಧಾಮೂರ್ತಿ ಅವರು ಆನ್ಲೈನ್ ಘಟಿಕೋತ್ಸವ ಭಾಷಣ ಮಾಡಿದರು. ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್, ಚಿನ್ನದ ಪದಕ ವಿಜೇತರಿಗೆ ಹಾಗೂ ಪಿಎಚ್ಡಿ ಪದವಿಧರರಿಗೆ ಮಾತ್ರ ನೇರವಾಗಿ ಪದವಿ ಪ್ರದಾನ ಮಾಡಲಾಯಿತು. ಉಳಿದ ಎಲ್ಲ ಪದವೀಧರರಿಗೆ ಆನ್ಲೈನ್ ಮೂಲಕ ಪದವಿ ಪ್ರದಾನ ಮಾಡಲಾಯಿತು.
ಇದನ್ನೂ ಓದಿ: ಕೋವಿಡ್ ನಿಯಂತ್ರಣ ಮಾಡಿದ್ದೇ ಸರಕಾರದ ದೊಡ್ಡ ಸಾಧನೆ: ಸಚಿವ ಬಿ.ಸಿ. ಪಾಟೀಲ್
ವಿವಿಧ ಸ್ನಾತಕ, ಸ್ನಾತಕೋತ್ತರ ಕೋರ್ಸ್ಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ 76 ವಿದ್ಯಾಥಿನಿಯರಿಗೆ ಚಿನ್ನದ ಪದಕ ಸಹಿತ ಪದವಿ ಪ್ರದಾನ ಮಾಡಲಾಗುತ್ತದೆ. 65 ವಿದ್ಯಾರ್ಥಿನಿಯರಿಗೆ 76 ಚಿನ್ನದ ಪದಕ ಸಹಿತ ಪದವಿ ಪ್ರದಾನ ಮಾಡಲಾಯಿತು.
ಘಟಿಕೋತ್ಸವದಲ್ಲಿ 996 ವಿದ್ಯಾರ್ಥಿನಿಯರಿಗೆ ವಿವಿಧ ವಿಷಯಗಳ ಸ್ನಾತಕೋತ್ತರ, 89 ವಿದ್ಯಾರ್ಥಿನಿಯರಿಗೆ ವಿವಿಧ ವಿಷಯಗಳ ಡಿಪ್ಲೋಮಾ ಪದವಿ, 10,123 ವಿದ್ಯಾರ್ಥಿನಿಯರಿಗೆ ಸ್ನಾತಕ ಸೇರಿದಂತೆ 11,208 ವಿದ್ಯಾರ್ಥಿನಿಯರಿಗೆ ಪದವಿ ಪ್ರದಾನ ಮಾಡಲಾಗುತ್ತದೆ. 48 ವಿದ್ಯಾರ್ಥಿನಿಯರಿಗೆ ಪದವಿ ಪ್ರದಾನ ಮಾಡಲಾಯಿತು.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವೆ, ಸುನಂದಮ್ಮ, ಮೌಲ್ಯಮಾಪನ ಕುಲಸಚಿವ ಕೆ.ರಮೇಶ ಸೇರಿದಂತೆ ವಿವಿಧ ಗಣ್ಯರು ಘಟಿಕೋತ್ಸವ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!