ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರಕ್ಕೆ ಅಭೂತಪೂರ್ವ ಆರಂಭ


Team Udayavani, Apr 1, 2023, 12:57 AM IST

neeta

ಮುಂಬಯಿ: ಭಾರತ ಮತ್ತು ವಿದೇಶಗಳ ಕಲಾವಿದರು, ಧಾರ್ಮಿಕ ಮುಖಂಡರು, ಕ್ರೀಡಾಳುಗಳು ಮತ್ತು ಉದ್ಯಮಿಗಳ ಜತೆಗೆ ದೇಶದ ಗಣ್ಯ ವ್ಯಕ್ತಿಗಳ ಸಮ್ಮುಖದಲ್ಲಿ ನೀತಾ ಮುಕೇಶ್ ಅಂಬಾನಿ ಸಾಂಸ್ಕೃತಿಕ ಕೇಂದ್ರವನ್ನು ಶುಕ್ರವಾರ ಉದ್ಘಾಟಿಸಲಾಯಿತು. ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆ ನೀತಾ ಅಂಬಾನಿ ಮತ್ತು ಅವರ ಮಗಳು ಇಶಾ ಅಂಬಾನಿ ಆತಿಥ್ಯ ವಹಿಸಿದ್ದರು.

ಉದ್ಘಾಟನಾ ಸಮಾರಂಭದಲ್ಲಿ, ನೀತಾ ಅಂಬಾನಿ ಮಾತನಾಡಿ, “ಸಾಂಸ್ಕೃತಿಕ ಕೇಂದ್ರವು ಪಡೆಯುತ್ತಿರುವ ಬೆಂಬಲದಿಂದ ನಾನು ಸಂತುಷ್ಟಗೊಂಡಿದ್ದೇನೆ. ಇದು ವಿಶ್ವದ ಅತ್ಯುತ್ತಮ ಸಾಂಸ್ಕೃತಿಕ ಕೇಂದ್ರಗಳಲ್ಲಿ ಒಂದಾಗಿದೆ. ಎಲ್ಲ ಕಲೆ ಮತ್ತು ಕಲಾವಿದರಿಗೆ ಇಲ್ಲಿ ಸ್ವಾಗತ. ಸಣ್ಣ ಪಟ್ಟಣಗಳು ​​ಮತ್ತು ದೂರದ ಪ್ರದೇಶಗಳ ಯುವಕರು ಇಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸಲು ಅವಕಾಶ ಪಡೆಯುತ್ತಾರೆ. ವಿಶ್ವದ ಅತ್ಯುತ್ತಮ ಪ್ರದರ್ಶನಗಳು ಇಲ್ಲಿಗೆ ನಡೆಯಲಿವೆ ಎಂದು ನಾನು ಭಾವಿಸುತ್ತೇನೆ,” ಎಂದರು.

ಮುಕೇಶ್ ಅಂಬಾನಿ ಮಾತನಾಡಿ, ಮುಂಬೈ ಜೊತೆಗೆ, ಇದು ದೇಶದ ದೊಡ್ಡ ಕಲಾ ಕೇಂದ್ರವಾಗಿ ಹೊರಹೊಮ್ಮುತ್ತದೆ. ಇಲ್ಲಿ ದೊಡ್ಡ ಪ್ರದರ್ಶನಗಳನ್ನು ನಡೆಸಬಹುದು. ಭಾರತೀಯರು ತಮ್ಮ ಎಲ್ಲ ಕಲಾತ್ಮಕತೆಯೊಂದಿಗೆ ಮೂಲ ಪ್ರದರ್ಶನಗಳನ್ನು ನೀಡಲು ಸಾಧ್ಯವಾಗುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

ಸಾಂಸ್ಕೃತಿಕ ಕೇಂದ್ರದಲ್ಲಿ ಅತಿಥಿಗಳಿಗೆ ಆತಿಥ್ಯ ನೀಡಲಾಯಿತು. ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್, ಒಲಿಂಪಿಕ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ, ಲಾನ್ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಮತ್ತು ಅಥ್ಲೀಟ್ ದೀಪಾ ಮಲಿಕ್ ಸಹ ಕಲಾವಿದರನ್ನು ಪ್ರೋತ್ಸಾಹಿಸಲು ಕೇಂದ್ರದಲ್ಲಿ ಉಪಸ್ಥಿತರಿದ್ದರು.

ಸೂಪರ್ ಸ್ಟಾರ್ ರಜನಿಕಾಂತ್, ಅಮೀರ್ ಖಾನ್, ರಣವೀರ್ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕ್ ಚೋಪ್ರಾ, ವರುಣ್ ಧವನ್, ಸೋನಮ್ ಕಪೂರ್, ಅನುಪಮ್ ಖೇರ್, ಜಾವೇದ್ ಅಖ್ತರ್, ಶಬಾನಾ ಅಜ್ಮಿ, ಸುನೀಲ್ ಶೆಟ್ಟಿ, ಶಾಹಿದ್ ಕಪೂರ್, ವಿದ್ಯಾ ಬಾಲನ್, ಆಲಿಯಾ ಭಟ್, ದಿಯಾ ಮಿರ್ಜಾ, ಶ್ರದ್ಧಾ ಕಪೂರ್, ರಾಜು ಹಿರಾನಿ, ತುಷಾರ್ ಕಪೂರ್ ಹೀಗೆ ಇಡೀ ಸಂಜೆ ಬಾಲಿವುಡ್ ತಾರೆಯರಿಂದ ತುಂಬಿತ್ತು. ಕೈಲಾಶ್ ಖೇರ್ ಮತ್ತು ಮೇಮ್ ಖಾನ್ ಸಹ ಉಪಸ್ಥಿತರಿದ್ದರು.

ಎಮ್ಮಾ ಚೇಂಬರ್ಲೇನ್, ಗಿಗಿ ಅವರಂತಹ ಅಂತಾರಾಷ್ಟ್ರೀಯ ಖ್ಯಾತಿಯ ಮಾಡೆಲ್‌ಗಳು ಈ ಸಂದರ್ಭದ ರಂಗೇರುವಂತೆ ಮಾಡಿದರು. ದೇವೇಂದ್ರ ಫಡ್ನವಿಸ್, ಉದ್ಧವ್ ಠಾಕ್ರೆ, ಆದಿತ್ಯ ಠಾಕ್ರೆ, ಸ್ಮೃತಿ ಇರಾನಿ ಮುಂತಾದ ರಾಜಕಾರಣಿಗಳೂ ಕಾರ್ಯಕ್ರಮದಲ್ಲಿದ್ದರು.

ಸದ್ಗುರು ಜಗ್ಗಿ ವಾಸುದೇವ್, ಸ್ವಾಮಿ ನಾರಾಯಣ ಪಂಥದ ರಾಧಾನಾಥ್ ಸ್ವಾಮಿ, ರಮೇಶ್ ಭಾಯಿ ಓಜಾ, ಸ್ವಾಮಿ ಗೌರ್ ಗೋಪಾಲ್ ದಾಸ್ ಮೊದಲಾದ ಆಧ್ಯಾತ್ಮಿಕ ಗುರುಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.