ಕಡುಬಡತನದಲ್ಲಿರುವ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸೂಕ್ತ ಕ್ರಮ : ಸಿಎಂ

ಸಾಮಾಜಿಕ ನ್ಯಾಯದ ಜೊತೆ ಸಾಮಾಜಿಕ ಅಭಿವೃದ್ಧಿಯ ಗುರಿ

Team Udayavani, Feb 25, 2022, 3:46 PM IST

cm

ಬೆಂಗಳೂರು: ಅಲಸಂಖ್ಯಾತರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ಏರ್ಪಡಿಸುವ ಮೂಲಕ ಸಾಮಾಜಿಕ ನ್ಯಾಯದ ಜೊತೆ ಸಾಮಾಜಿಕ ಅಭಿವೃದ್ಧಿಯ ಗುರಿ ಸಾಧಿಸಲಾಗುವುದು. ಅಲ್ಪಸಂಖ್ಯಾತರ ಕೆಲ ಸಮುದಾಯಗಳು ಕಡುಬಡತನದಲಿದ್ದು, ಅವರ ಅಭಿವೃದ್ಧಿಗೆ ಸೂಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಶುಕ್ರವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೌಲಾನಾ ಅಬುಲ್ ಕಲಾಂ ಆಜಾದ್ ಭವನವನ್ನು ಉದ್ಘಾಟಿಸಿದ ನಂತರ ಮಾತನಾಡಿ,ಬದಲಾವಣೆಯ ಯುಗದಲ್ಲಿ ಬದಲಾವಣೆಯ ವೇಗವನ್ನು ಅಳವಡಿಸಿಕೊಂಡು ಅಲ್ಪಸಂಖ್ಯಾತರು ಗುರಿಯನ್ನು ಸಾಧಿಸಬೇಕು ಹಾಗೂ ಸಮಾಜದ ಮುಖ್ಯವಾಹಿನಿಗೆ ಬರಬೇಕು. 21 ನೇ ಶತಮಾನ ಜ್ಞಾನದ ಶತಮಾನವಾಗಿದ್ದು, ಜಗತ್ತು ಬದಲಾವಣೆಯ ರೀತಿಯನ್ನು ಗ್ರಹಿಸಿ , ಮಕ್ಕಳನ್ನು ಸಿದ್ಧಪಡಿಸಬೇಕು. ಈ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರ ಹಾಗೂ ಸಮಾಜ ಮಕ್ಕಳಿಗೆ ಸೂಕ್ತ ಅವಕಾಶಗಳನ್ನು ಹಾಗೂ ಸವಲತ್ತುಗಳನ್ನು ಕಲ್ಪಿಸಿ ಅಂತರರಾಷ್ಟ್ರೀಯ ಮಟ್ಟಕ್ಕೆ ಬೆಳೆಯಲು ಸಹಕರಿಸಬೇಕು ಎಂದು ತಿಳಿಸಿದರು.

ಅಲ್ಪಸಂಖ್ಯಾತರ ಮಕ್ಕಳಿಗೆ ಶಿಕ್ಷಣ, ವೃತ್ತಿ ಮಾರ್ಗದರ್ಶನ
ಅಲ್ಪಸಂಖ್ಯಾತ ಜನಾಂಗದ ಕಟ್ಟಕಡೆಯ ವ್ಯಕ್ತಿಯನ್ನು ಬಡವರನ್ನು ಗಮನದಲ್ಲಿರಿಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಎಲ್ಲ ಕಾರ್ಯಕ್ರಮಗಳಿರಬೇಕು. ಮಕ್ಕಳು ಮಾನವ ಶಕ್ತಿ. ಪುಸ್ತಕ ಹಿಡಿಯುವ ಚಿಕ್ಕಮಕ್ಕಳ ಕೈಯಲ್ಲಿ ಭಾರದ ಮೂಟೆಗಳಿವೆ. ಉದ್ಯೋಗ ಬಗ್ಗೆ ಮಕ್ಕಳಲ್ಲಿ ವಿಶೇಷ ಆಸಕ್ತಿ ಹೊಂದಿದ್ದು, ಹೆಚ್ಚಿನ ಮಾಹಿತಿ ದೊರೆಯಬೇಕು. ಪ್ರಮುಖವಾಗಿ 8,9,10 ತರಗತಿಯ ವಿದ್ಯಾರ್ಥಿಗಳಿಗೆ ವೃತ್ತಿಗಳ ಬಗ್ಗೆ ಮಾರ್ಗದರ್ಶನ ನೀಡುವ ಮೂಲಕ, ಮಕ್ಕಳಿಗೆ ಐಟಿ, ಇಂಜಿನಿಯರಿಂಗ್, ಐಟಿಐ, ಐಎಎಸ್, ಐಪಿಎಸ್ ಸೇರಿದಂತೆ ಮುಂತಾದ ಕ್ಷೇತ್ರದಲ್ಲಿನ ಉದ್ಯೋಗ ಅವಕಾಶಗಳ ಬಗ್ಗೆ ಮಾಹಿತಿ ನೀಡಬೇಕು. ಅಲ್ಪಸಂಖ್ಯಾತ ಮಕ್ಕಳ ಚಿಂತನೆ ಅವರ ಶಿಕ್ಷಣ ಹಾಗೂ ವೃತ್ತಿಯ ದಿಸೆಯಲ್ಲಿ ಇರಬೇಕು. ಅಲ್ಪಸಂಖ್ಯಾತರ ಹಾಗೂ ಬಡವರ ಮಕ್ಕಳು ಸೂಕ್ತ ವೃತ್ತಿ ಮಾರ್ಗದರ್ಶನದಿಂದ ಉತ್ತಮ ಶಿಕ್ಷಣ ಹಾಗೂ ಉದ್ಯೋಗ ಪಡೆದು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರಾಗುವ ಜೊತೆಗೆ ಅಲ್ಪಸಂಖ್ಯಾತರು ಸಮಾಜದ ಮುಖ್ಯವಾಹಿನಿಗೆ ಬರಲು ಸಹಕಾರಿಯಾಗುತ್ತದೆ ಎಂದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ
ಮಕ್ಕಳ ವಿದ್ಯಾರ್ಜನೆ ವಿಚಾರದಲ್ಲಿ ಬಹಳ ಮುಕ್ತ ವಾತಾವರಣ ನಿರ್ಮಿಸಲು ರಾಷ್ಟ್ರೀಯ ಶಿಕ್ಷಣ ನೀತಿ ಅವಕಾಶ ಕಲ್ಪಿಸುತ್ತದೆ. ಪ್ರಧಾನಿಯವರ ನೇತೃತ್ವದಲ್ಲಿ ನವಭಾರತದ ನಿರ್ಮಾಣಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಬಹಳಷ್ಟು ಅಧ್ಯಯನ ಮಾಡಿ ಜಾರಿಗೆ ತರಲಾಗಿದೆ. ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಲಾಭವನ್ನು ಅಲ್ಪಸಂಖ್ಯಾತರೂ ಪಡೆಯಬೇಕು ಎಂದರು.

ವಕ್ಫ್ ಆಸ್ತಿ ವಕ್ಫ್ ಸಮಾಜಕ್ಕೆ ಬಳಕೆ
ವಕ್ಫ್ ಆಸ್ತಿಯನ್ನು ಕಾಪಾಡಿಕೊಳ್ಳಲು ವಕ್ಫ್ ಮಂಡಳಿಗೆ ಅಧಿಕಾರ ನೀಡಲಾಗಿದೆ. ಇದರ ದುರುಪಯೋಗ ಆಗದಂತೆ ಕ್ರಮ ವಹಿಸಬೇಕು. ವಕ್ಫ್ ಸಮಾಜದ ಆಸ್ತಿಯನ್ನು ಸಮಾಜದ ಬಳಕೆಗಾಗಿ ಮೀಸಲಿಡಬೇಕು. ಈ ವಿಷಯದಲ್ಲಿ ಕಾನೂನುಬಾಹಿರವಾಗಿ ನಡೆದುಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.