ಆತ್ಮಹತ್ಯೆಗೂ ನನಗೂ ಸಂಬಂಧವಿಲ್ಲ: ಅರವಿಂದ ಲಿಂಬಾವಳಿ


Team Udayavani, Jan 3, 2023, 6:50 AM IST

ಆತ್ಮಹತ್ಯೆಗೂ ನನಗೂ ಸಂಬಂಧವಿಲ್ಲ: ಅರವಿಂದ ಲಿಂಬಾವಳಿ

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡಿರುವ ಪ್ರದೀಪ್‌ ನಮ್ಮ ಕಾರ್ಯಕರ್ತ. ಆತ ನನಗೆ ಪರಿಚಯಸ್ಥ ಅನ್ನುವುದೂ ಸತ್ಯ. ಆತನ ಅಗಲಿಕೆಯಿಂದ ನನಗೆ ದುಃಖವಾಗಿದೆ. ಸಹಾಯ ಮಾಡಲು ಹೋಗಿ ಫ‌ಜೀತಿಗೆ ಸಿಲುಕಿದ್ದೇನೆ. ಪ್ರದೀಪ್‌ ಸಾವಿಗೂ ನನಗೂ ಸಂಬಂಧವಿಲ್ಲ. ಪ್ರಕರಣದ ನಿಷ್ಪಕ್ಷಪಾತ ತನಿಖೆ ಆಗಲಿ ಎಂದು ನಾನೇ ಆಗ್ರಹಿಸುತ್ತೇನೆ. ಯಾವ ತನಿಖೆ ಬಂದರೂ ಎದುರಿಸುತ್ತೇನೆ ಎಂದು ಶಾಸಕ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರದೀಪ್‌ 2009ರ ಲೋಕಸಭಾ ಚುನಾವಣೆಯಲ್ಲಿ ನನ್ನ ಜತೆಗಿದ್ದ. ಸಾಮಾಜಿಕ ಜಾಲತಾಣ ವಿಭಾಗದ ಗುತ್ತಿಗೆ ಪಡೆದುಕೊಂಡಿದ್ದ. ಹಣಕಾಸು ವಿಚಾರದಲ್ಲಿ ಪ್ರದೀಪ್‌ ಹಾಗೂ ಗೋಪಿ, ಸುಬ್ಬಯ್ಯ ನಡುವೆ ಮಧ್ಯಸ್ಥಿಕೆ ವಹಿಸಿದ್ದೆ ಎಂಬುದು ಸುಳ್ಳು. ಪ್ರದೀಪ್‌ಗೆ ನೀಡಬೇಕಾಗಿದ್ದ ಹಣ ನೀಡುವಂತೆ ಗೋಪಿ, ಸುಬ್ಬಯ್ಯಗೆ ಎರಡು-ಮೂರು ಬಾರಿ ದೂರವಾಣಿ ಕರೆ ಮಾಡಿ ಒತ್ತಡ ಹಾಕಿದ್ದೆ. ಕಳೆದ ಜುಲೈ ತಿಂಗಳಲ್ಲಿ ಪ್ರದೀಪ್‌ ನನ್ನ ಕಚೇರಿಗೆ ಬಂದಿದ್ದರು. ಬಳಿಕ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರಲಿಲ್ಲ ಎಂದು ತಿಳಿಸಿದರು.

ಇತ್ತೀಚೆಗೆ ಕ್ಷೇತ್ರದಲ್ಲಿ ಜನತಾ ದರ್ಶನದಲ್ಲಿ ನನ್ನನ್ನು ಭೇಟಿ ಮಾಡಿದ್ದರು. ಈ ವೇಳೆ ಹಣ ಹೂಡಿಕೆ ಮಾಡಿದ್ದು, ಹಣ ವಾಪಸು ಬಂದಿಲ್ಲ ಎಂದು ಸಮಸ್ಯೆ ಹೇಳಿಕೊಂಡಿದ್ದರು. ತತ್‌ಕ್ಷಣವೇ ಅವರು ನೀಡಿದ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಬಂಡವಾಳ ಹೂಡಿದ್ದು ನಿಜವೇ ಎಂದು ಕೇಳಿದ್ದೆ. ಬಂಡವಾಳ ಹೂಡಿದ್ದರೆ ಅವರ ಹಣ ಚುಕ್ತಾ ಮಾಡಿ ಎಂದೂ ಸೂಚಿಸಿದ್ದೆ. 15 ದಿನಗಳ ಬಳಿಕ ಮತ್ತೆ ಬಂದಿದ್ದಾಗ ಸಂಬಂಧಿಸಿದವರಿಗೆ ಖಾರವಾಗಿಯೇ ಹೇಳಿ ತತ್‌ಕ್ಷಣವೇ ಸಮಸ್ಯೆ ಬಗೆಹರಿಯಬೇಕು ಎಂದು ಸೂಚಿಸಿ ಒತ್ತಡ ಹೇರಿದ್ದೆ. ಬಳಿಕ ಕಾರ್ಯಕ್ರಮ ಒಂದರಲ್ಲಿ ಸಿಕ್ಕಿ ಚುಕ್ತಾ ಆಗಿರುವುದಾಗಿ ಹೇಳಿ ಧನ್ಯವಾದವನ್ನೂ ತಿಳಿಸಿದ್ದರು. ಬಳಿಕ ಏನಾಯಿತು ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದರು.

ಪ್ರದೀಪ್‌ ನಿಮ್ಮ ಬಳಿ ಬಂದಾಗಲೇ ಪೊಲೀಸರಿಗೆ ಯಾಕೆ ದೂರು ಕೊಡಿಸಲಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಲಿಂಬಾವಳಿ, ಪ್ರದೀಪ್‌ ಎರಡು ಪ್ರಕರಣಗಳಲ್ಲಿ ನನ್ನ ಬಳಿಗೆ ಬಂದಿದ್ದರು. ಎರಡೂ ಪ್ರಕರಣಗಳ ಬಗ್ಗೆ ಪೊಲೀಸರಿಗೆ ಮಾಹಿತಿ ಇದೆ. ಇದಕ್ಕೂ ಮೊದಲು ಕೌಟುಂಬಿಕ ಸಮಸ್ಯೆ ಬಗ್ಗೆಯೂ ಪ್ರದೀಪ್‌ ನನ್ನ ಬಳಿ ಹೇಳಿಕೊಂಡಿದ್ದರು. ಪತ್ನಿ ಬೆಳ್ಳಂದೂರು ಠಾಣೆಯಲ್ಲಿ ದೂರು ನೀಡಿದ್ದಾಳೆ ಎಂದಿದ್ದರು. ಆಗ ನಾನೇ ಪೊಲೀಸರಿಗೆ ಕರೆ ಮಾಡಿ ಪತ್ನಿ ಹಾಗೂ ಅವರ ನಡುವೆ ಸಂಧಾನ ಮಾಡುವಂತೆ ಸೂಚಿಸಿದ್ದೆ ಎಂದರು.

6 ಮಂದಿ ವಿರುದ್ಧ ಪ್ರಕರಣ ದಾಖಲು
ಬೆಂಗಳೂರು: ನೆಟ್ಟಿಗೆರೆ ಗೇಟ್‌ ಬಳಿ ಕಾರಿನಲ್ಲಿ ಗುಂಡು ಹಾರಿಸಿಕೊಂಡು ಅಂಬಲಿಪುರ ನಿವಾಸಿ ಪ್ರದೀಪ್‌ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿ ಮೃತರ ಪತ್ನಿ ನಮಿತಾ ನೀಡಿದ ದೂರಿನ ಮೇರೆಗೆ ಕಗ್ಗಲೀಪುರ ಠಾಣೆಯಲ್ಲಿ ಶಾಸಕ ಅರವಿಂದ್‌ ಲಿಂಬಾವಳಿ, ಕೆ.ಗೋಪಿ, ಸೋಮಯ್ಯ, ರಮೇಶ್‌ ರೆಡ್ಡಿ, ಜಯರಾಮ್‌ ರೆಡ್ಡಿ, ರಾಘವ ಭಟ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.