ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ: ಮಥುರಾದಲ್ಲಿ ಅಮಿತ್ ಶಾ
ಅಖಿಲೇಶ್ ಯಾದವ್ ಅವರು ಚುನಾವಣೆಯಲ್ಲಿ ಮತ್ತೆ ತಮ್ಮ ಪಕ್ಷವನ್ನು ಅಧಿಕಾರ ತನ್ನಿ ಎಂದು ಹೇಳುತ್ತಿದ್ದಾರೆ
Team Udayavani, Jan 27, 2022, 2:46 PM IST
ನವದೆಹಲಿ: ಉತ್ತರಪ್ರದೇಶದಲ್ಲಿನ 20 ಕೋಟಿಗೂ ಅಧಿಕ ಜನರು ಪ್ರಗತಿಯಾಗದ ಹೊರತು ಭಾರತವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ನಿಮ್ಮ ವಿಶ್ವಾಸ ಮತ್ತು ನಂಬಿಕೆಯಿಂದಾಗಿ ಉತ್ತರಪ್ರದೇಶ ಇಂದು ಪ್ರಗತಿಯಲ್ಲಿದೆ. ಈ ನಿಟ್ಟಿನಲ್ಲಿ ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ನುಡಿದಿದ್ದಾರೆ.
ಇದನ್ನೂ ಓದಿ:ಸವದಿ ಡಿ.ಕೆ.ಶಿವಕುಮಾರ್ ಸಂಪರ್ಕದಲ್ಲಿದ್ದಾರೆ: ಲಖನ್ ಜಾರಕಿಹೊಳಿ ಬಾಂಬ್
ಗುರುವಾರ(ಜನವರಿ 27) ಮಥುರಾದಲ್ಲಿ ಚುನಾವಣಾ ಆಯೋಗದ ಮಾರ್ಗಸೂಚಿಯಂತೆ ನಿಗದಿತ ಜನರನ್ನು ಉದ್ದೇಶಿಸಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡುತ್ತ, ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.
ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಚುನಾವಣೆಯಲ್ಲಿ ಮತ್ತೆ ತಮ್ಮ ಪಕ್ಷವನ್ನು ಅಧಿಕಾರ ತನ್ನಿ ಎಂದು ಹೇಳುತ್ತಿದ್ದಾರೆ. ಅಂದರೆ ಅದರ ಅರ್ಥ ಉತ್ತರಪ್ರದೇಶದಲ್ಲಿ ಪುನಃ ಗೂಂಡಾರಾಜ್ಯ ಮರಳಿದೆ ಎಂಬುದಾಗಿದೆ ಎಂದು ಶಾ ತಿರುಗೇಟು ನೀಡಿದ್ದಾರೆ.
ಅಖಿಲೇಶ್ ಯಾದವ್ ಅವರು ಭಾರತೀಯ ಜನತಾ ಪಕ್ಷ ಸಮಾಜವಾದಿ ಪಕ್ಷ ಪ್ರಮುಖ ಸ್ಪರ್ಧಿ ಎಂಬುದಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ. ಫೆಬ್ರುವರಿ 10ರಿಂದ ಆರಂಭವಾಗಲಿರುವ ವಿಧಾನಸಭಾ ಚುನಾವಣೆಯಲ್ಲಿ ಎರಡನೇ ಬಾರಿಗೆ ಅಧಿಕಾರದ ಗದ್ದುಗೆ ಏರುವ ಬಗ್ಗೆ ಯಾದವ್ ಭರವಸೆ ಹೊಂದಿರುವುದಾಗಿ ವ್ಯಂಗ್ಯವಾಡಿದರು.
ರಾಜ್ಯದಲ್ಲಿ ಈ ಹಿಂದೆ ಗೂಂಡಾಗಳು, ಕ್ರಿಮಿನಲ್ಸ್ ಗಳಿಂದಾಗಿ ಪೊಲೀಸರು ಕೂಡಾ ಭಯಪಡುತ್ತಿದ್ದರು. ಮಹಿಳೆಯರು ಮತ್ತು ಯುವತಿಯರು ಮನೆಯಿಂದ ಹೊರಹೋಗಲು ಆತಂಕಪಡುತ್ತಿದ್ದರು. ಆದರೆ ಇಂದು ಉತ್ತರಪ್ರದೇಶದಲ್ಲಿ ಪರಿಸ್ಥಿತಿ ಬದಲಾಗಿದೆ. ಈಗ ಉತ್ತರಪ್ರದೇಶದಲ್ಲಿ ಗೂಂಡಾಗಳು, ಕ್ರಿಮಿನಲ್ಸ್ ಗಳೇ ಹೆದರುತ್ತಿದ್ದು, ತಾವೇ ಸ್ವಯಂ ಆಗಿ ಪೊಲೀಸರಿಗೆ ಶರಣಾಗುತ್ತಿದ್ದಾರೆ ಎಂದು ಶಾ ಹೇಳಿದರು.
ಉತ್ತರಪ್ರದೇಶದಲ್ಲಿ ಕ್ರಿಮಿನಲ್ಸ್ ಮತ್ತು ಗೂಂಡಾಗಳನ್ನು ಜೈಲಿಗೆ ತಳ್ಳಿದ್ದೇವೆ. ನಾವು ಉತ್ತರಪ್ರದೇಶವನ್ನು ವಂಶಾಡಳಿತ ಮತ್ತು ಜಾತಿವಾದದಿಂದ ಹೊರತಂದು, ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?