ರಾಜ್ಯಕ್ಕೆ ಅಮಿತ್ ಶಾ: ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಮನೆಗೆ ಭೇಟಿ ಸಾಧ್ಯತೆ
Team Udayavani, Aug 2, 2022, 11:36 AM IST
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸುವ ವಿಚಾರದಲ್ಲಿ ಬಿಜೆಪಿ ಹಾಗೂ ಸರಕಾರದ ಮಧ್ಯೆ ಮತ್ತೆ ಗೊಂದಲ ಸೃಷ್ಟಿಯಾಗಿದೆ.
ಆಗಸ್ಟ್ ಮೂರು ಹಾಗೂ ನಾಲ್ಕರಂದು ಅಮಿತ್ ಶಾ ಬೆಂಗಳೂರಿಗೆ ಆಗಮಿಸುತ್ತಾರೆ. ಅಧಿಕೃತ ಸರಕಾರಿ ಕಾರ್ಯಕ್ರಮ ಪ್ರಯುಕ್ತ ಅವರು ಬೆಂಗಳೂರಿಗೆ ಬರುತ್ತಾರೆ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ. ಆದರೆ ಗೃಹ ಇಲಾಖೆಗೆ ಈ ಬಗ್ಗೆ ಸೂಕ್ತ ಮಾಹಿತಿ ಇಲ್ಲ. ಗೃಹ ಇಲಾಖೆಗೆ ಸಂಬಂಧಪಟ್ಟ ಕಾರ್ಯಕ್ರಮಕ್ಕೆ ಆಗಮಿಸುತ್ತಾರೋ ಅಥವಾ ಸಹಕಾರ ಇಲಾಖೆಗೆ ಸಂಬಂಧಪಟ್ಟಂತೆ ಬರುತ್ತಾರೋ ಎಂಬುದು ಗೃಹ ಇಲಾಖೆಗೆ ಮಾಹಿತಿ ಇಲ್ಲ.
ಇದನ್ನೂ ಓದಿ:ಫಾಝಿಲ್ ಹತ್ಯೆ ಪ್ರಕರಣ ಬೇಧಿಸಿದ ಪೊಲೀಸರು: ಆರು ಮಂದಿ ಆರೋಪಿಗಳ ಬಂಧನ
ಮುಖ್ಯಮಂತ್ರಿ ಕಚೇರಿಯೂ ಈ ವಿಚಾರದಲ್ಲಿ ಬಹುತೇಕ ಕತ್ತಲಲ್ಲಿ ಇದೆ. ಆಗಸ್ಟ್ ನಾಲ್ಕರಂದು ಅಮಿತ್ ಶಾ ಬೆಂಗಳೂರಿಗೆ ಆಗಮಿಸುತ್ತಾರೆ ಎಂದು ಹೇಳುತ್ತಿವೆ. ಆದರೆ ಪಕ್ಷದ ಮೂಲಗಳ ಪ್ರಕಾರ ಅಮಿತ್ ಶಾ ಬೆಂಗಳೂರಿಗೆ ಆಗಮಿಸುವುದು ಮಾತ್ರವಲ್ಲ, ಹಿಂದು ಕಾರ್ಯಕರ್ತ ಪ್ರವೀಣ್ ನಿವಾಸಕ್ಜೆ ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಲಿದ್ದಾರೆ. ಒಟ್ಟಾರೆಯಾಗಿ ಅಮಿತ್ ಶಾ ಭೇಟಿ ವಿಚಾರದಲ್ಲಿ ಗೊಂದಲ ಮುಂದುವರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…