ಮಾಂಗಲ್ಯ ಸರ ಅಡವಿಟ್ಟು ಮೊಟ್ಟೆ ವಿತರಣೆ ! ಅಂಗನವಾಡಿ ಕಾರ್ಯಕರ್ತೆಯ ಕಾಳಜಿ


Team Udayavani, Mar 18, 2021, 7:20 AM IST

ಮಾಂಗಲ್ಯ ಸರ ಅಡವಿಟ್ಟು ಮೊಟ್ಟೆ ವಿತರಣೆ ! ಅಂಗನವಾಡಿ ಕಾರ್ಯಕರ್ತೆಯ ಕಾಳಜಿ

ಉಡುಪಿ: ಕೊರೊನಾ ಸಂಕಷ್ಟ ಕಾಲದಲ್ಲಿ ಸರಕಾರದಿಂದ ಸಕಾಲದಲ್ಲಿ ಬಿಲ್‌ ಪಾವತಿಯಾಗದಿದ್ದರೂ ಮಕ್ಕಳು, ಗರ್ಭಿಣಿಯರಿಗೆ ಪೌಷ್ಟಿಕಾಂಶದ ಕೊರತೆಯಾಗ ಬಾರದು ಎನ್ನುವ ನಿಟ್ಟಿನಲ್ಲಿ ಉಡುಪಿಯ ಅಂಗನವಾಡಿ ಕಾರ್ಯಕರ್ತೆಯೊಬ್ಬರು ತನ್ನ ಮಾಂಗಲ್ಯ ಸರವನ್ನು ಅಡವಿಟ್ಟು ಫ‌ಲಾನುಭವಿಗಳಿಗೆ ಮೊಟ್ಟೆ ವಿತರಿಸಿದ್ದಾರೆ.

ಉಡುಪಿ ವಲಯದ ಅಂಬಲಪಾಡಿ ಕಿದಿಯೂರು ಗ್ರಾ.ಪಂ. ಅಂಗನವಾಡಿ ಕಾರ್ಯಕರ್ತೆ ಇಂದಿರಾ ಇಂತಹ ಸಾಮಾಜಿಕ ಕಳಕಳಿ ಹೊಂದಿರುವ ಮಹಿಳೆ. 27 ವರ್ಷಗಳಿಂದ ಅಂಗನವಾಡಿ ಕಾರ್ಯಕರ್ತೆಯಾಗಿರುವ ಅವರ ಪತಿ ಅನಾರೋಗ್ಯ ಪೀಡಿತರಾಗಿದ್ದು, ಮನೆಯ ಸಂಪೂರ್ಣ ಆರ್ಥಿಕ ಜವಾಬ್ದಾರಿಯೂ ಅವರದ್ದೇ ಆಗಿದೆ. ಮಗಳಿಗೆ ಮದುವೆ ಮಾಡಿಸಿದ್ದಾರೆ. ಮಗ ಇತ್ತೀಚೆಗಷ್ಟೇ ಉದ್ಯೋಗಕ್ಕೆ ಸೇರಿದ್ದಾರೆ.

ಸಂಕಷ್ಟದಲ್ಲಿ ಮೊಟ್ಟೆ ವಿತರಣೆ
ತಿಂಗಳಿಗೆ 30 ಗರ್ಭಿಣಿ-ಬಾಣಂತಿಯರು ಮತ್ತು 20 ಮಕ್ಕಳು ಈ ಅಂಗನವಾಡಿಯ ಫ‌ಲಾನುಭವಿಗಳಾಗಿದ್ದು, ಮಾಸಿಕ 4,000 ರೂ. ಮೊಟ್ಟೆಗೆಂದೇ ವ್ಯಯವಾಗುತ್ತದೆ. ಇಲಾಖೆಯಿಂದ ಹಣ ಬಾರದಿದ್ದಾಗ ಇಂದಿರಾ ಮೊದಲಿಗೆ ಕೈಯಿಂದಲೇ ಭರಿಸುತ್ತಿದ್ದರು. ಅನಂತರ ಕೈಸಾಲ ಮಾಡಿದ್ದರು. ಕೈಸಾಲ ಹಿಂದಿರುಗಿಸಬೇಕಾಗಿ ಬಂದಾಗ ಅನ್ಯ ದಾರಿಕಾಣದೆ ಮಾಂಗಲ್ಯ ಸರವನ್ನು 26,000 ರೂ.ಗೆ ಒತ್ತೆ ಇರಿಸಿದ್ದರು.

ಸರಕಾರದಿಂದ ಸಕಾಲದಲ್ಲಿ ಮೊಟ್ಟೆ ಬಿಲ್‌ ಮೊತ್ತ ಜಮೆ ಆಗದಿದ್ದರೂ ನಿಗದಿತ ಸಮಯದೊಳಗೆ ಫ‌ಲಾನುಭವಿಗಳಿಗೆ ಮೊಟ್ಟೆ ವಿತರಿಸಬೇಕಾಗಿದೆ. ನಾವು ತಿಂಗಳ ವೇತನದಲ್ಲಿ ಹೇಗೋ ಹೊಂದಾಣಿಕೆ ಮಾಡಿಕೊಂಡು ಮೊಟ್ಟೆ ನೀಡುತ್ತಿದ್ದೆವು. ಲಾಕ್‌ಡೌನ್‌ ಬಳಿಕ ಫ‌ಲಾನುಭವಿಗಳ ಸಂಖ್ಯೆ ಏಕಾಏಕಿ ಹೆಚ್ಚಾಗಿದ್ದು ಹಣ ಬಾರದೆ ನಿಭಾಯಿಸಲು ಕಷ್ಟವಾಗುತ್ತಿದೆ ಎನ್ನುತ್ತಾರೆ ಕಾರ್ಯಕರ್ತೆಯರು.

ಪಾವತಿಯಾಗದ ಹೆಚ್ಚವರಿ ಮೊತ್ತ
ಸರಕಾರ ಒಂದು ಮೊಟ್ಟೆಗೆ 5 ರೂ. ಪಾವತಿಸುತ್ತಿದ್ದು, ಕೆಲವಡೆ ಮೊಟ್ಟೆ ಬೆಲೆ ಭಿನ್ನವಾಗಿರುವುದರಿಂದ ವ್ಯತ್ಯಾಸದ ಮೊತ್ತವನ್ನು ಆಯಾ ಸ್ಥಳೀಯಾಡಳಿತ ನೀಡುವಂತೆ ಸರಕಾರ ಆದೇಶಿಸಿದೆ. ಬಿಲ್‌ಗ‌ಳನ್ನು ಸ್ಥಳೀಯಾಡಳಿತಕ್ಕೆ ನೀಡಿದರೂ ಪಾವತಿಸಲು ಸ್ಥಳೀಯಾಡಳಿತಗಳು ಮೀನಮೇಷ ಎಣಿಸುವುದರಿಂದ ತಿಂಗಳಿಗೆ 500ರಿಂದ 1,000 ರೂ. ವರೆಗಿನ ಹೆಚ್ಚುವರಿ ಮೊತ್ತವನ್ನು ಕಾರ್ಯಕರ್ತೆಯರು ಕೈಯಿಂದ ಹಾಕಬೇಕಾಗಿ ಬರುತ್ತಿದೆ.

ಜಿಲ್ಲೆಯಲ್ಲಿ ಮೊಟ್ಟೆ ಬಿಲ್‌ ಅನ್ನು ಮುಂಗಡವಾಗಿ ಬಾಲವಿಕಾಸ ಖಾತೆಗೆ ಹಾಕಲಾಗುತ್ತದೆ. ಆದರೆ ಸಪ್ಟೆಂಬರ್‌ನಿಂದ ಫೆಬ್ರವರಿ ಅಂತ್ಯದವರೆಗೆ ಮೊಟ್ಟೆ ವಿತರಣೆಗೆ ಅಗತ್ಯವಿರುವ ಬಜೆಟ್‌ ಬಂದಿರಲಿಲ್ಲ. ಮಾರ್ಚ್‌ ಮೊದಲ ವಾರದಲ್ಲಿ ಮಾರ್ಚ್‌ ತಿಂಗಳ ಅಂತ್ಯದವರೆಗೆ ಎಲ್ಲ ಬಿಲ್‌ ಪಾವತಿ ಮಾಡಲು ಆದೇಶಿಸಲಾಗಿದೆ. ಖಜಾನೆಯಲ್ಲಿ ಬಿಲ್‌ ಪಾವತಿಯಾಗುತ್ತಿದೆ.
– ಶೇಶಪ್ಪ, ಡಿ.ಡಿ.ಪಿ.ಐ. ಉಪನಿರ್ದೇಶಕರು

ಕೆಲವು ಫ‌ಲಾನುಭವಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ನೀಡಲೇಬೇಕಾದ ಅನಿವಾರ್ಯ ಇದೆ. ಅವರಿಗಷ್ಟೇ ಮೊಟ್ಟೆ ನೀಡಿ ಇತರರನ್ನು ಬಿಡುವಂತಿಲ್ಲ. ಬೇರೆ ಯಾವುದೇ ದಾರಿ ಕಾಣದೆ ಮಾಂಗಲ್ಯ ಸರವನ್ನು ಅಡವಿಟ್ಟು ಹಣ ಪಡೆದಿದ್ದೆ. ಇತ್ತೀಚೆಗಷ್ಟೇ ಸರಕಾರದಿಂದ 26,000 ರೂ. ಬಿಲ್‌ ಪಾವತಿಯಾಗಿದ್ದು, ಸರವನ್ನು ಬಿಡಿಸಿಕೊಂಡು ಬಂದಿದ್ದೇನೆ. 800 ರೂ. ಬಡ್ಡಿ ಕಟ್ಟಿದ್ದೇನೆ.
– ಇಂದಿರಾ, ಅಂಗನವಾಡಿ ಕಾರ್ಯಕರ್ತೆ

– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

Hebri; ಸ್ಕೂಟಿಗೆ ಕಾರು ಢಿಕ್ಕಿ,ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ‌ ಕಂದಕೂರು

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್‌ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.