ಡಿ. 31ರಂದು ಒತ್ತಾಯಪೂರ್ವಕವಾಗಿ ಬಂದ್ ಮಾಡಿದರೆ ಕಠಿಣ ಕ್ರಮ : ಗೃಹ ಸಚಿವರ ಎಚ್ಚರಿಕೆ
Team Udayavani, Dec 29, 2021, 1:10 PM IST
ಹುಬ್ಬಳ್ಳಿ : ಡಿಸೆಂಬರ್ 31 ರಂದು ಒತ್ತಾಯಪೂರ್ವಕವಾಗಿ ಬಂದ್ ನಡೆಸಿದರೆ ಅಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಗಾರರೊಂದಿಗೆ ಮಾತನಾಡಿದ ಅವರು ಎಂಇಎಸ್ ನಿಷೇಧಿಸುವ ಕುರಿತು ಸರಕಾರ ಸಮಾಲೋಚನೆ ನಡೆಸುತ್ತಿದೆ. ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯನ್ನು ಜನರೇ ತಿರಸ್ಕರಿಸಿದ್ದಾರೆ. ಜನರು ಸಂಕಷ್ಟದಲ್ಲಿರುವ ಕಾರಣ ಕನ್ನಡಪರ ಹೋರಾಟಗಾರರು ಬಂದ್ ಕೈಬಿಡಬೇಕು ಎಂದರು.
ರಾಜ್ಯದಲ್ಲಿ ಕೋವಿಡ್ ಪರಿಣಾಮ ಜನರು, ಸಣ್ಣ ವ್ಯಾಪಾರಿಗಳು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಕರ್ನಾಟಕ ಬಂದ್ ಮುಂದಾಗುವುದು ಸರಿಯಲ್ಲ. ಕೆಲ ಕನ್ನಡಪರ ಸಂಘಟನೆಗಳು ಬಂದ್ ಬೆಂಬಲ ನೀಡುವುದಿಲ್ಲ ಎಂದಿದ್ದಾರೆ. ಈ ಕುರಿತು ಇನ್ನೊಮ್ಮೆ ಚಿಂತನೆ ನಡೆಸಬೇಕು. ಅವರು ಬಂದರೆ ಮುಖ್ಯಮಂತ್ರಿ ಅಥವಾ ಸಂಬಂಧಪಟ್ಟವರು ಮಾತನಾಡಲಿದ್ದಾರೆ ಎಂದು ತಿಳಿಸಿದರು.
ಎಂಇಎಸ್ ಬ್ಯಾನ್ ಕುರಿತು ಸರಕಾರ ಸಮಾಲೋಚನೆ ನಡೆಸಿದೆ. ಇಂದೇ, ನಾಳೆಯೇ ಆಗಬೇಕೆಂದರೆ ಆಗೋದಿಲ್ಲ. ಮಹಾರಾಷ್ಟ್ರ ಸರಕಾರದೊಂದಿಗೆ ಸರಕಾರ ಮಾತುಕತೆ ಮಾಡುತ್ತಿದೆ. ಯಾವುದೇ ಕಾರಕ್ಕೂ ಬಲವಂತದಿಂದ ಬಂದ್ ಮಾಡುವುದು ಸರಿಯಲ್ಲ. ಅಂತಹವರ ಬಗ್ಗೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದನ್ನೂ ಓದಿ : ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆ 150 ಸ್ಥಾನ ಖಚಿತ : ಅರುಣ್ ಸಿಂಗ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ