ಸುಶಾಂತ್ ಮತ್ತು ತಂದೆ ನಡುವೆ ವೈಮನಸ್ಸು? ರಾವತ್ ಆರೋಪಕ್ಕೆ ಸಹೋದರ ಆಕ್ರೋಶ
ಸುಶಾಂತ್ ಸಿಂಗ್ ತಂದೆ ಎರಡನೇ ವಿವಾಹವಾಗಿದ್ದಾರೆ ಎಂಬ ಆರೋಪ ಸಂಪೂರ್ಣ ಸುಳ್ಳು.
Team Udayavani, Aug 10, 2020, 3:12 PM IST
ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ತಂದೆ ಜತೆ ಉತ್ತಮ ಬಾಂಧವ್ಯ ಹೊಂದಿರಲಿಲ್ಲವಾಗಿತ್ತು. ಅದಕ್ಕೆ ಕಾರಣ ತಂದೆ ಎರಡನೇ ಮದುವೆಯಾಗಿದ್ದು ಸುಶಾಂತ್ ಅಸಮಧಾನಕ್ಕೆ ಕಾರಣವಾಗಿತ್ತು ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ನೀಡಿರುವ ಹೇಳಿಕೆಗೆ ಸುಶಾಂತ್ ಸಹೋದರ ನೀರಜ್ ಬಬ್ಲು ಆಕ್ರೋಶ ವ್ಯಕ್ತಪಡಿಸಿದ್ದು, ಕ್ಷಮೆಯಾಚಿಸುವಂತೆ ಒತ್ತಾಯಿಸಿದ್ದಾರೆ.
ಸುಶಾಂತ್ ಸಿಂಗ್ ತಂದೆ ಎರಡನೇ ವಿವಾಹವಾಗಿದ್ದಾರೆ ಎಂಬ ಆರೋಪ ಸಂಪೂರ್ಣ ಸುಳ್ಳು. ಒಂದು ವೇಳೆ ಶಿವಸೇನಾ ಮುಖಂಡ ರಾವತ್ ಸಾರ್ವಜನಿಕವಾಗಿ ಕ್ಷಮೆಯಾಚಿಸದಿದ್ದರೆ ಸುಶಾಂತ್ ಕುಟುಂಬ ಕಾನೂನು ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದೆ.
ಸುಶಾಂತ್ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಲು ಸಂಜಯ್ ರಾವತ್ ವಿರೋಧಿಸಿದ್ದರು. ತನಿಖೆಯಲ್ಲಿ ಸುಶಾಂತ್ ಮತ್ತು ತಂದೆ ಕೆಕೆ ಸಿಂಗ್ ನಡುವೆ ಉತ್ತಮ ಬಾಂಧವ್ಯ ಇಲ್ಲ ಎಂಬುದು ಬಹಿರಂಗವಾಗಿದೆ ಎಂದು ರಾವತ್ ದೂರಿದ್ದರು. ಸುಶಾಂತ್ ಎಷ್ಟು ಬಾರಿ ತಂದೆಯನ್ನು ಭೇಟಿಯಾಗಿದ್ದರು ಎಂಬುದಾಗಿ ಪ್ರಶ್ನಿಸಿದ್ದರು.
ಮುಂಬೈ ಪೊಲೀಸರು ಈಗಾಗಲೇ ತನಿಖೆ ನಡೆಸಿದ್ದರು. ಆದರೆ ಮುಂಬೈನಲ್ಲಿ ನಡೆದ ಘಟನೆ ಬಗ್ಗೆ ಪಾಟ್ನಾದಲ್ಲಿ ಎಫ್ ಐಆರ್ ದಾಖಲಿಸಿದ್ದರು. ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ 40 ದಿನದ ನಂತರ ಸುಶಾಂತ್ ಕುಟುಂಬ ಪ್ರಕರಣದ ಬಗ್ಗೆ ಎಚ್ಚೆತ್ತುಕೊಂಡಿತ್ತು ಎಂದು ರಾವತ್ ಕಿಡಿಕಾರಿದ್ದಾರೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?