ಇಮ್ರಾನ್‌ಗೆ ಸೇನಾ ಕಡಿವಾಣ! -ಸೇನಾ, ರಹಸ್ಯ ಕಾಯ್ದೆ ಬಳಕೆಗೆ Pak ಭದ್ರತಾ ಸಮಿತಿ ಅಸ್ತು


Team Udayavani, May 18, 2023, 7:02 AM IST

IMRAN KHAN

ಇಸ್ಲಾಮಾಬಾದ್‌: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ರನ್ನು ಹಣಿಯಲು ಪಾಕ್‌ ಸರ್ಕಾರ ತನ್ನ ಬತ್ತಳಿಕೆಯ ಎಲ್ಲ ಅಸ್ತ್ರಗಳನ್ನೂ ಪ್ರಯೋಗಿಸುತ್ತಿದ್ದು, ಇದೀಗ ಸೇನಾ ಮಹಾಸ್ತ್ರವನ್ನೇ ಪ್ರಯೋಗಿಸಲು ಮುಂದಾಗಿದೆ. ಖಾನ್‌ಗೆ ಬಹುದೊಡ್ಡ ಶಕ್ತಿಯಾಗಿರುವ ಅವರ ಬೆಂಬಲಿಗರನ್ನೇ ಮೊದಲಿಗೆ ಮಣಿಸಲು ಸೇನೆ ಯೋಜನೆ ರೂಪಿಸಿದ್ದು, ಅವರ ವಿರುದ್ಧ ಸೇನಾ ರಹಸ್ಯ ಕಾಯ್ದೆ 1952ರ ಅನ್ವಯ ಕೇಸು ದಾಖಲಿಸುವ ಪ್ರಸ್ತಾಪಕ್ಕೆ ಮಂಗಳವಾರ ಅನುಮೋದನೆಯನ್ನೂ ಪಡೆದಿದೆ.

ಇಮ್ರಾನ್‌ ಬಂಧನದ ಬಳಿಕ ಅವರ ಬೆಂಬಲಿಗರು ಸೇನಾನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದರಲ್ಲದೇ ಹಲವು ಮಿಲಿಟರಿ ಸೌಕರ್ಯಗಳನ್ನು ಧ್ವಂಸಗೊಳಿಸಿದ್ದರು. ಇದೀಗ ಪಾಕ್‌ ಸೇನೆ ಇದನ್ನೇ ಅಸ್ತ್ರವಾಗಿಸಿಕೊಂಡಿದೆ. ದಾಳಿ ನಡೆಸಿದವರ ವಿರುದ್ಧ ಸೇನಾ ರಹಸ್ಯಕಾಯ್ದೆ ಅನ್ವಯ ಕೇಸು ದಾಖಲಿಸಲು ಮೇ 9ರಂದು ಪ್ರಸ್ತಾಪಿಸಿತ್ತು. ಆ ಪ್ರಸ್ತಾವನೆಗೆ ಪಾಕ್‌ ರಾಷ್ಟ್ರೀಯ ಭದ್ರತಾ ಸಮಿತಿ (ಎನ್‌ಎಸ್‌) ಅನುಮತಿಸಿದೆ.

ಸರ್ಕಾರವೂ ಕೂಡ ದಾಳಿಕೋರರನ್ನು ಬಂಧಿಸಲು 72 ಗಂಟೆಗಳ ಗಡುವು ನೀಡಿದ್ದು, ಈ ಕಾಯ್ದೆ ಅನ್ವಯ ಬಂಧಿಸಿದ್ದೇ ಆದರೆ ಅಂಥವರಿಗೆ ಜೀವನಪೂರ ಜೈಲುವಾಸ ಕಟ್ಟಿಟ್ಟ ಬುತ್ತಿಯಾಂತಾಗುತ್ತದೆ. ಪ್ರಸ್ತಾವನೆಗೆ ಅನುಮೋದನೆ ದೊರೆಯುತ್ತಿದ್ದಂತೆ ಪಾಕ್‌ನಲ್ಲಿ ತೀವ್ರ ವಿರೋಧವೂ ವ್ಯಕ್ತವಾಗಿದ್ದು, ಮಾನವ ಹಕ್ಕು ಸಂಘಟನೆಗಳು ಕೂಡ ಅನುಮೋದನೆಗೆ ತಾಕೀತು ಮಾಡಿವೆ.

31ರವರೆಗೆ ಖಾನ್‌ಗೆ “ಹೈ” ಜಾಮೀನು
ಇತ್ತೀಚೆಗಷ್ಟೇ ಜಾಮೀನು ಪಡೆದು ನಿರಾಳರಾಗಿರುವ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್‌ಗೆ ಇಸ್ಲಾಮಾಬಾದ್‌ ಉಚ್ಚ ನ್ಯಾಯಾಲಯ ಮತ್ತೂಂದು ರಿಲೀಫ್ ನೀಡಿದ್ದು, ಖಾನ್‌ ವಿರುದ್ಧ ದಾಖಲಾಗಿರುವ ಪ್ರಕರಣಗಳಲ್ಲಿ ಅವರನ್ನು ಬಂಧಿಸದಂತೆ ನೀಡಿರುವ ತಡೆಯನ್ನು ಮೇ 31ರವರೆಗೆ ವಿಸ್ತರಿಸಿದೆ. ಖಾನ್‌ ವಿರುದ್ಧ ದಾಖಲಾಗಿರುವ ಎಲ್ಲ ಪ್ರಕರಣಗಳ ಮಾಹಿತಿ ಕೋರಿ, ಇಮ್ರಾನ್‌ ಅವರ ಪಕ್ಷ ಪಿಟಿಐ ಪರವಾಗಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಸ್ಲಾಮಾಬಾದ್‌ ಹೈಕೋರ್ಟ್‌ ವಿಚಾರಣೆ ನಡೆಸಿದೆ. ಈ ವೇಳೆ ಪಾಕಿಸ್ತಾನ ಸರ್ಕಾರ ಪರ ಹಾಜರಾಗಿದ್ದ ಅಟಾರ್ನಿ ಜನರಲ್‌ ಮಾಹಿತಿ ಸಲ್ಲಿಕೆಗೆ ಕಾಲವಕಾಶ ಕೋರಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಸರ್ಕಾರದ ಮನವಿಗೆ ಸಮ್ಮತಿಸಿದೆ. ಅಲ್ಲದೇ, ವಿಚಾರಣೆಯನ್ನು ಮೇ 31ಕ್ಕೆ ಮುಂದುವರಿಸಿದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.