ಪಕ್ಷಕ್ಕೆ ಬರುವವರನ್ನೆಲ್ಲ ಸೇರಿಸಿಕೊಳ್ಳಲು ಆಗುವುದಿಲ್ಲ: ಎಂ.ಬಿ.ಪಾಟೀಲ್
Team Udayavani, Jun 12, 2020, 9:26 PM IST
ಬೆಂಗಳೂರು: ಕಾಂಗ್ರೆಸ್ಗೆ ಬರುತ್ತೇನೆ ಎನ್ನುವವರನ್ನೆಲ್ಲ ಸೇರಿಸಿಕೊಳ್ಳಲು ಆಗುವುದಿಲ್ಲ. ಅದಕ್ಕಾಗಿ ಪಕ್ಷದ ವತಿಯಿಂದ ಸಮಿತಿ ರಚನೆ ಮಾಡಲಾಗಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಮಾಜಿ ಸಚಿವ ರೋಷನ್ ಬೇಗ್ ಮತ್ತೆ ಕಾಂಗ್ರೆಸ್ ಸೇರಲು ಆಸಕ್ತರಾಗಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ಗೆ ಬರುತ್ತೇವೆ ಎಂದ ಮಾತ್ರಕ್ಕೆ ಕರೆದುಕೊಳ್ಳಲು ಆಗುವುದಿಲ್ಲ. ಅದಕ್ಕೆಂದೇ ಒಂದು ಸಮಿತಿ ಇದೆ. ಬರುವವರಿಂದ ನಮಗೆ ಹಾನಿಯಾಗಬಾರದು. ಹೋಗುವಾಗ ಏನು ಹಾನಿ ಮಾಡಿದ್ದಾರೆ ಎಂದು ನೋಡಬೇಕಾಗುತ್ತದೆ ಎಂದು ಹೇಳಿದರು.
ರೋಷನ್ ಬೇಗ್ ಅವರು ಬರುತ್ತಾರೆಯೋ ಇಲ್ಲವೋ ಗೊತ್ತಿಲ್ಲ. ಬಹಶಃ ಅವರು ನಮ್ಮ ನಾಯಕರ ಜತೆ ಚರ್ಚೆ ಮಾಡಿರಬಹುದು ಆದರೂ ಪಕ್ಷದ ಚೌಕಟ್ಟಿನಲ್ಲಿ ಮೊದಲು ಚರ್ಚೆ ಮಾಡಬೇಕು. ಅನಂತರ ಹಿರಿಯರು ತೀರ್ಮಾನ ಮಾಡುತ್ತಾರೆ ಎಂದರು.
ಬಿಜೆಪಿಯಲ್ಲಿ ಅಸಮಾಧಾನ ಇರುವುದು ಆ ಪಕ್ಷದ ಆಂತರಿಕ ವಿಚಾರ ಮುಖ್ಯಮಂತ್ರಿ ಯಡಿಯೂರಪ್ಪ ಮಾಡಿದ “ಆಪರೇಷನ್ ಕಮಲ’ ಅವರಿಗೆ ಮುಳುವಾಗಿದೆ. ಅವರ ಆಂತರಿಕ ವಿಚಾರದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?