ಅಮರನಾಥ ಯಾತ್ರೆಯಲ್ಲಿ ಸಿಲುಕಿಕೊಂಡ 350 ಕನ್ನಡಿಗರು


Team Udayavani, Jul 10, 2022, 5:50 AM IST

ಅಮರನಾಥ ಯಾತ್ರೆಯಲ್ಲಿ ಸಿಲುಕಿಕೊಂಡ 350 ಕನ್ನಡಿಗರು

ಬೆಂಗಳೂರು:ಅಮರನಾಥ ಯಾತ್ರೆಗೆ ತೆರಳಿರುವ ರಾಜ್ಯದ 350 ಮಂದಿ ಸಂಕಷ್ಟಕ್ಕೆ ಸಿಲುಕಿದ್ದು, ಅವರನ್ನು ತಾಯ್ನಾಡಿಗೆ ಕರೆತರುವ ಪ್ರಯತ್ನ ನಡೆಯುತ್ತಿದೆ.

ಅಮರನಾಥ ಗುಹೆಯ ಬಳಿ ಮೇಘ ಸ್ಫೋಟದಿಂದ ಪ್ರವಾಹ ಉಂಟಾಗಿ ಯಾತ್ರೆಗೆ ತೆರಳಿದ್ದ 350 ಕನ್ನಡಿಗರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಯಾತ್ರೆಗೆ ತೆರಳುವ ರಸ್ತೆಯ ಬೇರೆ ಬೇರೆ ಭಾಗಗಳಲ್ಲಿ ರಾಜ್ಯದ 350 ಯಾತ್ರಿಗಳು ಪರದಾಡುತ್ತಿದ್ದಾರೆ. ಸಂಕಷ್ಟಕ್ಕೆ ಸಿಲುಕಿರುವವರ ನೆರವಿಗಾಗಿ ರಾಜ್ಯ ಸರ್ಕಾರ ಆರಂಭಿಸಿರುವ ಸಹಾಯವಾಣಿಗೆ ಈವರೆಗೆ ಯಾತ್ರೆಯಲ್ಲಿ ಸಿಕ್ಕಿಹಾಕಿಕೊಂಡವರ ಕುಟುಂಬಸ್ಥರಿಂದ 48 ಕರೆಗಳು ಬಂದಿದೆ. ಅಲ್ಲಿ ಸಿಲುಕಿಕೊಂಡವರಿಗೆ ನೆಟ್‌ವರ್ಕ್‌ ಸಮಸ್ಯೆಯಿಂದ ಕರೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದು ಬಂದಿದೆ.

ಜಮ್ಮು ಕಾಶ್ಮೀರ ಸರ್ಕಾರ ಮತ್ತು ಎನ್‌ಡಿಆರ್‌ಎಫ್ ತಂಡಗಳು ಪರಿಹಾರ ಕೇಂದ್ರಗಳನ್ನು ಆರಂಭಿಸಿದ್ದು, ಸಿಕ್ಕಿಬಿದ್ದ ಕರ್ನಾಟಕದ ಯಾತ್ರಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಸದ್ಯ ರಾಜ್ಯದಿಂದ ಹೋಗಿರುವ ಯಾತ್ರಿಗಳಿಗೆ ಯಾವುದೇ ಪ್ರಾಣಪಾಯ ಸಂಭವಿಸಿರುವ ಕುರಿತು ವರದಿಯಾಗಿಲ್ಲ. ಸಿಕ್ಕಿಹಾಕಿಕೊಂಡಿರುವವರ ಪೈಕಿ ಬಹುತೇಕ ಯಾತ್ರಿಗಳು ಬೆಂಗಳೂರು, ರಾಮನಗರ, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಶಿವಮೊಗ್ಗ, ಬಾಗಲಕೋಟೆ, ದಕ್ಷಿಣ ಕನ್ನಡ ಹಾಗೂ ಕೋಲಾರ ಜಿಲ್ಲೆ ಮೂಲದವರಾಗಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ತಿಳಿಸಿದೆ.

ಭಯಾನಕ ಅನುಭವ ಹಂಚಿಕೊಂಡ ಯಾತ್ರಿಗಳು
ಕ್ಷಣ-ಕ್ಷಣಕ್ಕೊಂದು ಮಾದರಿಯ ವಾತಾವರಣ, ರಸ್ತೆಯುದ್ದಕ್ಕೂ ಅಲ್ಲಲ್ಲಿ ಕುಸಿತಗಳು, ಜೋರಾದ ಮಳೆ, ಕುದುರೆ ಸವಾರಿ ಮಾಡಲಾಗದೇ ನಡೆದುಕೊಂಡೇ ಹೋಗುವ ಅನಿವಾರ್ಯತೆ, ಜೀವ ಕೈಯಲ್ಲಿ ಹಿಡಿದು ಹೋಗುವ ಪರಿಸ್ಥಿತಿ…. ಇದು ಅಮರನಾಥ ಯಾತ್ರೆಗೆ ಹೋಗಿ ಮರಳಿದ ಕನ್ನಡಿಗರ ಅಭಿಪ್ರಾಯ.

ಮೇಘಸ್ಫೋಟದಿಂದ ಹಲವು ಮಂದಿ ಯಾತ್ರಿಗಳು ಬಲಿಯಾಗಿದ್ದು, ಬದುಕುಳಿದು ಬಂದ ಕನ್ನಡಿಗರು ತಮ್ಮ ಭಯಾನಕ ಅನುಭವವನ್ನು ಹಂಚಿಕೊಂಡಿದ್ದಾರೆ.

ಮೇಘಸ್ಫೋಟಗೊಂಡಾಗ ನಮ್ಮ ಕಣ್ಣೆದುರಿಗೆ ಹಲವು ಮಂದಿ ಕೊಚ್ಚಿಕೊಂಡು ಹೋಗಿದ್ದಾರೆ. ನಾವು ಪವಾಡ ಸದೃಶವಾಗಿ ಕೂದಲೆಳೆ ಅಂತರದಲ್ಲಿ ಬದುಕುಳಿದಿದ್ದೇವೆ. ಪ್ರವಾಹಕ್ಕೆ ಸಿಲುಕಿ ನಮ್ಮ ಮುಂದಿದ್ದ ಬೆಟ್ಟ, ಗುಡ್ಡಗಳು ಸಂಪೂರ್ಣವಾಗಿ ಕುಸಿದು ನೆಲಕ್ಕುರುಳಿದ್ದವು. ಇದೀಗ ಭಾರತೀಯ ಸೇನೆ, ಎನ್‌ಡಿಆರ್‌ಎಫ್ ತಂಡ ನಮಗೆ ಆಶ್ರಯ ಒದಗಿಸಿದ್ದು, ಸದ್ಯ ನಮ್ಮ ತಂಡ ಸುರಕ್ಷಿತವಾಗಿದೆ ಎಂದು ಯಾತ್ರೆಯಲ್ಲಿ ಸಿಲುಕಿಕೊಂಡಿರುವ ಯಾತ್ರಿಗಳ ತಂಡ ತಿಳಿಸಿದೆ.

ಯಾತ್ರೆಗೆ ತೆರಳಿ ಪಾರಾಗಿ ಬಂದ ಬೆಂಗಳೂರು ಬಾಣಸವಾಡಿಯ ನಿವಾಸಿ ಗಾಯತ್ರಿ ಎಂಬುವವರು ತಮ್ಮ ಕರಾಳ ಅನುಭವವನ್ನು ಉದಯವಾಣಿ ಜತೆಗೆ ಹಂಚಿಕೊಂಡಿದ್ದಾರೆ.

ಬೆಂಗಳೂರಿನಿಂದ ಜು.4ಕ್ಕೆ 48 ಮಂದಿಯ ತಂಡದ ಜತೆಗೆ ಅಮರನಾಥ ಯಾತ್ರೆಗೆ ಹೊರಟಿದ್ದೆವು. ಜು.5ರಂದು ಬಾಲ್ಟಲ್‌ನಿಂದ ಅಮರನಾಥ ಯಾತ್ರೆಗೆ ಕುದುರೆ ಮೇಲೆ ಸವಾರಿ ಮಾಡಿಕೊಂಡು ಹೋಗಿ ಬರುವ ವೇಳೆ ನಡು ರಸ್ತೆಯಲ್ಲಿ ಗುಡ್ಡಕುಸಿತ ಉಂಟಾಗಿ ಮುಂದೆ ಸಾಗಲಾಗದೇ ಪರದಾಡಬೇಕಾಗಿತ್ತು. ಕ್ಷಣಕ್ಕೊಂದು ಬಾರಿ ಇಡೀ ವಾತಾವರಣವೇ ಬದಲಾವಣೆ ಯಾಗುತ್ತಿತ್ತು. ನನ್ನ ಕಣ್ಣ ಮುಂದೆಯೇ ಹಲವು ಮಂದಿ ಗುಡ್ಡದಂತಹ ಪ್ರದೇಶದಿಂಧ ಕೆಳಗೆ ಬಿದ್ದು ಗಾಯಮಾಡಿಕೊಂಡಿದ್ದರು. ಕೂಡಲೇ ಎನ್‌ಡಿಆರ್‌ಎಫ್ ಹಾಗೂ ಭಾರತೀಯ ಸೇನಾ ಪಡೆ ನಾವಿದ್ದಲ್ಲಿಗೆ ಬಂದು ನಮ್ಮನ್ನು ಸುರಕ್ಷಿತ ಪ್ರದೇಶಕ್ಕೆ ಕರೆದುಕೊಂಡು ಹೋಗಿತ್ತು. 20 ಕಿ.ಮೀಗೂ ಹೆಚ್ಚು ದೂರ ಕಾಲ್ನಡಿಗೆಯಲ್ಲೇ ಬರಬೇಕಾಯಿತು. ನಾವು ಬಂದಿದ್ದ ಕುದುರೆಗಳು ಮುಂದೆ ಸಾಗಲಾಗದೇ ಅಲ್ಲೇ ನಿಂತಿದ್ದು, ಅವುಗಳನ್ನು ರಕ್ಷಣೆ ಮಾಡಲು ಸಾಧ್ಯವಾಗುತ್ತಿಲ್ಲ.

ಊಟ, ನಿದ್ದೆಯ ಪರಿವೇ ಇಲ್ಲದೇ ಪ್ರಾಣ ಕೈಯಲ್ಲಿ ಹಿಡಿದುಕೊಂಡು ಊರು ತಲುಪಿದರೆ ಸಾಕು ಎನ್ನಿಸಿತ್ತು. ಜೋರಾದ ಪ್ರವಾಹದಿಂದ ಅದೃಷ್ಟವಶಾತ್‌ ಪಾರಾಗಿ ಸಾವು-ಬದುಕಿನ ನಡುವೆ ಹೋರಾಡುತ್ತಾ ಕೊನೆಗೂ ನಮ್ಮ ತಂಡ ಜು.7ರಂದು ಶ್ರೀನಗರಕ್ಕೆ ಮುಟ್ಟಿತ್ತು. ನಂತರ ಶ್ರೀನಗರದಿಂದ ದೆಹಲಿಗೆ ಬಂದು ಜು.8ರಂದು ತಡರಾತ್ರಿ ತಾಯ್ನಾಡಿಗೆ ಬಂದಿದ್ದೇವೆ ಎಂದು ಗಾಯತ್ರಿ ತಿಳಿಸಿದ್ದಾರೆ.

ಅಮರ ನಾಥ್‌ ಯಾತ್ರೆ ಮುಗಿಸಿ ಬಂದಿರುವ ನಾಗರಾಜ್‌ ಸೆಲ್ವನಾಥ್‌ ಮಾತನಾಡಿ, ನಾವು 16 ಜನ ಸ್ನೇಹಿತರು ಹಾಗೂ ಕುಟುಂಬದೊಂದಿಗೆ ಹೋಗಿದ್ದೆವು. ಜು.6ರಂದು ನಮಗೆ ಬಾಲ್ಟಾ ಪ್ರಯಾಣಕ್ಕೆ ಅನುಮತಿ ಸಿಕ್ಕಿತ್ತು. ಆದರೆ, ಜು.5ನೇ ತಾರೀಕು ವಾತವರಣ ಏರುಪೇರಿನಿಂದ ಯಾತ್ರೆ ಕ್ಯಾನ್ಸಲ್‌ ಆಗಿದೆ ಎಂದಿದ್ದರು. ನಂತರ ಇದ್ದಕ್ಕಿದ್ದಂತೆ ಯಾತ್ರೆಗೆ ಹೊರಡಿ ವಾತವರಣ ಸರಿಯಾಗಿದೆ ಎಂದರು. ಹೇಗೋ ನಾವು ಜು.7ರಂದು ಮಧ್ಯಾಹ್ನ ದರ್ಶನ ಮಾಡಿದ್ದೆವು. ನಂತರ ಅಲ್ಲಿಂದ ಹೊರಟೆವು. ನಾವು ಹೊರಟ ನಂತರ ಸಂಜೆ ಅಲ್ಲಿ ಬ್ಲಾಸ್ಟ್‌ ಆಗಿದೆ.

ಕೆಲವೇ ನಿಮಿಷದಲ್ಲಿ ನಾವು ಅಪಘಾತದಿಂದ ತಪ್ಪಿಸಿಕೊಂಡಿದ್ದೇವೆ. ಪ್ರವಾಹ ಬಂದಿರುವ ಜಾಗದಲ್ಲಿ ನಾವು ನಮ್ಮ ಸಾಮಾಗ್ರಿಗಳನ್ನು ಇಟ್ಟು ದರ್ಶನಕ್ಕೆ ಹೋಗಿದ್ದೆವು. ಇದೀಗ ಅದೇ ಸ್ಥಳದಲ್ಲಿ ಪ್ರವಾಹ ಆಗಿರೋದು ನೋಡಿದರೆ ಭಯ ಆಗುತ್ತದೆ. ದೇವರ ಅನುಗ್ರಹದಿಂದ ಸುರಕ್ಷಿತವಾಗಿ ಬಂದಿದ್ದೇವೆ.

ಅಮರನಾಥ ಯಾತ್ರೆಯಲ್ಲಿ ಸಿಕ್ಕಿಹಾಕಿಕೊಂಡಿರುವ ಕೆಲ ಕನ್ನಡಿಗರು ರಕ್ಷಣೆಗಾಗಿ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಅಲ್ಲಿನ ಸೇನೆ, ಎನ್‌ಡಿಆರ್‌ಎಫ್, ಐಟಿಬಿಪಿ, ಸಿಆರ್‌ಪಿಎಫ್, ಬಿಎಸ್‌ಫ್ ಸೇರಿ ಇನ್ನೀತರ ತಂಡಗಳು ಜಂಟಿಯಾಗಿ ಕಾರ್ಯಾಚರಣೆಯಲ್ಲಿ ತೊಡಗಿದೆ. ರಕ್ಷಣಾ ಕಾರ್ಯದಲ್ಲಿ ತೊಡಗಿರುವವರ ಜತೆಗೆ ನಮ್ಮ ತಂಡ ಸಂಪರ್ಕದಲ್ಲಿದೆ.
-ಮನೋಜ್‌ ರಾಜನ್‌, ಆಯುಕ್ತ, ಕೆಎಸ್‌ಡಿಎಂಎ

ಯಾತ್ರೆಯಲ್ಲಿ ಸಿಲುಕಿಕೊಂಡವರು ಸಹಾಯವಾಣಿಗೆ ಕರೆ ಮಾಡಿ ಸಹಾಯಕ್ಕಾಗಿ ಸಂಪರ್ಕಿಸಬಹುದಾಗಿದೆ.
*ಎನ್‌ಡಿಆರ್‌ಎಫ್-011-2343852,001-23438253,
*ಕಾಶ್ಮೀರ್‌ ಡಿವಿಜನಲ್‌ ಹೆಲ್ಪ್ ಲೈನ್‌- 0194-2496240
*ಶೆನ್‌ ಬೋರ್ಡ್‌ ಹೆಲ್ಪ್ ಲೈನ್‌- 0194-2313149
*ಪೊಲೀಸ್‌ ಕಂಟ್ರೋಲ್‌ ರೂಂ-9596777669, 9419051940, 01932225870, 01932222870,
*ಜಂಟಿ ಪೊಲೀಸ್‌ ನಿಯಂತ್ರಣ ಕೊಠಡಿ ಪಹಲ್ಗಾಮ್‌-9596779039, 9797796217, 01936243233, 01936243018.
ಕರ್ನಾಟಕ ಎಮರ್ಜೆನ್ಸಿ ಆಪರೇಷನ್‌ ಸೆಂಟರ್‌-080 1070, 22340676.

ಟಾಪ್ ನ್ಯೂಸ್

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

choo mantar kannada movie

Sharan; ಮೇ 10ಕ್ಕೆ ‘ಛೂ ಮಂತರ್‌’ ತೆರೆಗೆ ಸಿದ್ಧ

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

MP B.Y. Raghavendra: “ಬಿಜೆಪಿಯಿಂದ ಉತಮ ಪ್ರಣಾಳಿಕೆ ಬಿಡುಗಡೆ’ʼ

aditya;s kangaroo movie

Aditya; ಟ್ರೇಲರ್ ನಲ್ಲಿ ‘ಕಾಂಗರೂ’ ದರ್ಶನ; ಮೇ.3ರಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.