ಪಕ್ಷ ಬಿಟ್ಟು ಹೋದವರು ಬೇಕಾದರೆ ಮತ್ತೆ ಪಕ್ಷ ಸೇರಲು ಅರ್ಜಿ ಹಾಕಬಹುದು: ಡಿ ಕೆ ಶಿವಕುಮಾರ್
Team Udayavani, Jul 3, 2021, 1:30 PM IST
ಬೆಂಗಳೂರು: ಕಾಂಗ್ರೆಸ್ ಪಕ್ಷ, ಸಿದ್ಧಾಂತ, ನಾಯಕತ್ವ, ಕೆಲಸದ ಮೇಲೆ ನಂಬಿಕೆ ಇದೆಯೋ ಅಂತಹ ಯಾರೂ ಬೇಕಾದರೂ ಕಾಂಗ್ರೆಸ್ ಪಕ್ಷ ಸೇರಿಕೊಳ್ಳಬಹುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸೇರ್ಪಡೆ ಕುರಿತು ಆಪರೇಷನ್ ಕಮಲ ಕಾರ್ಯಾಚರಣೆಯಡಿ ಬಿಜೆಪಿಗೆ ಹೋದವರು ನಮ್ಮನ್ನು ಸಂಪರ್ಕಿಸಿಲ್ಲ. ಆದರೆ ಅವರೂ ಸೇರಿದಂತೆ ಯಾರು ಬೇಕಾದರೂ ಕಾಂಗ್ರೆಸ್ ಸೇರ್ಪಡೆಗೆ ಅರ್ಜಿ ಹಾಕಬಹುದು. ಸ್ಥಳೀಯ ನಾಯಕರು ಒಪ್ಪಿದರೆ ಅವರನ್ನು ಸೇರಿಸಿಕೊಳ್ಳಲಾಗುವುದು ಎಂದರು.
ಯಾರು ಬೇಕಾದರೂ ಪಕ್ಷಕ್ಕೆ ಬರಬಹುದು. ಈ ಬಗ್ಗೆ ಅರ್ಜಿ ಹಾಕಲಿ. ಸ್ಥಳೀಯ ನಾಯಕರು ಸೇರಿ ಎಲ್ಲರೂ ಪರಿಶೀಲಿಸಿ ಅವರ ಸೇರ್ಪಡೆ ಬಗ್ಗೆ ಕ್ರಮಕೈಗೊಳ್ಳುತ್ತೇವೆ. ಯಾವದೇ ಗೊಂದಲ ಆಗಬಾರದು ಅದಕ್ಕಾಗಿ ಎಲ್ಲರ ಒಪ್ಪಿಗೆಯೊಂದಿಗೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದರು.
ಇದನ್ನೂ ಓದಿ:ಉಚಿತ ಆನ್ ಲೈನ್ App ವಂಚನೆ ಜಾಲ, ಐದು ಲಕ್ಷಕ್ಕೂ ಅಧಿಕ ಮಂದಿಗೆ ಕೋಟ್ಯಂತರ ರೂ. ವಂಚನೆ!
ಬಿಜೆಪಿಗೆ ಸೇರ್ಪಡೆಯಾದ 17 ಜನರಲ್ಲಿ ಯಾರೂ ಅರ್ಜಿ ಹಾಕಿಲ್ಲ, ಬೇರೆಯವರು ಇಬ್ಬರು ಹಾಕಿದ್ದಾರೆ. ರಾಜಕೀಯದಲ್ಲಿ ಪಕ್ಷ ಬಿಟ್ಟು ಹೋಗುವುದು ಬರುವುದು ಸಾಮಾನ್ಯ. ಹಾಗಾಗಿ ಯಾರೂ ಬೇಕಾದರೂ ಅರ್ಜಿ ಹಾಕಲಿ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil