ಕಾಫಿ ವಿತ್ ಕರಣ್ ಸೀಸನ್ 8ರ ಶೋನಲ್ಲಿ ನಟ ಯಶ್, ರಿಷಬ್ ಶೆಟ್ಟಿ ಭಾಗಿ? ಕನ್ನಡಿಗರ ಹವಾ…
ಈವರೆಗಿನ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ, ನಟಿಯರೇ ಹೆಚ್ಚಾಗಿ ಭಾಗವಹಿಸಿದ್ದರು.
Team Udayavani, Mar 31, 2023, 1:43 PM IST
ಮುಂಬೈ: ಬಾಲಿವುಡ್ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ ಅವರ ಕಾಫಿ ವಿತ್ ಕರಣ್ ಜನಪ್ರಿಯ ಶೋಗಳಲ್ಲಿ ಒಂದಾಗಿದ್ದು, ಈಗಾಗಲೇ ಸೆಲೆಬ್ರಿಟಿಗಳಾದ ರಣ್ ವೀರ್ ಸಿಂಗ್, ಅಲಿಯಾ ಭಟ್, ವಿಜಯ್ ದೇವರ ಕೊಂಡ, ಅನನ್ಯ ಪಾಂಡೆ, ಅಕ್ಷಯ್ ಕುಮಾರ್, ಸಮಂತ್ ರುತ್ ಪ್ರಭು, ಅಮೀರ್ ಖಾನ್, ಕರೀನಾ ಕಪೂರ್ ಖಾನ್, ಕತ್ರಿನಾ ಕೈಫ್ ಸೇರಿಂದತೆ ಹಲವಾರು ನಟ-ನಟಿಯರು ಶೋನಲ್ಲಿ ಭಾಗಿಯಾಗಿದ್ದಾರೆ.
ಇದನ್ನೂ ಓದಿ:ಐದು ಸಲ ಗೆದ್ದೆ, ಅಲ್ಲೂ ಇಲ್ಲ, ಇಲ್ಲೂ ಮಂತ್ರಿ ಸ್ಥಾನವೂ ಕೊಡಲಿಲ್ಲ! ಎನ್ ವೈ ಜಿ ಅಸಮಧಾನ
ಇದೀಗ ಮುಂಬರು ಕಾಫಿ ವಿತ್ ಕರಣ್ ಎಂಟನೇ ಸೀಸನ್ ಅಗಸ್ಟ್ ಅಥವಾ ಸೆಪ್ಟೆಂಬರ್ ನಲ್ಲಿ ಪ್ರಸಾರವಾಗುವ ನಿರೀಕ್ಷೆ ಇದೆ ಎನ್ನಲಾಗಿದೆ. ವರದಿಯ ಪ್ರಕಾರ, ಸೀಸನ್ 8ರಲ್ಲಿ ಸ್ಯಾಂಡಲ್ ವುಡ್ ನಲ್ಲಿ ಭರ್ಜರಿ ಹವಾ ಎಬ್ಬಿಸಿರುವ ಕೆಜಿಎಫ್ ನಟ ಯಶ್, ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ, ಪುಪ್ಪ ಖ್ಯಾತಿಯ ಅಲ್ಲು ಅರ್ಜುನ್, ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ ಈ ಬಾರಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಬಾಲಿವುಡ್ ಹಂಗಾಮ ವರದಿ ತಿಳಿಸಿದೆ.
ಕಾಫಿ ವಿತ್ ಕರಣ್ ಸೀಸನ್ 7ರಂತೆ ಹೊಸ ಸೀಸನ್ (8ರಲ್ಲಿ) ನಲ್ಲಿ ವೀಕ್ಷಕರಿಗಾಗಿ ಹೊಸ ಅನುಭವ ನೀಡುವಂತಹ ಕುತೂಹಲಕಾರಿ ಅಂಶಗಳನ್ನು ಬಹಿರಂಗಪಡಿಸುವ ಶೋ ಇದಾಗಿರಲಿದೆ ಎಂದು ಮೂಲಗಳು ಹೇಳಿವೆ.
ಈವರೆಗಿನ ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ, ನಟಿಯರೇ ಹೆಚ್ಚಾಗಿ ಭಾಗವಹಿಸಿದ್ದರು. ಇತ್ತೀಚೆಗೆ ದಕ್ಷಿಣ ಭಾರತದ ಸಿನಿಮಾಗಳು ದೊಡ್ಡ ಮಟ್ಟದ ಯಶಸ್ಸು ಗಳಿಸಿದ ಪರಿಣಾಮ ಸೀಸನ್ 8ರಲ್ಲಿ ದಕ್ಷಿಣ ಭಾರತದ ಸ್ಟಾರ್ ನಟ, ನಟಿಯರನ್ನು ಆಹ್ವಾನಿಸಲು ಕರಣ್ ತಂಡ ನಿರ್ಧರಿಸಿರುವುದಾಗಿ ವರದಿ ವಿವರಿಸಿದೆ.
ಕಾಫಿ ವಿತ್ ಕರಣ್ ಶೋನಲ್ಲಿ ಸ್ಯಾಂಡಲ್ ವುಡ್ ನ ಯಶ್, ರಿಷಬ್ ಶೆಟ್ಟಿ ಹಾಗೂ ತೆಲುಗಿನ ಅಲ್ಲು ಅರ್ಜುನ್ ಭಾಗವಹಿಸುವ ಕುರಿತು ಕರಣ್ ಜೋಹರ್ ಈವರೆಗೂ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ʼಖಲ್ನಾಯಕ್ʼ ಸಿನಿಮಾದ ಪ್ರಧಾನ ಪಾತ್ರದ ರೇಸ್ನಲ್ಲಿ ಬಿಟೌನ್ ಸ್ಟಾರ್ಸ್ ಜೊತೆ ಯಶ್, ಅಲ್ಲು?
Malaika Arora: ಮಲೈಕಾಗೆ ಎರಡನೇ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಮಗ; ಶಾಕ್ ಆದ ಮುನ್ನಿ
Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್
Salman Khan: ನಟ ಸಲ್ಮಾನ್ ಖಾನ್ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ
ಪೊಲೀಸ್ ಪೇದೆಯ ಮಗ, ಕಾನೂನು ಪದವೀಧರ ʼಲಾರೆನ್ಸ್ʼ ಕುಖ್ಯಾತ ಗ್ಯಾಂಗ್ ಸ್ಟರ್ ಆದದ್ದೇಗೆ?
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ