ದೀಪಾವಳಿಗೆ ದೇಶಾದ್ಯಂತ 72 ಸಾವಿರ ಕೋಟಿ ವಹಿವಾಟು! ಚೇತರಿಸಿಕೊಳ್ಳುತ್ತಿರುವ ಆರ್ಥಿಕತೆ

ಬಹಿಷ್ಕಾರದಿಂದಾಗಿ ಚೀನಾಗೆ 40 ಸಾವಿರ ಕೋಟಿ ರೂ.ನಷ್ಟ

Team Udayavani, Nov 16, 2020, 6:00 AM IST

ದೀಪಾವಳಿಗೆ ದೇಶಾದ್ಯಂತ 72 ಸಾವಿರ ಕೋಟಿ ವಹಿವಾಟು! ಚೇತರಿಸಿಕೊಳ್ಳುತ್ತಿರುವ ಆರ್ಥಿಕತೆ

ನವದೆಹಲಿ: ಚೀನಾ ವಸ್ತುಗಳನ್ನು ಬಹಿಷ್ಕರಿಸಿ; ಸ್ವದೇಶಿ ವಸ್ತುಗಳನ್ನು ಖರೀದಿಸಿ ಎಂದು ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಮನವಿಗೆ ಸ್ಪಂದನೆ ವ್ಯಕ್ತವಾಗಿದೆ. ಅಖೀಲ ಭಾರತ ವರ್ತಕರ ಒಕ್ಕೂಟ (ಸಿಎಐಟಿ) ನೀಡಿದ ಮಾಹಿತಿ ಪ್ರಕಾರ ಪ್ರಸಕ್ತ ದೀಪಾವಳಿ ಸಂದರ್ಭದಲ್ಲಿ 72 ಸಾವಿರ ಕೋಟಿ ರೂ.ಮೌಲ್ಯದ ವಹಿವಾಟು ನಡೆದಿದೆ. ಬೆಂಗಳೂರು ಸೇರಿದಂತೆ ದೇಶದ ಇಪ್ಪತ್ತು ನಗರಗಳಿಂದ ಸಂಗ್ರಹಿಸಿರುವ ವರದಿಗಳ ಪ್ರಕಾರ 72 ಸಾವಿರ ಕೋಟಿ ರೂ. ವಹಿವಾಟು ನಡೆದಿದೆ. ಚೀನಾ ವಸ್ತುಗಳ ಬಹಿಷ್ಕಾರ ಕರೆಯಿಂದಾಗಿ ಆ ದೇಶಕ್ಕೆ 40 ಸಾವಿರ ಕೋಟಿ ರೂ. ನಷ್ಟವಾಗಿದೆ ಎಂದು ಒಕ್ಕೂಟ ಭಾನುವಾರ ತಿಳಿಸಿದೆ.

ಕೊರೊನಾ ಸೋಂಕಿನಿಂದ ನಿಧಾನಕ್ಕೆ ಚೇತರಿಸಿಕೊಳ್ಳುತ್ತಿರುವ ದೇಶದ ಅರ್ಥ ವ್ಯವಸ್ಥೆಗೆ ಇದೊಂದು ಚೇತೋಹಾರಿ ಸುದ್ದಿಯೂ ಆಗಿದೆ.

ಆಹಾರ, ತಂಪು ಪಾನೀಯಗಳು, ಬೊಂಬೆಗಳು, ಗೃಹೋಪಯೋಗಿ ವಸ್ತುಗಳು, ವಿದ್ಯುತ್‌ ಉಪಕರಣಗಳು, ಸಿಹಿತಿನಸುಗಳು, ಚಿನ್ನಾಭರಣ, ಪಾದರಕ್ಷೆ, ವಾಚುಗಳು, ಪೀಠೊಪಕರಣಗಳು, ಉಡುಪುಗಳು, ಗೃಹಾಲಂಕಾರ ವಸ್ತುಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಜನರು ಖರೀದಿಸಿದ್ದಾರೆ. ಗಾಲ್ವನ್‌ ಕಣಿವೆಯಲ್ಲಿ ಚೀನಾ 20 ಮಂದಿ ಯೋಧರನ್ನು ಕೊಂದ ಬಳಿಕ ಸಿಎಐಟಿ ಚೀನಾ ವಸ್ತುಗಳ ಬಹಿಷ್ಕಾರಕ್ಕೆ ಕರೆ ನೀಡಿತ್ತು.

ಇದನ್ನೂ ಓದಿ:ವಿನಯ್ ಕುಲಕರ್ಣಿ ಬಂಧನದ ಹಿಂದೆ ರಾಜಕೀಯ ಒತ್ತಡ : ಎಚ್.ಕೆ.ಪಾಟೀಲ್

ಭಾರತದ ಆರ್ಥಿಕತೆಗೆ ನಿರೀಕ್ಷೆಗಿಂತಲೂ ಹೆಚ್ಚು ವೇಗ
ಭಾರತೀಯ ಆರ್ಥಿಕತೆಯು ನಿರೀಕ್ಷೆಗಿಂತಲೂ ಬೇಗನೇ ಚೇತರಿಸಿಕೊಳ್ಳುತ್ತಿರುವುದು ಗೋಚರಿಸುತ್ತಿದೆ ಎಂದು ಜಾಗತಿಕ ವಿತ್ತ ಅಧ್ಯಯನ ಸಂಸ್ಥೆ ಆಕ್ಸ್‌ಫ‌ರ್ಡ್‌ ಎಕಾನಾಮಿಕ್ಸ್‌ ಹೇಳಿದೆ. ಇನ್ನು ಪ್ರಸಕ್ತ ಹಣಕಾಸು ವರ್ಷದ ನಾಲ್ಕನೈ ತ್ತೈಮಾಸಿಕದಲ್ಲಿ ಹಣದುಬ್ಬರವು ಸರಾಸರಿ 6 ಪ್ರತಿಶತಕ್ಕಿಂತ ಅಧಿಕವಿರಬಹುದು ಮತ್ತು ಡಿಸೆಂಬರ್‌ನಲ್ಲಿ ಆರ್‌ಬಿಐ ಪಾಲಿಸಿ ದರಗಳ ವಿಚಾರದಲ್ಲಿ ಪರಿಶೀಲನಾ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಈ ಸಂಸ್ಥೆ ಹೇಳಿದೆ.

ಅಕ್ಟೋಬರ್‌ ತಿಂಗಳಲ್ಲಿನ ಗ್ರಾಹಕ ಹಣದುಬ್ಬರವು ವೈರಸ್‌ ಪೂರ್ವ ಅವಧಿಗೆ ಸಮನಾಗಿದೆ. ಇಂಧನ ಹೊರತುಪಡಿಸಿ, ಪ್ರತಿಯೊಂದು ವಿಶಾಲ ವರ್ಗವೂ ಬೆಲೆ ಏರಿಕೆಯನ್ನು ಎದುರಿಸುತ್ತಿವೆ. ಆದರೆ ಇದೇ ವೇಳೆಯಲ್ಲೇ ಬೇರುಮಟ್ಟದ ಆರ್ಥಿಕ ಚಟುವಟಿಕೆಗಳ ದತ್ತಾಂಶಗಳನ್ನು ಗಮನಿಸಿದಾಗ, ಆರ್ಥಿಕತೆಯು ನಾವು ನಿರೀಕ್ಷಿಸಿದ್ದಕ್ಕಿಂತಲೂ ವೇಗವಾಗಿ ಚೇತರಿಸಿಕೊಳ್ಳುತ್ತಿರುವುದು ತಿಳಿಯುತ್ತಿದೆ ಎನ್ನುತ್ತದೆ ಈ ವರದಿ.

ವಿಮಾನಯಾನಕ್ಕೆ ಬಲ ತುಂಬಿದ ದೀಪಾವಳಿ
ಕೋವಿಡ್‌ ಸಾಂಕ್ರಾಮಿಕದಿಂದಾಗಿ ನೆಲಕಚ್ಚಿರುವ ವಿಮಾನಯಾನ ಕ್ಷೇತ್ರ ಸಾಲು-ಸಾಲು ಹಬ್ಬಗಳಿಂದಾಗಿ ಚೇತರಿಸಿಕೊಳ್ಳಲಾರಂಭಿಸಿದೆ. ಅದರಲ್ಲೂ ದೀಪಾವಳಿ ಸಮಯದಲ್ಲಿ ದೇಶೀಯ ವಿಮಾನಯಾನದಲ್ಲಿ ಪ್ರಯಾಣಿಕರ ಸಂಖ್ಯೆ ಹಠಾತ್‌ ಹೆಚ್ಚಳ ಕಂಡಿದೆ. ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹದೀìಪ್‌ ಸಿಂಗ್‌ ಪುರಿ, “”ದೀಪಾವಳಿಯ ಸಂಭ್ರಮದ ಸಮಯದಲ್ಲಿ, ದೇಶೀಯ ವಿಮಾನಯಾನ ಕ್ಷೇತ್ರ ಹೊಸ ಎತ್ತರವನ್ನು ತಲುಪಿದೆ. 1,903 ವಿಮಾನಗಳಲ್ಲಿ 2.25 ಲಕ್ಷ ಪ್ಯಾಸೆಂಜರ್‌ಗಳು ಪ್ರಯಾಣ ಮಾಡಿದ್ದಾರೆ” ಎಂದಿದ್ದಾರೆ. ದೀಪಾವಳಿಯ ಮುನ್ನಾ ದಿನ ಮುಂಬೈ, ದೆಹಲಿ, ಬೆಂಗಳೂರು ಸೇರಿದಂತೆ ದೇಶದ ಮಹಾನಗರಗಳ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ 70 ಪ್ರತಿಶತದಷ್ಟಿತ್ತು. ದಸರಾಗಿಂತಲೂ ದೀಪಾವಳಿ ಸಮಯದಲ್ಲಿ ಸಂಚಾರ ಹೆಚ್ಚಾಗಿದೆ ಎಂದು ವಿಮಾನಯಾನ ಸಂಸ್ಥೆಯೊಂದರ ಅಧಿಕಾರಿ ಹೇಳಿದ್ದಾರೆ.

ಟಾಪ್ ನ್ಯೂಸ್

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.