ಭಾರತದ ವಿರುದ್ಧ ಎಂದಿಗೂ ಪಣ ಕಟ್ಟಬೇಡಿ: ವಿದೇಶಿ ಮಾಧ್ಯಮಗಳಿಗೆ ಆನಂದ್ ಮಹೀಂದ್ರ ಎಚ್ಚರಿಕೆ
Team Udayavani, Feb 4, 2023, 4:30 PM IST
ಮುಂಬೈ: ಸದಾ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಮೂಲಕ ಟ್ರೆಂಡ್ ನಲ್ಲಿರುವ ಖ್ಯಾತ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರ ಅವರು ದೇಶದ ಉದ್ಯಮ ಕ್ಷೇತ್ರ ಮತ್ತು ಭಾರತದ ಆರ್ಥಿಕತೆ ಕುರಿತು ಮಾಧ್ಯಮಗಳಲ್ಲಿ ಚರ್ಚೆ ನಡೆಯುತ್ತಿರುವ ಬಗ್ಗೆ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಪ್ರಸಕ್ತ ವಿದ್ಯಮಾನಗಳ ಕುರಿತು ನಡೆಯುತ್ತಿರುವ ಚರ್ಚೆಯ ನಿಟ್ಟಿನಲ್ಲಿ ಟ್ವೀಟ್ ಮಾಡಿರುವ ಆನಂದ್ ಮಹೀಂದ್ರ ಅವರು, “ ಭಾರತದ ವಿರುದ್ಧ ಎಂದಿಗೂ ಪಂಥ (ಬೆಟ್) ಕಟ್ಟಬೇಡಿ” ಎಂದು ಜಾಗತಿಕ ಮಾಧ್ಯಮಗಳಿಗೆ ಸವಾಲು ಹಾಕಿದ್ದಾರೆ.
ಇದನ್ನೂ ಓದಿ:ಕೇಜ್ರಿವಾಲ್ ರಾಜೀನಾಮೆಗೆ ಒತ್ತಾಯಿಸಿ ದೆಹಲಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ…
ಉದ್ಯಮ ಕ್ಷೇತ್ರದ ಸವಾಲುಗಳು ಹಾಗೂ ಜಾಗತಿಕ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವ ಭಾರತದ ಗುರಿಯನ್ನು ಹಾಳುಗಡೆವಬಹುದೆಂದು ಜಾಗತಿಕ ಮಾಧ್ಯಮಗಳು ಭಾವಿಸಿವೆಯೇ? ಭಾರತ ದೀರ್ಘಕಾಲದಿಂದ ಭೂಕಂಪಗಳು, ಬರಗಾಲ, ಆರ್ಥಿಕ ಹಿಂಜರಿತ, ಯುದ್ಧಗಳು, ಭಯೋತ್ಪಾದಕ ದಾಳಿಗಳನ್ನು ಎದುರಿಸಿರುವುದನ್ನು ನಾನು ಈ ದೇಶದಲ್ಲಿ ಕಂಡಿದ್ದೇನೆ. ನಾನು ಹೇಳುವುದೊಂದೇ..ಭಾರತದ ವಿರುದ್ಧ ಎಂದಿಗೂ ಪಣ(ಹಿಟ್) ಕಟ್ಟಬೇಡಿ ಎಂದು ಆನಂದ್ ಮಹೀಂದ್ರ ಟ್ವೀಟ್ ಮಾಡಿದ್ದಾರೆ.
ಅದಾನಿ ನೇತೃತ್ವದ ಸಮೂಹ ಸಂಸ್ಥೆಗಳು ಅವ್ಯವಹಾರದಲ್ಲಿ ತೊಡಗಿರುವುದಾಗಿ ಅಮೆರಿಕ ಮೂಲದ ಹಿಂಡನ್ ಬರ್ಗ್ ಸಂಸ್ಥೆ ವರದಿಯನ್ನು ಬಹಿರಂಗಪಡಿಸಿದ ಬೆನ್ನಲ್ಲೇ ಅದಾನಿ ಗ್ರೂಪ್ ನ ಷೇರುಗಳ ಮೌಲ್ಯ ಭಾರೀ ಪ್ರಮಾಣದಲ್ಲಿ ಕುಸಿತ ಕಾಣಲು ಪ್ರಾರಂಭವಾಗಿತ್ತು. ಈ ನಿಟ್ಟಿನಲ್ಲಿ ಮಾಧ್ಯಮಗಳಲ್ಲಿ ಭರ್ಜರಿ ಚರ್ಚೆ ನಡೆಯತೊಡಿದ್ದು, ಇದಕ್ಕೆ ಕೈಕಾರಿಕೋದ್ಯಮಿ ಆನಂದ್ ಮಹೀಂದ್ರ ಈ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ