ಪ್ರತಿ ಪಕ್ಷ ನಾಯಕರಿಗೆ ಕೊಡಗಿನಲ್ಲಿ ರಕ್ಷಣೆ ನೀಡಿಲ್ಲ ಎಂಬ ಆಪಾದನೆ ನಿರಾಧಾರ:ಆರಗ ಜ್ಞಾನೇಂದ್ರ
Team Udayavani, Sep 13, 2022, 6:47 PM IST
ಬೆಂಗಳೂರು: ಪ್ರತಿಪಕ್ಷ ನಾಯಕ ಶ್ರೀ ಸಿದ್ದರಾಮಯ್ಯ ನವರು ಇತ್ತೀಚೆಗೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪೊಲೀಸರು ರಕ್ಷಣೆ ನೀಡಲು ವಿಫಲರಾಗಿದ್ದರು ಎಂಬ ಆಪಾದನೆಯಲ್ಲಿ ಹುರುಳಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದ್ದಾರೆ.
ವಿಧಾನ ಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಪ್ರತಿಪಕ್ಷ ನಾಯಕ ಶ್ರೀ ಸಿದ್ದರಾಮಯ್ಯ ನವರು ಮಾತನಾಡುತ್ತಾ, ಕೊಡಗು ಭೇಟಿ ಸಮಯದಲ್ಲಿ ನನ್ನ ಮೇಲೆ ಕೆಲವು ಕಿಡಿಗೇಡಿಗಳು ಮೊಟ್ಟೆ ಹಾಗೂ ಕಲ್ಲು ಎಸೆತ ನಡೆಸಿದರಲ್ಲದೆ, ಕಪ್ಪು ಬಾವುಟ ಸಹ ಪ್ರದರ್ಶಿಸಿದರು. ಆದರೆ ಸ್ಥಳದಲ್ಲಿದ್ದ ಪೋಲೀಸರು ಯಾವುದೇ ರಕ್ಷಣೆಗೆ ಮುಂದಾಗದೆ, ನಿಷ್ಕ್ರಿಯ ರಾಗಿದ್ದರು ಎಂದು ಆಪಾದಿಸಿದರು.
ಇದನ್ನೂ ಓದಿ: ಅಪಘಾತದಲ್ಲಿ ಗಾಯಗೊಂಡವರನ್ನು ಜೆಸಿಬಿಯಲ್ಲಿ ಸಾಗಿಸಿದರು… ವಿಡಿಯೋ ವೈರಲ್
“ನಾನು ಕೊಡಗಿಗೆ ಮಳೆಯಿಂದಾಗಿ ಹಾನಿ ಗೊಳಗಾದ ಪ್ರದೇಶಗಳನ್ನು ವೀಕ್ಷಣೆ ಮಾಡಲು, ಕೊಡಗಿಗೆ ತೆರಳಿದ್ದೆ” ಎಂದು ಹೇಳಿದರು.
ಆದರೆ ಇದನ್ನು, ಬಲವಾಗಿ ನಿರಾಕರಿಸಿದ, ಗೃಹ ಸಚಿವರು, ಮೊಟ್ಟೆ ಎಸೆದ ಹಾಗೂ ಕಪ್ಪು ಬಾವುಟ ಪ್ರದರ್ಶಿಸಿ ದವರನ್ನು ಬಂಧಿಸಲಾಗಿದೆ ಹಾಗೂ ಕಾನೂನು ಕ್ರಮ ತೆಗೆದು ಕೊಳ್ಳಲಾಗಿದೆ, ಎಂದು ಮಾರುತ್ತರ ನೀಡಿದರು.
ಆ ಸಂಧರ್ಬದಲ್ಲಿ ಪೊಲೀಸರು ನಿಷ್ಕ್ರಿಯ ರಾಗಿರಲಿಲ್ಲ, ಹಾಗೂ ಸಿದ್ದರಾಮಯ್ಯ ನವರಿಗೆ, ಬೆಂಗಾವಾಗಿಲಿಗಿದ್ದು, ರಕ್ಷಣೆ ನೀಡಿದ್ದಾರೆ, ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ