ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’
Team Udayavani, Oct 20, 2021, 9:45 PM IST
ಚಂಡೀಗಢ : ಕಾಂಗ್ರೆಸ್ನಿಂದ ಹೊರಬಿದ್ದಿರುವ ಪಂಜಾಬ್ನ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್, ಮಂಗಳವಾರ ಬಿಜೆಪಿಯೊಂದಿಗೆ ಚುನಾವಣೆ ಹೊಂದಾಣಿಕೆ ಮಾಡಿಕೊಳ್ಳಲು ಸಿದ್ಧ ಎಂದಿದ್ದರು. ಇದಕ್ಕೆ ಬುಧವಾರ ಪ್ರತಿಕ್ರಿಯಿಸಿರುವ ಬಿಜೆಪಿ, ನಾವೂ ಕೂಡಾ ಸಿದ್ಧವಿದ್ದೇವೆ ಎಂದು ಹೇಳಿದೆ. ಅಲ್ಲಿಗೆ ಪಂಜಾಬ್ನಲ್ಲಿ ವಿಚಿತ್ರ ರಾಜಕೀಯ ಲೆಕ್ಕಾಚಾರವೊಂದಕ್ಕೆ ವೇದಿಕೆ ಸೃಷ್ಟಿಯಾಗಿದೆ.
ಮಂಗಳವಾರ ಟ್ವೀಟ್ ಮಾಡಿದ್ದ ಅಮರೀಂದರ್, ನಾನು ಹೊಸಪಕ್ಷ ಸ್ಥಾಪಿಸುತ್ತೇನೆ. ರೈತ ಕಾಯ್ದೆಗಳ ವಿವಾದ ಬಗೆಹರಿದರೆ ಬಿಜೆಪಿಯೊಂದಿಗೆ ಚುನಾವಣೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಎಂದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಪಂಜಾಬ್ನ ಬಿಜೆಪಿ ಉಸ್ತುವಾರಿ ದುಷ್ಯಂತ್ ಗೌತಮ್; ನಾವು ಅಮರೀಂದರ್ ಜೊತೆಗೆ ಮೈತ್ರಿಗೆ ಸಿದ್ಧ. ರಾಷ್ಟ್ರೀಯ ದೃಷ್ಟಿಕೋನ ಹೊಂದಿರುವ, ರಾಷ್ಟ್ರೀಯ ಭದ್ರತೆಗೆ ಬಗ್ಗೆ ಕಾಳಜಿ ಹೊಂದಿರುವ ಯಾವುದೇ ಪಕ್ಷದೊಂದಿಗೆ ನಾವು ಮೈತ್ರಿ ಮಾಡಿಕೊಳ್ಳುತ್ತೇವೆ ಎಂದಿದ್ದಾರೆ.
ಒಂದು ಕಾಲದಲ್ಲಿ ಅಮರೀಂದರ್ ಸಿಂಗ್, ಬಿಜೆಪಿಗೆ ಪ್ರಬಲ ಎದುರಾಳಿಯಾಗಿದ್ದರು. ಶಿರೋಮಣಿ ಅಕಾಲಿದಳ ಮಿತ್ರಸ್ಥಾನದಲ್ಲಿತ್ತು. ಈಗ ಅಕಾಲಿದಳ-ಬಿಜೆಪಿ ಬೇರೆಯಾಗಿವೆ. ಅಮರೀಂದರ್ ಬಿಜೆಪಿಯೊಂದಿಗೆ ಕೈಜೋಡಿಸಿದ್ದಾರೆ!
ಇದನ್ನೂ ಓದಿ :ಕ್ಯಾಶ್ಲೆಸ್ ವ್ಯವಹಾರದತ್ತ ಕೊಂಕಣ ರೈಲ್ವೇ : ಎಸ್ ಬಿಐನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
MUST WATCH
ಹೊಸ ಸೇರ್ಪಡೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ