ಸರ್ಕಾರಿ ಆಸ್ಪತ್ರೆ ವೈದ್ಯನ ಚಿಕಿತ್ಸೆಗೆ 1.5 ಕೋಟಿ ಕೊಟ್ಟ ಆಂಧ್ರ ಸಿಎಂ
Team Udayavani, Jun 6, 2021, 6:32 PM IST
ವಿಶಾಖಪಟ್ಟಣ: ಆಂಧ್ರಪ್ರದೇಶದ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಎನ್.ಭಾಸ್ಕರ ರಾವ್ ಎಂಬುವರಿಗೆ ಸೊಂಕು ತಗುಲಿದ್ದು, ಅವರ ಚಿಕಿತ್ಸೆಗಾಗಿ 1.5 ಕೋಟಿ ರೂ. ಬಿಡುಗಡೆ ಮಾಡಿದೆ.
ಅವರನ್ನು ಗಚ್ಚಿಬೌಲಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪರಿಹಾರ ನೀಡುವ ಬಗ್ಗೆ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ ರೆಡ್ಡಿ ಘೋಷಣೆ ಮಾಡಿದ್ದಾರೆ.
ಪ್ರಕಾಶಂ ಜಿಲ್ಲೆಯ ಕರಮಚೇಡು ಎಂಬಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಡಾ. ಭಾಸ್ಕರ್ (38) ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ ಸೋಂಕು ದೃಢಪಟ್ಟಿತ್ತು. ಗುಂಟೂರು ಮೆಡಿಕಲ್ ಕಾಲೇಜಿನಲ್ಲಿ ರೇಡಿಯೋ ಡಯಾಗ್ನಾಸಿಸ್ ಪ್ರಧ್ಯಾಪಕಿಯಾಗಿರುವ ಅವರ ಪತ್ನಿ ಡಾ.ಭಾಗ್ಯಲಕ್ಷ್ಮೀ ಅವರಿಗೂ ಸೋಂಕು ತಗುಲಿತ್ತು. ಆದರೆ ಭಾಸ್ಕರ್ ರಾವ್ ಸ್ಥಿತಿ ಹದಗೆಟ್ಟಿತ್ತು ಮತ್ತು ಚಿಕಿತ್ಸಾ ವೆಚ್ಚ ಏರಿಕೆಯಾಗಿತ್ತು.
ಇದನ್ನೂ ಓದಿ :ಅವನನ್ನು ನಂಬಿ ಮೋಸ ಹೋದೆ, ಆತನಿಗೆ ಗಲ್ಲು ಶಿಕ್ಷೆ ಕೊಡಿಸಿ.. ನೊಂದ ಪ್ರಿಯತಮೆಯ ಕೊನೇ ಮನವಿ.!