ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ: ಮಥುರಾದಲ್ಲಿ ಅಮಿತ್ ಶಾ
ಅಖಿಲೇಶ್ ಯಾದವ್ ಅವರು ಚುನಾವಣೆಯಲ್ಲಿ ಮತ್ತೆ ತಮ್ಮ ಪಕ್ಷವನ್ನು ಅಧಿಕಾರ ತನ್ನಿ ಎಂದು ಹೇಳುತ್ತಿದ್ದಾರೆ
Team Udayavani, Jan 27, 2022, 2:46 PM IST
ನವದೆಹಲಿ: ಉತ್ತರಪ್ರದೇಶದಲ್ಲಿನ 20 ಕೋಟಿಗೂ ಅಧಿಕ ಜನರು ಪ್ರಗತಿಯಾಗದ ಹೊರತು ಭಾರತವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ನಿಮ್ಮ ವಿಶ್ವಾಸ ಮತ್ತು ನಂಬಿಕೆಯಿಂದಾಗಿ ಉತ್ತರಪ್ರದೇಶ ಇಂದು ಪ್ರಗತಿಯಲ್ಲಿದೆ. ಈ ನಿಟ್ಟಿನಲ್ಲಿ ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ನುಡಿದಿದ್ದಾರೆ.
ಇದನ್ನೂ ಓದಿ:ಸವದಿ ಡಿ.ಕೆ.ಶಿವಕುಮಾರ್ ಸಂಪರ್ಕದಲ್ಲಿದ್ದಾರೆ: ಲಖನ್ ಜಾರಕಿಹೊಳಿ ಬಾಂಬ್
ಗುರುವಾರ(ಜನವರಿ 27) ಮಥುರಾದಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ನಿಗದಿತ ಜನರನ್ನು ಉದ್ದೇಶಿಸಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುತ್ತ, ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಚುನಾವಣೆಯಲ್ಲಿ ಮತ್ತೆ ತಮ್ಮ ಪಕ್ಷವನ್ನು ಅಧಿಕಾರ ತನ್ನಿ ಎಂದು ಹೇಳುತ್ತಿದ್ದಾರೆ. ಅಂದರೆ ಅದರ ಅರ್ಥ ಉತ್ತರಪ್ರದೇಶದಲ್ಲಿ ಪುನಃ ಗೂಂಡಾರಾಜ್ಯ ಮರಳಿದೆ ಎಂಬುದಾಗಿದೆ ಎಂದು ಶಾ ತಿರುಗೇಟು ನೀಡಿದ್ದಾರೆ.
ಅಖಿಲೇಶ್ ಯಾದವ್ ಅವರು ಭಾರತೀಯ ಜನತಾ ಪಕ್ಷ ಸಮಾಜವಾದಿ ಪಕ್ಷ ಪ್ರಮುಖ ಸ್ಪರ್ಧಿ ಎಂಬುದಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ. ಫೆಬ್ರುವರಿ 10ರಿಂದ ಆರಂಭವಾಗಲಿರುವ ವಿಧಾನಸಭಾ ಚುನಾವಣೆಯಲ್ಲಿ ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಏರುವ ಬಗ್ಗೆ ಯಾದವ್ ಭರವಸೆ ಹೊಂದಿರುವುದಾಗಿ ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಈ ಹಿಂದೆ ಗೂಂಡಾಗಳು, ಕ್ರಿಮಿನಲ್ಸ್ ಗಳಿಂದಾಗಿ ಪೊಲೀಸರು ಕೂಡಾ ಭಯಪಡುತ್ತಿದ್ದರು. ಮಹಿಳೆಯರು ಮತ್ತು ಯುವತಿಯರು ಮನೆಯಿಂದ ಹೊರಹೋಗಲು ಆತಂಕಪಡುತ್ತಿದ್ದರು. ಆದರೆ ಇಂದು ಉತ್ತರಪ್ರದೇಶದಲ್ಲಿ ಪರಿಸ್ಥಿತಿ ಬದಲಾಗಿದೆ. ಈಗ ಉತ್ತರಪ್ರದೇಶದಲ್ಲಿ ಗೂಂಡಾಗಳು, ಕ್ರಿಮಿನಲ್ಸ್ ಗಳೇ ಹೆದರುತ್ತಿದ್ದು, ತಾವೇ ಸ್ವಯಂ ಆಗಿ ಪೊಲೀಸರಿಗೆ ಶರಣಾಗುತ್ತಿದ್ದಾರೆ ಎಂದು ಶಾ ಹೇಳಿದರು.
ಉತ್ತರಪ್ರದೇಶದಲ್ಲಿ ಕ್ರಿಮಿನಲ್ಸ್ ಮತ್ತು ಗೂಂಡಾಗಳನ್ನು ಜೈಲಿಗೆ ತಳ್ಳಿದ್ದೇವೆ. ನಾವು ಉತ್ತರಪ್ರದೇಶವನ್ನು ವಂಶಾಡಳಿತ ಮತ್ತು ಜಾತಿವಾದದಿಂದ ಹೊರತಂದು, ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ