ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿಯ ಸರಣಿ – ನೆಮ್ಮದಿಯನ್ನು ಯಾರಿಂದಲೂ ಕಸಿಯಲಾಗದು : ಶಾ


Team Udayavani, Oct 24, 2021, 9:00 PM IST

ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿಯ ಸರಣಿ – ನೆಮ್ಮದಿಯನ್ನು ಯಾರಿಂದಲೂ ಕಸಿಯಲಾಗದು : ಶಾ

ಜಮ್ಮು/ಶ್ರೀನಗರ: “ಜಮ್ಮುವಿಗೆ ಮೆಟ್ರೋ, ವಿಸ್ತೃತ ವಿಮಾನ ನಿಲ್ದಾಣ ಸಹಿತ ಹೆಲಿಕಾಪ್ಟರ್‌ ಸೇವೆ ಸಿಗಲಿದೆ’- ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾನುವಾರ ಈ ಘೋಷಣೆ ಮಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮೂರು ದಿನಗಳ ಭೇಟಿಯಲ್ಲಿರುವ ಅವರು ಶ್ರೀನಗರ ಸಮೀಪ ಇರುವ ಭಗವತಿ ನಗರ ಎಂಬಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಗೃಹ ಸಚಿವರು ಈ ಘೋಷಣೆ ಮಾಡಿದ್ದಾರೆ. ಜಮ್ಮುವಿನಲ್ಲಿ ಸದ್ಯ ಇರುವ ವಿಮಾನ ನಿಲ್ದಾಣವನ್ನು ವಿಸ್ತರಿಸಲಾಗುತ್ತದೆ. ಈ ಸಂದರ್ಭದಲ್ಲಿ ಹೆಲಿಕಾಪ್ಟರ್‌ ಸೇವೆಗಳನ್ನು ಆರಂಭಿಸಲೂ ಸಾಧ್ಯವಾಗುತ್ತದೆ. ಇದರ ಜತೆಗೆ ಕೇಂದ್ರಾಡಳಿತ ಪ್ರದೇಶದ ಪ್ರತಿ ಜಿಲ್ಲೆಯಲ್ಲಿ ಕೂಡ ಹೆಲಿಕಾಪ್ಟರ್‌ ಸೇವೆಗಳನ್ನು ಆರಂಭಿಸಲೂ ಇದರಿಂದ ನೆರವಾಗಲಿದೆ ಎಂದರು ಗೃಹ ಸಚಿವ. ಇದರ ಜತೆಗೆ ಜಮ್ಮುವಿಗೆ ಮೆಟ್ರೋ ರೈಲು ಸೇವೆ ನೀಡುವ ಬಗ್ಗೆಯೂ ವಾಗ್ಧಾನ ಮಾಡಿದ್ದಾರೆ.

ತಡೆಯಲು ಸಾಧ್ಯವಿಲ್ಲ:
ಕೇಂದ್ರಾಡಳಿತ ಪ್ರದೇಶದಲ್ಲಿ ಸದ್ಯ ನಡೆಯುತ್ತಿರುವ ಅಭಿವೃದ್ಧಿಯ ಸರಣಿ ಮತ್ತು ಶಾಂತಿ-ನೆಮ್ಮದಿಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವರು ಪ್ರತಿಪಾದಿಸಿದ್ದಾರೆ. ಹಿಂದಿನ ಅವಧಿಗಳಲ್ಲಿ ಜಮ್ಮು ಮತ್ತು ಕಾಶ್ಮೀರ, ಲಡಾಖ್‌ಗಳಿಗೆ ಅಭಿವೃದ್ಧಿ ಕಾಮಗಾರಿಗಳಲ್ಲಿ ಅನ್ಯಾಯ ಉಂಟಾಗುತ್ತಿತ್ತು. ಆದರೆ, ಈಗ ಪರಿಸ್ಥಿತಿ ಹಾಗಿಲ್ಲ ಎಂದಿದ್ದಾರೆ.

ಭಾರೀ ಬಂಡವಾಳ:
ಕೇಂದ್ರಾಡಳಿತ ಪ್ರದೇಶಕ್ಕೆ ಈಗಾಗಲೇ 12 ಸಾವಿರ ಕೋಟಿ ರೂ. ಮೌಲ್ಯದ ಬಂಡವಾಳ ಹೂಡಿಕೆ ಪ್ರಸ್ತಾಪ ಬಂದಿದೆ. 2022ರ ವರ್ಷಾಂತ್ಯಕ್ಕೆ 51 ಸಾವಿರ ಕೋಟಿ ರೂ. ಮೌಲ್ಯದ ಬಂಡವಾಳ ಹೂಡಿಕೆ ಬರಲಿದೆ ಎಂದರು ಗೃಹ ಸಚಿವ. ಕಾಂಗ್ರೆಸ್‌ ಮತ್ತು ಎನ್‌ಸಿಪಿಯ ಹೆಸರು ಪ್ರಸ್ತಾಪಿಸದೆ, ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿ ಕುಂಠಿತವಾಗಲು ಕುಟುಂಬಗಳೇ ಕಾರಣ ಎಂದು ಟೀಕಿಸಿದರು.

2004ರಿಂದ 2014ರ ಅವಧಿಯಲ್ಲಿ 2,081 ಮಂದಿ ನಾಗರಿಕರು ಅಸುನೀಗಿದ್ದಾರೆ. ಅಂದರೆ ಸರಾಸರಿ ವರ್ಷವೊಂದಕ್ಕೆ 239 ಮಂದಿ ಅಸುನೀಗಿದಂತಾಗಿದೆ ಎಂದರು. ಇದಕ್ಕೂ ಮೊದಲು ಗೃಹ ಸಚಿವರು ಗುರುದ್ವಾರಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ : ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

ಗುಂಡಿನ ಚಕಮಕಿ ವೇಳೆ ವ್ಯಕ್ತಿ ಸಾವು
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ಬಾಬಾಪೊರಾ ಎಂಬಲ್ಲಿ ಪೊಲೀಸರು ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ವ್ಯಕ್ತಿ ಅಸುನೀಗಿದ್ದಾನೆ. ಬಾಬಾಪೋರಾದಲ್ಲಿ ಸಿಆರ್‌ಪಿಎಫ್ ಬೆಟಾಲಿಯನ್‌ ಒಂದರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಯೋಧರೂ ಪ್ರತಿಯಾಗಿ ಗುಂಡು ಹಾರಿಸಿದರು. ಈ ಸಂದರ್ಭದಲ್ಲಿ ಆ್ಯಪಲ್‌ ಮಾರಾಟ ಮಾಡುತ್ತಿದ್ದ ಶಾಹಿದ್‌ ಅಹ್ಮದ್‌ ಎಂಬಾತ ಅಸುನೀಗಿದ್ದಾನೆ. ಈ ಪ್ರಕರಣದ ವಿರುದ್ಧ ತನಿಖೆಯಾಗಬೇಕು ಎಂದು ಪ್ರಮುಖ ರಾಜಕೀಯ ಪಕ್ಷಗಳು ಒತ್ತಾಯಿಸಿವೆ.

14ನೇ ದಿನಕ್ಕೆ:
ಪೂಂಛ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ 14ನೇ ದಿನವಾಗಿರುವ ಭಾನುವಾರ ಕೂಡ ಉಗ್ರರ ಜತೆಗೆ ಪೊಲೀಸರು ಮತ್ತು ಸೇನಾ ಪಡೆಗಳ ಜಂಟಿ ತಂಡದ ಗುಂಡಿನ ಚಕಮಕಿ, ಶೋಧ ಕಾರ್ಯ ಮುಂದುವರಿದಿದೆ. ಲಷ್ಕರ್‌-ಎ-ತೊಯ್ಬಾ ಉಗ್ರರ ಜತೆಗೆ ಈ ಕಾಳಗ ನಡೆದಿದೆ. ಇದೇ ಸಂದರ್ಭದಲ್ಲಿ ಜಿಯಾ ಮುಸ್ತಾಫಾ ಎಂಬ ಬಂಧಿತ ಉಗ್ರನೂ ಸಾವಿಗೀಡಾಗಿದ್ದಾನೆ. ಇಬ್ಬರು ಪೊಲೀಸ್‌ ಸಿಬ್ಬಂದಿ ಮತ್ತು ಸೇನೆಯ ಯೋಧರೊಬ್ಬರಿಗೆ ಗಾಯಗಳಾಗಿವೆ ಎಂದು ಪೊಲೀಸ್‌ ಇಲಾಖೆಯ ವಕ್ತಾರರು ತಿಳಿಸಿದ್ದಾರೆ. ಅ.11 ಮತ್ತು ಅ.14ರಂದು ಉಗ್ರರ ಜತೆಗಿನ ಕಾರ್ಯಾಚರಣೆ ವೇಳೆ ಒಂಭತ್ತು ಮಂದಿ ಯೋಧರು ಹುತಾತ್ಮರಾದ ಬಳಿಕ ಕಾರ್ಯಾಚರಣೆ ಬಿರುಸುಗೊಂಡಿದೆ.

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!

1-wwewqe

Lok Sabha ಅಖಾಡಕ್ಕೆ ಲಾಲು ಪ್ರಸಾದ್‌ ಪುತ್ರಿ ಡಾ| ರೋಹಿಣಿ ಹೆಜ್ಜೆ

RBI

Cyber ​​attack: ಭದ್ರತೆ ಹೆಚ್ಚಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ

K-Kavitha

ED; ದಿಲ್ಲಿ ಲಿಕ್ಕರ್‌ ಕೇಸ್‌ ಡೀಲ್‌ಗೆ ಕೆಸಿಆರ್‌ ಪುತ್ರಿ ಕವಿತಾ ಸಂಚು

supreem

Himachal Pradesh; 6 ಕೈ ಶಾಸಕರ ಅನರ್ಹತೆ ಆದೇಶಕ್ಕೆ ತಡೆ ಇಲ್ಲ: ಸುಪ್ರೀಂ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.