Uchila: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಮಹೋತ್ಸವ, ರಥೋತ್ಸವ
Team Udayavani, Apr 8, 2023, 6:00 AM IST
ಪಡುಬಿದ್ರಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವಾರ್ಷಿಕ ಮಹೋತ್ಸವ – ಮಹಾಲಕ್ಷ್ಮೀ ರಥೋತ್ಸವವು ಕ್ಷೇತ್ರದ ತಂತ್ರಿ ವೇ| ಮೂ| ರಾಘವೇಂದ್ರ ತಂತ್ರಿ ಕುಕ್ಕಿಕಟ್ಟೆ ನೇತೃತ್ವದಲ್ಲಿ ಪ್ರಧಾನ ಅರ್ಚಕ ವೇ| ಮೂ| ರಾಘವೇಂದ್ರ ಉಪಾಧ್ಯಾಯರ ನೇತೃತ್ವದಲ್ಲಿ ಎ. 7ರಂದು ನಡೆಯಿತು.
ದ. ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಡಾ| ಜಿ. ಶಂಕರ್, ಶಾಲಿನಿ ಜಿ. ಶಂಕರ್, ಅಧ್ಯಕ್ಷ ಜಯ ಸಿ. ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ವಾಸುದೇವ ಸಾಲ್ಯಾನ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗುಂಡು ಅಮೀನ್, ಸಂಘದ ಪ್ರಧಾನ ಕಾರ್ಯದರ್ಶಿ ಸುಧಾಕರ್ ಕುಂದರ್, ಉಪಾಧ್ಯಕ್ಷ ಸುಭಾಶ್ಚಂದ್ರ ಕಾಂಚನ್, ಕೋಶಾಧಿಕಾರಿ ಭರತ್ ಕುಮಾರ್ ಎರ್ಮಾಳ್, ದ.ಕ. ಮೊಗವೀರ ಮಹಿಳಾ ಮಹಾಜನ ಸಂಘದ ಅಧ್ಯಕ್ಷೆ ಉಷಾರಾಣಿ, ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವ ವಿನಯಕುಮಾರ್ ಸೊರಕೆ, ದ.ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಎ. ಸುವರ್ಣ, ಗಣ್ಯರಾದ ಸುರೇಶ್ ಪಿ. ಶೆಟ್ಟಿ ಗುರ್ಮೆ, ಪ್ರಸಾದ್ರಾಜ್ ಕಾಂಚನ್, ಆನಂದ ಸಿ. ಕುಂದರ್, ಹರಿಯಪ್ಪ ಕೋಟ್ಯಾನ್, ವೈ. ಗಂಗಾಧರ ಸುವರ್ಣ, ಮೋಹನ್ ಬೇಂಗ್ರೆ, ಶಂಕರ ಸಾಲ್ಯಾನ್, ವಿನಯ ಕರ್ಕೇರ, ಮೋಹನ್ ಬಂಗೇರ ಕಾಪು, ಸರ್ವೋತ್ತಮ ಕುಂದರ್, ದಯಾನಂದ ಕೆ. ಸುವರ್ಣ, ಕೇಶವ ಕೋಟ್ಯಾನ್, ಸುಭಾಸ್ ಮೆಂಡನ್, ಉಮೇಶ್ ಟಿ. ಕರ್ಕೇರ, ಉದಯ ಕುಮಾರ್ ಹಟ್ಟಿಯಂಗಡಿ, ರಾಜೇಂದ್ರ ಸುವರ್ಣ, ಅನಿಲ್ ಕುಮಾರ್, ಶಶಿಕುಮಾರ್ ಬೇಂಗ್ರೆ, ಸತೀಶ್ ಕುಂದರ್, ಸತೀಶ್ ಅಮೀನ್ ಬಾಕೂìರು, ಸುಮಿತ್ರಾ ಕುಂದರ್, ಬೇಬಿ ಎಚ್. ಸಾಲಿಯಾನ್, ದೇಗುಲದ ಪ್ರಬಂಧಕ ಸತೀಶ್ ಅಮೀನ್ ಪಡುಕರೆ ಮುಂತಾದವರು ಪಾಲ್ಗೊಂಡಿದ್ದರು.