ಬಸ್ಸಿನಲ್ಲಿ ಮಹಿಳೆಯ ಜಡೆ ಸವರಿದ ಆರೋಪ: ಪ್ರಕರಣ ದಾಖಲು
Team Udayavani, May 27, 2023, 6:21 AM IST
ಬಂಟ್ವಾಳ: ಮಂಗಳೂರು-ಧರ್ಮಸ್ಥಳ ಮಾರ್ಗ ವಾಗಿ ಸಂಚರಿಸುವ ಕೆಎಸ್ಆರ್ಟಿಸಿ ಬಸ್ಸಿನಲ್ಲಿ ವ್ಯಕ್ತಿಯೋರ್ವ ಮಹಿಳೆಯ ಜಡೆ ಸವರುವ ವೀಡಿಯೋವೊಂದರ ಆಧಾರದಲ್ಲಿ ಬಂಟ್ವಾಳ ನಾವೂರು ಗ್ರಾಮ ನಿವಾಸಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ನಾವೂರು ಗ್ರಾಮದ ಪಲ್ಲಿಗುಡ್ಡೆ ನಿವಾಸಿ ಹಮೀದ್ ಪ್ರಕರಣದ ಆರೋಪಿಯಾಗಿದ್ದು, ಹಿಂದೂ ಜಾಗರಣ ವೇದಿಕೆಯ ಬಂಟ್ವಾಳ ತಾಲೂಕು ಅಧ್ಯಕ್ಷ ತಿರುಲೇಶ್ ಬೆಳ್ಳೂರು ಅವರು ಪೊಲೀಸರಿಗೆ ದೂರು ನೀಡಿದ್ದರು.
ವೀಡಿಯೋ ದಾಖಲು
ಘಟನೆಯು ಮೇ 25ರಂದು ಸಂಜೆ 4.30ರ ಸುಮಾರಿಗೆ ನಡೆದಿದ್ದು, ಆರೋಪಿಯು ಮಹಿಳೆ ಕೂತ ಸೀಟಿನ ಹಿಂಬದಿ ಕೂತು ಜಡೆ ಸವರುವ ದೃಶ್ಯ ವೀಡಿಯೋದಲ್ಲಿ ದಾಖಲಾಗಿದೆ. ಜತೆಗೆ ಬೆನ್ನಿನ ಹಿಂಬದಿಯಿಂದ ಸ್ಪರ್ಶಿಸಿ ಮಹಿಳೆಯ ಮಾನಕ್ಕೆ ಕುಂದುಂಟು ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ