BJP vs Cong; ಸದ್ಯ ಅಧಿಕಾರದಲ್ಲಿದ್ದವರ ಗಂಡಸ್ತನ ಪರೀಕ್ಷೆಯಾಗಬೇಕಿದೆ: ಬೊಮ್ಮಾಯಿ ಕಿಡಿ
ಎಸ್ ಡಿಪಿಐ ಕಾಂಗ್ರೆಸ್ ಹುಟ್ಟು ಹಾಕಿರುವ ಮರಿ....
Team Udayavani, Apr 4, 2024, 10:23 PM IST
ಹಾನಗಲ್ : ‘ಸದ್ಯ ಯಾರು ಅಧಿಕಾರದಲ್ಲಿದ್ದಾರೋ ಅವರ ಗಂಡಸ್ತನ ಪರೀಕ್ಷೆಯಾಗುವುದು’ ಎಂದು ಮಾಜಿ ಸಿಎಂ, ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಅವರು ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ.
ಹಾನಗಲ್ಲ ತಾಲೂಕಿನ ಆಡೂರ ಗ್ರಾಮದಲ್ಲಿ ಮಾತನಾಡಿ, ‘ಕರ್ನಾಟಕದ ಜನತೆ ಸಿದ್ದರಾಮಯ್ಯ ಅವರನ್ನ ಅಧಿಕಾರಕ್ಕೆ ತಂದಿದ್ದಾರೆ.ಅಧಿಕಾರಕ್ಕೆ ತಂದ ಮಾಲಕರು ಕಷ್ಟದಲ್ಲಿದ್ದಾರೆ, ಅವರ ಕಷ್ಟಕ್ಕೆ ಧಾವಿಸುವುದು ಅವರ ಕೆಲಸ. ನಮ್ಮ ಗಂಡಸ್ತನ ನಾವು ಆವಾಗಲೇ ತೋರಿಸಿದ್ದೇವೆ. ಪ್ರವಾಹ ಬಂದಾಗ ನಾವು ಯಾರಿಗೂ ಕಾಯದೆ ಪರಿಹಾರವನ್ನ ಎರಡು ಪಟ್ಟು ಬಿಡುಗಡೆ ಮಾಡಿದ್ದೇವೆ. ಒಂದೇ ತಿಂಗಳಲ್ಲಿ 17 ಲಕ್ಷ ಜನರಿಗೆ ಪರಿಹಾರ ಕೊಟ್ಟ ಗಂಡಸ್ತನ ನಮ್ಮದ್ದಿದೆ’ ಎಂದರು.
‘ನಾವು ಯಾರಿಗೂ ಬೊಟ್ಟು ಮಾಡಿ ತೋರಿಸಲಿಲ್ಲ, ನಿಜವಾದ ಗಂಡಸ್ತನ ಪರೀಕ್ಷೆ ಇವರದ್ದಾಗಬೇಕಿದೆ. ಮೇಲೆ ಬೊಟ್ಟು ಮಾಡಿ ತೋರಿಸದೇ ತಮ್ಮ ಖಜಾನೆಯಿಂದ ದುಡ್ಡು ಬಿಡುಗಡೆ ಮಾಡಿ ತೋರಿಸಲಿ. ರೈತರಿಗೆ ಪರಿಹಾರ ಕೊಡಲು ಇವರ ಖಜಾನೆ ಖಾಲಿಯಾಗಿದೆ. ಕುಂಟು ನೆಪ ಹೇಳುತ್ತಿದ್ದಾರೆ, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಗಂಡಸ್ತನದ ಬಗ್ಗೆ ಮಾತನಾಡುತ್ತಾರೆ’ ಎಂದು ಕಿಡಿ ಕಾರಿದರು.
‘ರಾಮನ ಹೆಸರು ಹೇಳುತ್ತೇವೆ, ರಾಮರಾಜ್ಯವನ್ನು ಮಾಡಿದ್ದೇವೆ. ರಾಜ್ಯದಲ್ಲಿ ಬರುತ್ತಿರುವ ಅಕ್ಕಿ ಮೋದಿ ಕೊಟ್ಟಿರುವುದು, ಬಿಡಿಕಾಳನ್ನ ಸಿದ್ದರಾಮಯ್ಯ ಕೊಟ್ಟಿಲ್ಲ ಇವರಿಗೆ ಯಾವ ನೈತಿಕತೆ ಇದೆ’ ಎಂದುಆಕ್ರೋಶ ಹೊರ ಹಾಕಿದರು.
‘ಎಸ್ ಡಿಪಿಐ ಕಾಂಗ್ರೆಸ್ ಹುಟ್ಟು ಹಾಕಿರುವ ಮರಿ. ಕಾಂಗ್ರೆಸ್ ನವರು ಅದರ ಪಾಲನೆ ಪೋಷಣೆ ಮಾಡಿದ್ದಾರೆ. ಹಾಗಾಗಿ ಅವರು ಅವರ ಜತೆ ಇದ್ದಾರೆ’ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
MUST WATCH
ಹೊಸ ಸೇರ್ಪಡೆ
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…