ಅಮೂಲ್ಯ ಪ್ರಕರಣ: ಎನ್ಐಎ ತನಿಖೆ ಕೋರಿ ಅರ್ಜಿ
Team Udayavani, Jun 19, 2020, 8:26 PM IST
ಬೆಂಗಳೂರು: ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನಾ ವಿರುದ್ಧದ ಪ್ರಕರಣವನ್ನು ತನಿಖೆಯನ್ನು “ರಾಷ್ಟ್ರೀಯ ತನಿಖಾ ತಂಡ’ (ಎನ್ಐಎ)ಗೆ ವಹಿಸುವಂತೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ.
ಈ ಕುರಿತು ಮಂಡ್ಯ ಮೂಲದ ವಕೀಲರ ವಿಶಾಲ್ ರಘು ಎಂಬವರು ಅರ್ಜಿ ಸಲ್ಲಿಸಿದ್ದಾರೆ. ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ, ನಗರ ಪೊಲೀಸ್ ಆಯುಕ್ತ, ಚಿಕ್ಕಪೇಟೆ ಎಸಿಪಿ, ಉಪ್ಪಾರಪೇಟೆ ಇನ್ಸ್ಪೆಕ್ಟರ್ ಹಾಗೂ ಅಮೂಲ್ಯ ಲಿಯೋನಾಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಪ್ರಕರಣದ ತನಿಖಾಧಿಕಾರಿಗಳು ನಿಗದಿತ ಸಮಯದಲ್ಲಿ ಚಾರ್ಜ್ಶೀಟ್ ಸಲ್ಲಿಸಿಲ್ಲ. ಹೀಗಾಗಿ, ಗಂಭೀರ ಆರೋಪವಿದ್ದರೂ ಕಾನೂನು ಅವಕಾಶ ಬಳಸಿಕೊಂಡು ಆರೋಪಿ ಜಾಮೀನು ಪಡೆದುಕೊಂಡಿದ್ದಾಳೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಪ್ರತ್ಯೇಕ ಸಾಕ್ಷಿಗಳಿದ್ದರೂ ಚಾರ್ಜ್ಶೀಟ್ ಸಲ್ಲಿಸಿಲ್ಲ. ಹಾಗಾಗಿ, ಪ್ರಕರಣದ ತನಿಖಾಧಿಕಾರಿಯನ್ನು ಅಮಾನತುಗೊಳಿಸಲು ಸರಕಾರಕ್ಕೆ ನಿರ್ದೇಶನ ನೀಡಬೇಕು ಹಾಗೂ ಜಾಮೀನು ರದ್ದು ಕೋರಿ ಸರಕಾರ ಮೇಲ್ಮನವಿ ಸಲ್ಲಿಸಬೇಕು. ಅಮೂಲ್ಯ ಭಯೋತ್ಪಾದಕರ ಸಂಪರ್ಕ ಹೊಂದಿರುವ ಸಾಧ್ಯತೆಯಿರುವುದರಿಂದ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ. ಅರ್ಜಿ ಇನ್ನಷ್ಟೇ ನಿಗದಿಯಾಗಬೇಕಿದೆ.
ಎಸ್ಪಿಪಿ ನೇಮಕ
ಇದೇ ವೇಳೆ ಅಮೂಲ್ಯ ಪ್ರಕರಣದಲ್ಲಿ ಜೆಎಂಎಫ್ಸಿ ಹಾಗೂ ಸೆಷನ್ಸ್ ನ್ಯಾಯಾಲಯಗಳಲ್ಲಿ ಸರಕಾರದ ಪರ ವಾದಿಸಲು ಐ.ಎಸ್. ಪ್ರಮೋದ್ಚಂದ್ರ ಅವರನ್ನು ಸರಕಾರ ನೇಮಕ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’