ಅಪ್ಪು ಸಮಾಧಿಗೆ ಪುಷ್ಪ ನಮನ : ರಾಜ್ ಕುಟುಂಬಕ್ಕೆ ಅಲ್ಲು ಅರ್ಜುನ್ ಸಾಂತ್ವನ
Team Udayavani, Feb 3, 2022, 4:11 PM IST
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಇಹ ಲೋಕ ತ್ಯಜಿಸಿ ಮೂರು ತಿಂಗಳು ಕಳೆದರೂ ಅವರ ಮೇಲಿನ ಅಭಿಮಾನದ ಪ್ರವಾಹ ಇನ್ನೂ ಹರಿಯುತ್ತಿದ್ದು, ಇದಕ್ಕೆ ಸಾಕ್ಷಿ ಎಂಬಂತೆ ‘ಪುಷ್ಪ’ ಮೂಲಕ ಭಾರಿ ಖ್ಯಾತಿ ಗಳಿಸಿದ ಟಾಲಿವುಡ್ ಐಕಾನಿಕ್ ಸ್ಟಾರ್ ಅಲ್ಲು ಅರ್ಜುನ್ ಅವರು ಗುರುವಾರ ರಾಜ್ ಕುಟುಂಬಕ್ಕೆ ಸಾಂತ್ವನ ಹೇಳಿ, ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ್ದಾರೆ.
ಸದಾಶಿವನಗರದ ಪುನೀತ್ ಅವರ ನಿವಾಸಕ್ಕೆ ಭೇಟಿ ನೀಡಿದ ಅಲ್ಲು ಅರ್ಜುನ್ ಅವರು, ಪುನೀತ್ ಪತ್ನಿ ಅಶ್ವಿನಿ ಅವರಿಗೆ , ಪುತ್ರಿಗೆ ಸಾಂತ್ವನ ಹೇಳಿದರು. ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬಳಿಕ ಪುನೀತ್ ಅವರ ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದರು.
ಸಮಾಧಿ ಭೇಟಿ ವೇಳೆ ನೂರಾರು ಪತ್ರಕರ್ತರು ಅಭಿಮಾನಿಗಳು ಜಮಾವಣೆಗೊಂಡ ಹಿನ್ನಲೆಯಲ್ಲಿ ಅಲ್ಲು ಅರ್ಜುನ್ ಅವರು ಸ್ವಲ್ಪ ಕಿರಿಕಿರಿಯನ್ನು ಅನುಭವಿಸಬೇಕಾಯಿತು. ಪೊಲೀಸರು ಸ್ಥಳದಲ್ಲಿದ್ದು ಭದ್ರತೆ ಕೈಗೊಂಡಿದ್ದರು.
ಸುದ್ದಿ ಗಾರರೊಂದಿಗೆ ಮಾತನಾಡಿದ ಅಲ್ಲೂ ಅರ್ಜುನ್, ನಾನು ಬೆಂಗಳೂರಿಗೆ ಬಂದಾಗ ಅಪ್ಪು ಅವರನ್ನು ಭೇಟಿಯಾಗುತ್ತಿದೆ. ಅವರು ಹೈದರಾಬಾದ್ ಗೆ ಬಂದಾಗ ನನ್ನನ್ನು ಭೇಟಿಯಾಗುತ್ತಿದ್ದರು. ನಮ್ಮಿಬ್ಬರದ್ದು ಮರೆಯಲಾಗದ ಬಾಂಧವ್ಯ ಎಂದರು.
ಡಾನ್ಸ್ ಶೋ ಚೆನ್ನೈನಲ್ಲಿ ನಡೆದಿತ್ತು, ಆ ವೇಳೆ ಒಂದು ಸಂಜೆ ಜೊತೆಯಾಗಿ ಕಳೆದಿದ್ದೆವು, ಅದು ಮರೆಯಲಾಗದ ಕ್ಷಣ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ