ರಾಜ್ಯ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ಘೋಷಣೆ
ಅವಿರೋಧ ಆಯ್ಕೆ ಸಾಧ್ಯತೆ, ಬಿಜೆಪಿಗೆ ಸ್ಥಾನ?
Team Udayavani, Jul 18, 2022, 3:53 PM IST
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಕಾಂಗ್ರೆಸ್ ಪಕ್ಷ ತೊರೆಯುವ ವೇಳೆ ನೀಡಿದ್ದ ರಾಜೀನಾಮೆ ಯಿಂದ ತೆರವಾಗಿದ್ದ ರಾಜ್ಯ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣಾ ಆಯೋಗ ಸೋಮವಾರ ಚುನಾವಣೆ ಘೋಷಣೆ ಮಾಡಿದೆ.
ಆಗಸ್ಟ್ 11 ರಂದು ಮತದಾನ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಆಗಸ್ಟ್ 1 ಕಡೆಯ ದಿನವಾಗಿದೆ.
ಶಾಸಕರಿಂದ ಮತದಾನ ನಡೆಯಲಿದ್ದು, ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆಯಿದ್ದು, ಬಿಜೆಪಿಗೆ ಸ್ಥಾನ ಲಭಿಸುವ ಸಾಧ್ಯತೆಗಳಿವೆ. ಆಗಸ್ಟ್ 16 ರ ಒಳಗೆ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಬೇಕಿತ್ತು.
ಇದನ್ನೂ ಓದಿ : ರಾಷ್ಟ್ರಪತಿ ಚುನಾವಣೆ: ಕೇರಳದಲ್ಲಿ ಮತ ಹಾಕಿದ ಯುಪಿ ಬಿಜೆಪಿ ಶಾಸಕ