ಅನಿಲ್ ಲಾಡ್ ರನ್ನು ಬಂಧಿಸಬೇಕು,ಕಾಂಗ್ರೆಸ್ ಕ್ರಮ ಕೈಗೊಳ್ಳಲಿ: ಛಲವಾದಿ ನಾರಾಯಣ ಸ್ವಾಮಿ
Team Udayavani, Nov 29, 2021, 12:54 PM IST
ಬೆಂಗಳೂರು : ಸಂವಿಧಾನಕ್ಕೆ ಅಪಚಾರ ಮಾಡಿರುವ ಅನಿಲ್ ಲಾಡ್ ಅವರನ್ನುಬಂಧಿಸಬೇಕು, ಅವರ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಳ್ಳಲಿ ಎಂದು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಆಗ್ರಹಿಸಿದ್ದಾರೆ.
ಸೋಮವಾರ ಬಿಜೆಪಿ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಟಿ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿ,ಸಂವಿಧಾನ ರಚಿಸಿದ್ದು ಇಂದಿರಾಗಾಂಧಿ, ರಾಹುಲ್ ಗಾಂಧಿ ಅಂತ ಹೇಳಿದ್ದ ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ಅವರ ವೈರಲ್ ವಿಡಿಯೋ ವಿಚಾರಕ್ಕೆ ಪ್ರತಿಕ್ರಿಯಿಸಿ, ಅನಿಲ್ ಲಾಡ್ ಸುಳ್ಳು ಹೇಳಿದ್ದಾರೆ, ಸಂವಿಧಾನಕ್ಕೆ ಅಪಚಾರ ಮಾಡಿದ್ದಾರೆ,ಅವರ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಳ್ಳಲಿ. ಅನಿಲ್ ಲಾಡ್ ರನ್ನು ಬಂಧಿಸಬೇಕು ಎಂದು ಛಲವಾದಿ ನಾರಾಯಣ ಸ್ವಾಮಿ ಆಗ್ರಹಿಸಿದರು.
ಸಂವಿಧಾನದ ಬಗ್ಗೆ ಸಂಸತ್ ನಲ್ಲಿ, ವಿಶೇಷ ಚರ್ಚೆಗಳನ್ನು ಪ್ರಾರಂಭಿಸಿದ್ದೇ ಮೋದಿಯವರು. ನನ್ನಂಥವನು ಪ್ರಧಾನಿಯಾಗಿದ್ದೂ ಸಂವಿಧಾನ ಕೊಟ್ಟ ಅವಕಾಶದಿಂದ ಅಂದವರು ಮೋದಿ. ಈ ರೀತಿಯ ಒಂದು ಮಾತನ್ನೂ ಕಾಂಗ್ರೆಸ್ ನವರು ಹೇಳಿಲ್ಲ. ಅಂಬೇಡ್ಕರ್ ವಿರೋಧಿ ಯಾರು ಹಾಗಿದ್ದರೆ ಎಂದು ನಾರಾಯಣ ಸ್ವಾಮಿ ಪ್ರಶ್ನಿಸಿದರು.
ನವೆಂಬರ್ 26 ರಂದು ಸಂಸತ್ ನ ಸೆಂಟ್ರಲ್ ಹಾಲ್ ನಲ್ಲಿ ಪ್ರಧಾನಿ ಮೋದಿಯವರು ಸಂವಿಧಾನ ದಿನ ಆಚರಿಸಲು ಕರೆದಿದ್ದಸಭೆಯನ್ನು 16 ವಿಪಕ್ಷಗಳು ಬಹಿಷ್ಕರಿಸಿದ್ದವು, ಹೀಗಿದ್ದರೂ ಕಾಂಗ್ರೆಸ್ ಬಿಜೆಪಿಗೆ ಸಂವಿಧಾನ ವಿರೋಧಿ ಪಕ್ಷ ಅನ್ನುತ್ತಿದೆ ಎಂದು ನಾರಾಯಣ ಸ್ವಾಮಿ ಕಿಡಿಕಾರಿದ್ದಾರೆ.
ಇದನ್ನೂ ಓದಿ :ನಲಪಾಡ್ ಹೆಸರು ಬಹಿರಂಗವಾದ ಬಳಿಕ ಕಾಂಗ್ರೆಸ್ ಮೌನ : ಅಶ್ವಥ್ ನಾರಾಯಣ
ಅಂಬೇಡ್ಕರ್ ಚುನಾವಣೆಗೆ ಸ್ಪರ್ಧೆಗೆ ಕಾಂಗ್ರೆಸ್ ಅಡ್ಡಿ ಹಾಕಿತ್ತು. ಅವರ ಸಹಾಯಕನಿಗೆ ಚುನಾವಣೆಯಲ್ಲಿ ನಿಲ್ಲಲು ಕಾಂಗ್ರೆಸ್ ಅವಕಾಶ ನೀಡಿತು. ವಿ.ಪಿ. ಸಿಂಗ್ ಸರ್ಕಾರ ಬರೋವರೆಗೂ ಅಂಬೇಡ್ಕರ್ ಗೆ ಭಾರತ ರತ್ನ ಸಿಕ್ಕಿರಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್