ಜಲವಿವಾದಗಳ ಬಗ್ಗೆ ಚರ್ಚೆಗೆ ಸರ್ವ ಪಕ್ಷಗಳ ಸಭೆ : ಸಿಎಂ ಬೊಮ್ಮಾಯಿ
ಮೇಕೆದಾಟು ಬಗ್ಗೆ ಪೂರ್ಣ ಮಾಹಿತಿ ಪಡೆಯಲಾಗಿದೆ
Team Udayavani, Jan 22, 2022, 3:47 PM IST
ಬೆಂಗಳೂರು: ಅಂತರರಾಜ್ಯ ಜಲವಿವಾದಗಳ ಬಗ್ಗೆ ಸಭೆ ನಡೆಸಿದ್ದು, ಮುಂದಿನ ದಿನಗಳಲ್ಲಿ ಚರ್ಚೆಗೆ ಸರ್ವ ಪಕ್ಷಗಳ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಶನಿವಾರ ಹೇಳಿಕೆ ನೀಡಿದ್ದಾರೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೃಷ್ಣ, ಕಾವೇರಿ, ಮಹಾದಾಯಿ ಯೋಜನೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಕೋರ್ಟಿನಲ್ಲಿ ವಿವಿಧ ಹಂತಗಳಲ್ಲಿ ಇರುವ ಕೇಸ್ ಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಜನವರಿ ಅಂತ್ಯದಲ್ಲಿ ಮತ್ತೊಂದು ವರ್ಚುವಲ್ ಸಭೆ ಮಾಡುತ್ತೇವೆ ಎಂದು ತಿಳಿಸಿದರು.
ಫೆಬ್ರವರಿ ಮೊದಲ ವಾರದಲ್ಲಿ ಸರ್ವಪಕ್ಷಗಳ ಸಭೆ ಕರೆದು ಜಲವಿವಾದಗಳ ಬಗ್ಗೆ ಚರ್ಚೆ ಮಾಡಲಾಗುವುದು. ಕಾನೂನಿನ ಹೋರಾಟದ ಪ್ರಗತಿ ಬಗ್ಗೆ, ಮುಂದಿನ ನಿಲುವಿನ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿ ಸಲಹೆ ಪಡೆಯುತ್ತೇವೆ ಎಂದರು.
ಜಲಸಂಪನ್ಮೂಲ ಖಾತೆ ಸಚಿವ ಗೋವಿಂದ ಕಾರಜೋಳ ಅವರು ಪ್ರತಿಕ್ರಿಯಿಸಿ, ರಾಜ್ಯಕ್ಕೆ ಸಂಬಂಧಿಸಿದ ಅಂತರರಾಜ್ಯ ಜಲ ವಿವಾದಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಸುಪ್ರೀಂಕೋರ್ಟ್ ನಲ್ಲಿರುವ ಪ್ರಕರಣಗಳ ಬಗ್ಗೆ ಕಾನೂನು ತಂಡದ ಜತೆ ಚರ್ಚೆ ನಡೆಸಿದ್ದೇವೆ. ಕೆಲವು ನಿರ್ದೇಶನಗಳನ್ನು ಸಿಎಂ ನೀಡಿದ್ದಾರೆ. ಮೇಕೆದಾಟು ಬಗ್ಗೆ ಪೂರ್ಣ ಮಾಹಿತಿ ಪಡೆಯಲಾಗಿದೆ. ಫೆ.14 ರಂದು ಮತ್ತೆ ಸುಪ್ರೀಂ ಕೋರ್ಟಿನಲ್ಲಿ ಇದರ ವಿಚಾರಣೆ ಇದೆ. ಇದಕ್ಕೂ ಮುನ್ನ ಮತ್ತೊಮ್ಮೆ ಸಿಎಂ ಸಭೆ ನಡೆಸುತ್ತಾರೆ. ಮಹದಾಯಿ ಪ್ರಕರಣದಲ್ಲಿ ಅಂತಿಮ ವಿಚಾರಣೆ ಬಾಕಿ ಇದೆ
ಇದರ ಜತೆ ಸುಪ್ರೀಂಕೋರ್ಟ್ ನಲ್ಲಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಶೀಘ್ರವಾಗಿ ಮುಗಿಸಲು ಸೂಚಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ