ಇಡೀ ದಕ್ಷಿಣ ಭಾರತದಲ್ಲಿ ಶಾಂತಿ ಕಾಪಾಡಲು RAF ಘಟಕ ಸಹಾಯಕವಾಗಲಿದೆ :ಕೇಂದ್ರ ಸಚಿವ ಅಮಿತ್ ಶಾ


Team Udayavani, Jan 16, 2021, 6:04 PM IST

ದಕ್ಷಿಣ ಭಾರತದಲ್ಲಿ ಶಾಂತಿ ಕಾಪಾಡಲು RAF ಘಟಕ ಸಹಾಯಕವಾಗಲಿದೆ :ಕೇಂದ್ರ ಸಚಿವ ಅಮಿತ್ ಶಾ

ಶಿವಮೊಗ್ಗ : ಭದ್ರಾವತಿಯ ಬಳ್ಳಾಪುರದಲ್ಲಿ ಶಂಕುಸ್ಥಾಪನೆಗೊಂಡ ಆರ್ ಎಎಫ್ ಘಟಕದಿಂದ ಇಡೀ ದಕ್ಷಿಣ ಭಾರತದಲ್ಲಿ ಶಾಂತಿ ಕಾಪಾಡಲು ಸಹಾಯಕವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಶಿವಮೊಗ್ಗ ಜಿಲ್ಲೆ‌ ಭದ್ರಾವತಿಯ ಬುಳ್ಳಾಪುರದಲ್ಲಿ ಆರ್ ಎಎಫ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅಮಿತ್ ಶಾ ಭದ್ರಾವತಿಯಲ್ಲಿ 97 ನೇ ಆರ್ ಎಎಫ್ ಘಟಕ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ.ಯಡಿಯೂರಪ್ಪ ಅವರು ಭದ್ರಾವತಿಯಲ್ಲಿ ಆರ್ ಎ ಎಫ್ ಘಟಕ ಸ್ಥಾಪಿಸುವಂತೆ ಪತ್ರ ಬರೆದಿದ್ದರು‌. ಆದುದರಿಂದ ಇಂದು ಇದರ ಭೂಮಿ ಪೂಜೆಯನ್ನು ನೆರವೇರಿಸಿದ್ದೇವೆ ಇದರಿಂದ ಇಡೀ ದಕ್ಷಿಣ ಭಾರತದಲ್ಲಿ ಶಾಂತಿ ಕಾಪಾಡಲು ಈ ಘಟಕ ಸಹಾಯಕವಾಗಲಿದೆ ಎಂದರು. ಅಲ್ಲದೆ ಶಿವಮೊಗ್ಗ ಜಿಲ್ಲೆಯಲ್ಲಿ ಇನ್ನೊಂದು‌ ಕೇಂದ್ರೀಯ ವಿದ್ಯಾಲಯ ಆರಂಭಿಸುವುದಾಗಿ ಜನತೆಗೆ ಶುಭ ಸುದ್ದಿಯನ್ನು ಕೇಂದ್ರ ಸಚಿವರು ನೀಡಿದರು.

ಇದನ್ನೂ ಓದಿ:ಕೋವ್ಯಾಕ್ಸಿನ್ ನಿಂದ ಅಡ್ಡಪರಿಣಾಮ ಸಂಭವಿಸಿದರೆ ಪರಿಹಾರ ಕೊಡುತ್ತೇವೆ; ಭಾರತ್ ಬಯೋಟೆಕ್

ದೇಶದಲ್ಲಿ ಶಾಂತಿ‌ಸ್ಥಾಪನೆ‌ ಮಾಡುವ ಉದ್ದೇಶದಿಂದಲೇ ಆರ್ ಎಎಫ್ ಘಟಕ ಆರಂಭಗೊಂಡಿದೆ. ಅಶ್ರುವಾಯು ಸಿಡಿಸದೆ, ಗುಂಡು ಹಾರಿಸದೆ ಗಲಭೆ ನಿಯಂತ್ರಿಸಿ ಶಾಂತಿ‌ಸ್ಥಾಪಿಸುವ ತಾಕತ್ತು ಆರ್ ಎಎಫ್ ಗೆ ಇದೆ. ಅಲ್ಲದೆ ಈ ಕೆಲಸದಲ್ಲಿ‌ ಆರ್ ಎಎಫ್ ಇದುವರೆಗೆ ಸಫಲವೂ ಆಗಿದೆ. ಸಿಆರ್ ಪಿಎಫ್ ದೇಶದ ಅತಿ‌ದೊಡ್ಡ ಶಕ್ತಿಯಾಗಿದೆ ಎಂದರು.

3.50 ಲಕ್ಷ‌ ಸಿಆರ್ ಪಿಎಫ್‌ಯೋದರು ದೇಶದ ಆಂತರಿಕ‌ ರಕ್ಷಣೆಯಲ್ಲಿ ಹಗಲಿರುಳು ಶ್ರಮಿಸುತ್ತಿದ್ದಾರೆ. ನಕ್ಸಲರು ಹಾಗೂ ಮಾವೋವಾದಿಗಳಿಂದ‌ ದೇಶವನ್ನು ಸಿಆರ್ ಪಿಎಫ್ ಯೋದರು ರಕ್ಷಿಸುತ್ತಿದ್ದಾರೆ ಎಂದು ಹೇಳಿದರು.

ನಂತರ ಮಾತನಾಡಿದ ಅವರು ಪ್ರಧಾನಿ ನರೇಂದ್ರ‌ಮೋದಿ ಅವರ ನೇತೃತ್ವದಲ್ಲಿ ಭಾರತದಲ್ಲೇ‌ ಕರೋನಾಗೆ ವ್ಯಾಕ್ಸಿನ್ ಕಂಡುಹಿಡಿಯಲಾಗಿದೆ. ಕರೋನಾ ಬಂದ ವೇಳೆಯಲ್ಲಿ‌ ದೇಶದಲ್ಲಿ ಟೆಸ್ಟ್ ಗೆ ಒಂದೇ ಲ್ಯಾಬ್ ಇತ್ತು ಇಂಥ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರದಲ್ಲಿ‌ನಾವು ಕ್ರಾಂತಿಯನ್ನೇ ಮಾಡಿದ್ದೇವೆ, ಪ್ರಧಾನಿಯವರ ದೂರದೃಷ್ಟಿಯಿಂದಾಗಿ ಇದೀಗ ಕರೋನಾಗೆ ಲಸಿಕೆ ಬಂದಿದೆ. ಇಂದು ಕರೋನಾ ವ್ಯಾಕ್ಸಿನೇಷನ್ ಗೆ ಚಾಲನೆ ನೀಡುವ ಮೂಲಕ ಟೀಕಾಕಾರರಿಗೆ ಉತ್ತರ ನೀಡಿದ್ದಾರೆ ಎಂದರು.

ನಂತರ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕದಲ್ಲಿ ಆರ್ ಎಎಫ್‌ ಘಟಕ ಆರಂಭಗೊಳ್ಳುತ್ತಿರುವುದು ಕರ್ನಾಟಕದ ಜನರಿಗೆ ಸಂತಸದ ಸಂಗತಿ. ಕರ್ನಾಟಕಕ್ಕೆ ಇಂದು ಅವಿಸ್ಮರಣೀಯ ದಿನ. ಗೃಹ ಸಚಿವ ಅಮಿತ್ ಶಾ ಅವರು ಆರ್ ಎಎಫ್ ಘಟಕಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ ಎಂದರು.

ಇದುವರೆಗೆ ಕರ್ನಾಟಕದಲ್ಲಿ‌ ಕಾನೂನು ಸುವ್ಯವಸ್ಥೆ ಹದಗೆಟ್ಟಾಗ ಬೇರೆ ರಾಜ್ಯಗಳಿಂದ ಆರ್ ಎಎಫ್ ಸಿಬ್ಬಂದಿ ಕರೆಸಬೇಕಾಗಿತ್ತು. ಇದೀಗ ಕರ್ನಾಟಕ ಭದ್ರಾವತಿಯಲ್ಲಿ ಈ ಘಟಕ ಆರಂಭಗೊಳ್ಳುತ್ತಿರುವುದು ಸ್ವಾಗತಾರ್ಹ. ಭದ್ರಾವತಿ ಹೊರವಲಯದ ಬುಳ್ಳಾಪುರದ 50 ಎಕರೆ ಜಮೀನಿನಲ್ಲಿ ಈ ಘಟಕ ಆರಂಭಗೊಳ್ಳುತ್ತಿದ್ದು ಕರ್ನಾಟಕ, ಗೋವಾ, ಪುದುಚೆರಿ, ಕೇರಳ ರಾಜ್ಯಗಳ ಕಾರ್ಯವ್ಯಾಪ್ತಿಯನ್ನು ಈ ಘಟಕ ಹೊಂದಿದೆ ಎಂದರು.

ಸರ್ದಾರ್ ವಲ್ಲಭಾಯ್ ಪಟೇಲ್ ಬಳಿಕ ಅಮಿತ್ ಶಾ ಅಂತವರು ನಮಗೆ ಗೃಹ ಸಚಿವರಾಗಿ ಸಿಕ್ಕಿರುವುದು ನಮ್ಮ ಸೌಭಾಗ್ಯ ಎಂದು ಸಂತಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.