ಜ.28ರಂದು ಧಾರವಾಡಕ್ಕೆ ಅಮಿತ್ ಶಾ
Team Udayavani, Jan 23, 2023, 7:00 AM IST
ಧಾರವಾಡ: ಗುಜರಾತ್ದಲ್ಲಿರುವ ರಾಷ್ಟ್ರೀಯ ವಿಧಿವಿಜ್ಞಾನ ಶಾಸ್ತ್ರ ವಿವಿಯ ಎಂಟು ಕ್ಯಾಂಪಸ್ಗಳು ದೇಶದ ವಿವಿಧ ರಾಜ್ಯಗಳಲ್ಲಿದ್ದು, 9ನೇ ಕ್ಯಾಂಪಸ್ ಧಾರವಾಡದಲ್ಲಿ ಆರಂಭವಾಗಲಿದೆ. ಇದ ರೊಂದಿಗೆ ದಕ್ಷಿಣ ಭಾರತದಲ್ಲೇ ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ, ಗುಣಮಟ್ಟದ ವಿವಿ ಕ್ಯಾಂಪಸ್ ಸ್ಥಾಪಿತವಾದಂತಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದಲ್ಲಿ ಭಾನುವಾರ ವಿವಿ ಕ್ಯಾಂಪಸ್ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ.28ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೂತನ ಕ್ಯಾಂಪಸ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕ್ಯಾಂಪಸ್ ನಿರ್ಮಾಣಕ್ಕೆ ಸುಮಾರು 50ಕ್ಕೂ ಹೆಚ್ಚು ಎಕರೆ ಭೂಮಿ ಅಗತ್ಯವಿದೆ. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಪ್ರಯೋಗಾಲಯ, ಆಡಳಿತ ಭವನ, ಕ್ಲಾಸ್ ರೂಂ, ವಿದ್ಯಾರ್ಥಿ ನಿಲಯ, ಸಿಬ್ಬಂದಿಗೆ ವಸತಿ ಸಮುತ್ಛಯ ಮುಂತಾದ ಮೂಲ ಸೌಕರ್ಯ ನಿರ್ಮಾಣಕ್ಕೆ ವಿಶಾಲ ಪ್ರದೇಶದ ಅಗತ್ಯವಿದೆ. ವಿವಿಗೆ ಈಗಾಗಲೇ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದ್ದು, ಕೇಂದ್ರ ಸಚಿವ ಸಂಪುಟ ತೀರ್ಮಾನದಂತೆ ಕೇಂದ್ರದಿಂದ ತಜ್ಞರ ತಂಡ ಆಗಮಿಸಿ ಕ್ಯಾಂಪಸ್ ನಿರ್ಮಾಣದ ರೂಪುರೇಷೆಗಳನ್ನು ಅಂತಿಮಗೊಳಿಸಲಿದೆ. ಮುಂದಿನ ದಿನಗಳಲ್ಲಿ ಪೂರ್ಣ ಪ್ರಮಾಣದ ವಿಶ್ವವಿದ್ಯಾಲಯವಾಗಿ ಪರಿವರ್ತನೆಗೊಳ್ಳಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ