ಮುಕೇಶ್ ಅಂಬಾನಿ ಮತ್ತು ಕುಟುಂಬಕ್ಕೆ ದೇಶ, ವಿದೇಶದಲ್ಲೂ ಝಡ್ ಪ್ಲಸ್ ಭದ್ರತೆ ನೀಡಿ: ಸುಪ್ರೀಂ
ತ್ರಿಪುರಾ ಹೈಕೋರ್ಟ್ ನಿರ್ದೇಶನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಕುರಿತು ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
Team Udayavani, Mar 1, 2023, 11:15 AM IST
ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮತ್ತು ಆಡಳಿತ ನಿರ್ದೇಶಕರಾಗಿರುವ ಮುಕೇಶ್ ಅಂಬಾನಿ ಹಾಗೂ ಕುಟುಂಬ ಸದಸ್ಯರಿಗೆ ಭಾರತ ಹಾಗೂ ವಿದೇಶಗಳಲ್ಲಿಯೂ ಉನ್ನತ ಝಡ್ ಪ್ಲಸ್ ಭದ್ರತೆಯನ್ನು ಒದಗಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.
ಇದನ್ನೂ ಓದಿ:ಆಸ್ಕರ್ ವೇದಿಕೆಯಲ್ಲಿ ʼನಾಟು ನಾಟುʼ ಹಾಡಿಗೆ ಹೆಜ್ಜೆ ಹಾಕ್ತಾರ ಜೂ.ಎನ್ ಟಿಆರ್, ರಾಮ್ಚರಣ್?
ದೇಶ ಹಾಗೂ ವಿದೇಶಗಳಲ್ಲಿ ಉನ್ನತ ಝಡ್ ಪ್ಲಸ್ ಭದ್ರತೆಗೆ ತಗಲುವ ವೆಚ್ಚವನ್ನು ಮುಕೇಶ್ ಅಂಬಾನಿ ಭರಿಸಬೇಕು ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ. ಅಂಬಾನಿ ಹಾಗೂ ಕುಟುಂಬ ಸದಸ್ಯರಿಗೆ ಝಡ್ ಪ್ಲಸ್ ಭದ್ರತೆ ನೀಡುವಂತೆ ಸುಪ್ರೀಂಕೋರ್ಟ್ ಪೀಠದ ಜಸ್ಟೀಸ್ ಮುರಾರಿ ಮತ್ತು ಜಸ್ಟೀಸ್ ಅಸಾನುದ್ದೀನ್ ಅಮಾನುಲ್ಲಾ ಅವರನ್ನೊಳಗೊಂಡ ಪೀಠ ಈ ಆದೇಶವನ್ನು ನೀಡಿದೆ.
ಮುಂಬೈನಲ್ಲಿ ವಾಸವಾಗಿರುವ ಮುಕೇಶ್ ಅಂಬಾನಿ ಮತ್ತು ಕುಟುಂಬ ಸದಸ್ಯರಿಗೆ ಭದ್ರತೆ ನೀಡುವುದು ಮಹಾರಾಷ್ಟ್ರ ಸರ್ಕಾರ ಮತ್ತು ಗೃಹ ಸಚಿವಾಲಯದ ಹೊಣೆಯಾಗಿದ್ದು, ಇನ್ನುಳಿದಂತೆ ದೇಶಾದ್ಯಂತ ಹಾಗೂ ವಿದೇಶಗಳಿಗೆ ಪ್ರಯಾಣಿಸುವಾಗ ಝಡ್ ಪ್ಲಸ್ ಭದ್ರತೆ ಒದಗಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
“ಒಂದು ವೇಳೆ ಮುಕೇಶ್ ಅಂಬಾನಿ ಹಾಗೂ ಕುಟುಂಬಕ್ಕೆ ಬೆದರಿಕೆ ಇದೆ ಎಂಬ ಅಭಿಪ್ರಾಯವನ್ನು ನಾವು ಪರಿಗಣಿಸುತ್ತೇವೆ. ಆ ನಿಟ್ಟಿನಲ್ಲಿ ಉನ್ನತ ಝಡ್ ಪ್ಲಸ್ ಭದ್ರತೆಯ ಖರ್ಚು-ವೆಚ್ಚವನ್ನು ಅಂಬಾನಿಯೇ ಭರಿಸಬೇಕು ಎಂದು ಅರ್ಜಿ ವಿಚಾರಣೆ ವೇಳೆ ಅಂಬಾನಿ ಪರ ವಕೀಲರಿಗೆ ಕೋರ್ಟ್ ತಿಳಿಸಿರುವುದಾಗಿ” ವರದಿ ಹೇಳಿದೆ.
ಅಂಬಾನಿ ಕುಟುಂಬಕ್ಕೆ ಝಡ್ ಪ್ಲಸ್ ಭದ್ರತೆಯನ್ನು ಒದಗಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ತ್ರಿಪುರಾದ ಅಗರ್ತಾಲಾ ಹೈಕೋರ್ಟ್ ಕೇಂದ್ರ ಸರ್ಕಾರದಿಂದ ಮಾಹಿತಿ ಕೇಳಿತ್ತು. ಆದರೆ ತ್ರಿಪುರಾ ಹೈಕೋರ್ಟ್ ನಿರ್ದೇಶನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಕುರಿತು ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ