ದೇವರ ವಿಗ್ರಹ ಕೆತ್ತುವ ಮುಸ್ಲಿಮರಿಗೂ ನಿಷೇಧ ಹೇರುತ್ತೀರಾ? : ಎಚ್ ಡಿಕೆ
ವರ್ಷದೊಡಕಿನ ದಿನ ಯಾರೂ ಹಲಾಲ್ ನೋಡುವುದಿಲ್ಲ
Team Udayavani, Mar 30, 2022, 12:49 PM IST
ಬೆಂಗಳೂರು : ಬಿಜೆಪಿ ವಿರುದ್ಧ ಮತ್ತೆ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ” ವರ್ಷತೊಡಕಿನ ದಿನ ಮಾಂಸ ಖರೀದಿಸುವಾಗ ಹಲಾಲ್ ಮಾಡಿದ್ದೋ, ಅಲ್ಲವೋ ಎಂದು ಯಾರೂ ನೋಡುವುದಿಲ್ಲ” ಎಂದಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದ ಕೆಲವೊಂದು ಕಡೆ ಇವರೇ ವಿವಾದ ಹುಟ್ಟು ಹಾಕಿದ್ದಾರೆ. ಉಳಿದ ಕಡೆ ಸೌಹಾರ್ದ ವಾತಾವರಣ ಇದೆ .ಹಲಾಲ್ ವಿಚಾರ ಈಗ ಪ್ರಸ್ತಾಪ ಮಾಡುತ್ತಾರೆ.ಹಲಾಲ್ ಮಾಡಿದ್ದೋ, ಅಲ್ಲವೋ ಎಂಬುದನ್ನು ವರ್ಷದೊಡಕಿನಲ್ಲಿ ಯಾರೂ ನೋಡುವುದಿಲ್ಲ ಎಂದು ಅಭಿಪ್ರಾಯ ಪಟ್ಟರು.
ಹಳ್ಳಿಯಲ್ಲಿ ಹಲವು ವರ್ಷಗಳಿಂದ ಸಂಪ್ರದಾಯ ಮಾಡಿಕೊಂಡು ಬಂದಿದ್ದಾರೆ ಅವರಿಗೆ ತೊಂದರೆ ಕೊಡಬೇಡಿ ಎಂದರು.
ನಾನು ದಲಿತ, ಲಿಂಗಾಯತ, ಒಕ್ಕಲಿಗ ಎಂದು ಹೇಳಿಲ್ಲ.ಮೀಸಲು ಕ್ಷೇತ್ರದಲ್ಲಿ ಗೆದ್ದ ಶಾಸಕರು ಎಷ್ಟು ಸೂಕ್ಷ್ಮವಾಗಿ ಕೆಲಸ ಮಾಡಬೇಕು ಎಂಬುದು ಗೊತ್ತಿದೆ. 1 ಸಾವಿರ ಅರ್ಚಕರು ಇಂದು ರಾಮನಗರಕ್ಕೆ ಬಂದಿದ್ದಾರೆ.ಲೋಕಕಲ್ಯಾಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ನಮ್ಮ ಹಿಂದೂ ಧರ್ಮ ಸರ್ವೋ ಜನೋ ಸುಖಿನೋಭವಂತು ಎಂದು ಹೇಳುತ್ತದೆ. ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ, ಇದನ್ನ ಹಾಳು ಮಾಡಬೇಡಿ ಎಂದರು.
ಕೋಲಾರದ ಶಿವಾರಪಟ್ಟಣದಲ್ಲಿ 35 ವರ್ಷದಿಂದ ಮುಸ್ಲಿಂ ಸಮುದಾಯದ ಬಂಧುಗಳು ವಿಗ್ರಹ ಕೆತ್ತುತಿದ್ದಾರೆ. ಇವರನ್ನ ಯಾವಾಗ ಬಹಿಷ್ಕಾರ ಡುತ್ತೀರಿ ? ಸಭಾಧ್ಯಕ್ಷರ ಪೀಠದಲ್ಲಿ ಕುಳಿತು ನಮ್ಮ ಆರ್ ಎಸ್ ಎಸ್ ಅಂತಾರೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?