ಮತ್ತೆ 12 ಹೊಸ ಸೋಂಕಿತರು: ರಾಜ್ಯದಲ್ಲಿ 175ಕ್ಕೇರಿದ ಕೋವಿಡ್ 19 ಸೋಂಕಿತರ ಸಂಖ್ಯೆ
Team Udayavani, Apr 7, 2020, 1:41 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಇಂದು ಮತ್ತೆ ಹೆಚ್ಚಳವಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 12 ಮಂದಿಗೆ ಸೋಂಕು ತಾಗಿರುವುದು ದೃಢಪಟ್ಟಿದ್ದು, ರಾಜ್ಯದ ಸೋಂಕಿತರ ಸಂಖ್ಯೆ 175ಕ್ಕೇರಿದೆ.
ಬೆಂಗಳೂರು ನಗರದಲ್ಲಿ ಮೂವರಿಗೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಓರ್ವ, ಮಂಡ್ಯದ ಮೂವರಿಗೆ, ಕಲಬುರಗಿಯ ಇಬ್ಬರಿಗೆ, ಬಾಗಲಕೋಟೆಯ ಇಬ್ಬರಿಗೆ ಸೋಂಕು ತಗಲಿದೆ. ಇದರೊಂದಿಗೆ ಗದಗದ 80 ವರ್ಷದ ವೃದ್ಧೆಗೆ ಸೋಂಕು ತಗಲಿದೆ.
ಇವರಲ್ಲಿ ಬಾಗಲಕೋಟೆಯ ಮುಧೋಳದ ಓರ್ವ ಮತ್ತು ಬೆಂಗಳುರು ನಗರದ ಇಬ್ಬರು ಮತ್ತು ಗ್ರಾಮಾಂತರ ಜಿಲ್ಲೆಯ ಓರ್ವ ಹೀಗೆ ಒಟ್ಟು ನಾಲ್ಕು ಜನರು ದಿಲ್ಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ಭಾಗವಹಿಸಿದವರು ಎಂದು ಖಾತ್ರಿಯಾಗಿದೆ.
ಉಳಿದಂತೆ ಮಂಡ್ಯದಲ್ಲಿ ಮೂವರಿಗೆ ಕೋವಿಡ್-19 ಸೋಂಕು ತಗಲಿದ್ದು, ಇವರೆಲ್ಲರೂ ನಿಜಾಮುದ್ದೀನ್ ಮರ್ಕಜ್ ನಲ್ಲಿ ಭಾಗವಹಿಸಿದ್ದವರ ಸಂಪರ್ಕಕ್ಕೆ ಬಂದವರು ಎನ್ನಲಾಗಿದೆ.
ರಾಜ್ಯದಲ್ಲಿ ಇದುವರೆಗೆ ಒಟ್ಟು 175 ಜನರಿಗೆ ಸೋಂಕು ತಗುಲಿರುವುದು ಖಚಿತವಾಗಿದ್ದು, ಅದರಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇವರಲ್ಲಿ 25 ಜನ ಸೋಂಕಿತರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ