ಹೊರ ರೋಗಿಗಳಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೂ ಆ್ಯಂಬ್ಯುಲೆನ್ಸ್ ಸೇವೆ : ಡಿಸಿಎಂ
Team Udayavani, Apr 25, 2021, 8:41 PM IST
ಬೆಂಗಳೂರು: ನಗರದ ಪಶ್ಚಿಮ ವಲಯದಲ್ಲಿ ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ತೀವ್ರ ಪ್ರಯತ್ನ ನಡೆಸುತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಭಾನುವಾರ ಪಶ್ಚಿಮ ವಲಯದ ಅಧಿಕಾರಿಗಳ ಸಭೆ ನಡೆಸಿದರು.
ಈ ಸಭೆಯ ನಂತರ ಮಾತನಾಡಿದ ಡಿಸಿಎಂ, “ಪಶ್ಚಿಮ ವಿಭಾಗದಲ್ಲಿ ಪರಿಸ್ಥಿತಿಯನ್ನು ಬಹಳ ಉತ್ತಮವಾಗಿ ನಿರ್ವಹಣೆ ಮಾಡಲಾಗುತ್ತಿದೆ. ವೈದ್ಯರು ತಮ್ಮ ಜೀವನ್ನು ಪಣಕ್ಕಿಟ್ಟು ಸೇವೆ ಮಾಡುತ್ತಿದ್ದಾರೆ. ಇನ್ನೂ ಹೆಚ್ಚು ಸೇವೆ ಮಾಡಲು ಪ್ರಯತ್ನ ಮಾಡಲಾಗುತ್ತಿದೆ” ಎಂದರು.
ಮಲ್ಲೇಶ್ವರದ ಕೆ.ಸಿ ಜನರಲ್ ಆಸ್ಪತ್ರೆ ಸೇರಿದಂತೆ ಎಲ್ಲೆಡೆ ಹೆಚ್ಚು ಸೋಂಕಿತರಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗುತ್ತಿದೆ. ಈ ಆಸ್ಪತ್ರೆಯಲ್ಲಿ ಹೊಸದಾಗಿ ಒಪಿಡಿಯೊಂದನ್ನು ತೆರೆಯಲಾಗುತ್ತಿದೆ. ಈವರೆಗೂ ಒಳರೋಗಿಗಳಿಗೂ ಚಿಕಿತ್ಸೆ ನೀಡಲು ಮಾತ್ರ ಆ್ಯಂಬ್ಯುಲೆನ್ಸ್ ಬಳಕೆ ಮಾಡಲಾಗುತ್ತಿತ್ತು. ಇನ್ನು ಮುಂದೆ ಹೊರ ರೋಗಿಗಳಾಗಿ ಚಿಕಿತ್ಸೆ ಪಡೆಯುವ ಸೋಂಕಿತರಿಗೂ ಆಂಬುಲೆನ್ಸ್ ಸೇವೆ ಒದಗಿಸಲಾಗುವುದು ಎಂದು ಡಿಸಿಎಂ ತಿಳಿಸಿದರು.
ಇದನ್ನೂ ಓದಿ :ಗೌತಮ್ ಸೇವೆಗೆ ಹೆಗಲು ಕೊಟ್ಟು ನಿಜ ಜೀವನದಲ್ಲಿ ಮತ್ತೊಮ್ಮೆ ಹೀರೊ ಆದ ಅಕ್ಷಯ್ ಕುಮಾರ್!
ಇನ್ನು ಮೂರು ದಿನಗಳಲ್ಲಿ ಈ ವಿಭಾಗದಲ್ಲಿ ಇನ್ನಷ್ಟು ಉತ್ತಮವಾಗಿ ಕೋವಿಡ್ ನಿರ್ವಹಣೆಯ ವ್ಯವಸ್ಥೆಯನ್ನು ಬಲಪಡಿಸುತ್ತೇವೆ ಎಂದು ಅವರು ತಿಳಿಸಿದರು.
ಸಂಸದ ಪಿ.ಸಿ.ಮೋಹನ್, ಪಶ್ಚಿಮ ವಲಯದ ಉಸ್ತುವಾರಿ ಐಎಎಸ್ ಅಧಿಕಾರಿ ಉಜ್ವಲ್ ಘೋಷ್ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ